AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ

ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ಬಿ ಜಯಚಂದ್ರ ರೈತರ ಹಗರಣದ ವಿಚಾರವಾಗಿ ರೈತರ ಜೊತೆ ಚರ್ಚೆ ಮಾಡಿದ್ದಾರೆ. ಆದರೆ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ.  

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ
ಕಾಂಗ್ರೆಸ್‌ನ ಹಿರಿಯ ಶಾಸಕ ಟಿ.ಬಿ.ಜಯಚಂದ್ರ
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:Jul 28, 2023 | 5:35 PM

ತುಮಕೂರು, ಜುಲೈ 28: ನೈಸ್ ಸಂಸ್ಥೆ ಅಕ್ರಮದ ಬಗ್ಗೆ ರಿಪೋರ್ಟ್ ನೀಡಿದ ಬೆನ್ನಲ್ಲೇ ರೈತರಂತೆ ಕರೆ ಮಾಡಿ ಜಿಲ್ಲೆಯ ಶಿರಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ (TB Jayachandra) ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ರೈತರ ಹಗರಣದ ವಿಚಾರವಾಗಿ ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಜಯಚಂದ್ರ, ಈ ವೇಳೆ ರೈತರ ಜೊತೆ ಚರ್ಚೆ ಮಾಡಿದ್ದರು. ಭೇಟಿ ಬಳಿಕ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿವೆ.

ಈ ಕುರಿತಾಗಿ ಬೆಂಗಳೂರಿನಲ್ಲಿ ಟಿವಿ9ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ. ನೈಸ್ ಸಂಸ್ಥೆಯ ಅಕ್ರಮದ ಬಗ್ಗೆ ನಾನು ರಿಪೋರ್ಟ್ ನೀಡಿದ್ದೆ. ಸಾವಿರಾರು ಎಕರೆ ಸರ್ಕಾರಿ, ಖಾಸಗಿ ರೈತರ ಜಮೀನು ಕಬಳಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶಾಸಕರ ಅಸಮಾಧಾನದ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಕಿಚಾಯಿಸಿದ ಬಿಜೆಪಿ

ರೈತರು ಆಹ್ವಾನಿಸಿದ್ದರಿಂದ ಬಿಡದಿಗೆ ಹೋಗಿದ್ದೆ. ಅವರನ್ನು ಭೇಟಿ ಮಾಡಿ ಬಂದ ಬಳಿಕ ಬೆದರಿಕೆ ಕರೆ ಶುರುವಾಗಿದೆ. ನೀವು ಈ ಕ್ಷೇತ್ರದಲ್ಲಿ ಎಲೆಕ್ಷನ್​ಗೆ ನಿಲ್ಲಬೇಕಾ. ನಿಮಗೂ ಇದಕ್ಕೂ ಏನು ಸಂಬಂಧ. ಯಾಕೆ ಬರ್ತಿರಾ ಅಂತ ಕೇಳುತ್ತಿದ್ದರು.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ನಾನು ಸಾರ್ವಜನಿಕ ಜೀವನದಲ್ಲಿ 45 ವರ್ಷಗಳಿಂದ ಇದ್ದೇನೆ. ಇದಕ್ಕೆಲ್ಲ ಹೆದರಲ್ಲ ಎಂದು ಹೇಳಿದ್ದೇನೆ ಎಂದರು. ಕೂಡಲೇ ಸರ್ಕಾರ ರೈತರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಈ ರಿಪೋರ್ಟ್ ಅಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Fri, 28 July 23

ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ