AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ

ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ಬಿ ಜಯಚಂದ್ರ ರೈತರ ಹಗರಣದ ವಿಚಾರವಾಗಿ ರೈತರ ಜೊತೆ ಚರ್ಚೆ ಮಾಡಿದ್ದಾರೆ. ಆದರೆ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ.  

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ
ಕಾಂಗ್ರೆಸ್‌ನ ಹಿರಿಯ ಶಾಸಕ ಟಿ.ಬಿ.ಜಯಚಂದ್ರ
Sunil MH
| Edited By: |

Updated on:Jul 28, 2023 | 5:35 PM

Share

ತುಮಕೂರು, ಜುಲೈ 28: ನೈಸ್ ಸಂಸ್ಥೆ ಅಕ್ರಮದ ಬಗ್ಗೆ ರಿಪೋರ್ಟ್ ನೀಡಿದ ಬೆನ್ನಲ್ಲೇ ರೈತರಂತೆ ಕರೆ ಮಾಡಿ ಜಿಲ್ಲೆಯ ಶಿರಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ (TB Jayachandra) ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ರೈತರ ಹಗರಣದ ವಿಚಾರವಾಗಿ ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಜಯಚಂದ್ರ, ಈ ವೇಳೆ ರೈತರ ಜೊತೆ ಚರ್ಚೆ ಮಾಡಿದ್ದರು. ಭೇಟಿ ಬಳಿಕ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿವೆ.

ಈ ಕುರಿತಾಗಿ ಬೆಂಗಳೂರಿನಲ್ಲಿ ಟಿವಿ9ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ. ನೈಸ್ ಸಂಸ್ಥೆಯ ಅಕ್ರಮದ ಬಗ್ಗೆ ನಾನು ರಿಪೋರ್ಟ್ ನೀಡಿದ್ದೆ. ಸಾವಿರಾರು ಎಕರೆ ಸರ್ಕಾರಿ, ಖಾಸಗಿ ರೈತರ ಜಮೀನು ಕಬಳಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶಾಸಕರ ಅಸಮಾಧಾನದ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಕಿಚಾಯಿಸಿದ ಬಿಜೆಪಿ

ರೈತರು ಆಹ್ವಾನಿಸಿದ್ದರಿಂದ ಬಿಡದಿಗೆ ಹೋಗಿದ್ದೆ. ಅವರನ್ನು ಭೇಟಿ ಮಾಡಿ ಬಂದ ಬಳಿಕ ಬೆದರಿಕೆ ಕರೆ ಶುರುವಾಗಿದೆ. ನೀವು ಈ ಕ್ಷೇತ್ರದಲ್ಲಿ ಎಲೆಕ್ಷನ್​ಗೆ ನಿಲ್ಲಬೇಕಾ. ನಿಮಗೂ ಇದಕ್ಕೂ ಏನು ಸಂಬಂಧ. ಯಾಕೆ ಬರ್ತಿರಾ ಅಂತ ಕೇಳುತ್ತಿದ್ದರು.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ನಾನು ಸಾರ್ವಜನಿಕ ಜೀವನದಲ್ಲಿ 45 ವರ್ಷಗಳಿಂದ ಇದ್ದೇನೆ. ಇದಕ್ಕೆಲ್ಲ ಹೆದರಲ್ಲ ಎಂದು ಹೇಳಿದ್ದೇನೆ ಎಂದರು. ಕೂಡಲೇ ಸರ್ಕಾರ ರೈತರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಈ ರಿಪೋರ್ಟ್ ಅಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Fri, 28 July 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ