AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನಕ್ಕೆ ಪೆಟ್ರೋಲ್ ಬೀಳಲ್ಲ, ಆದ್ರೆ ಮೀಟರ್ ರನ್ನಿಂಗ್ ಆಗುತ್ತೆ; ತುಮಕೂರು ಬಂಕ್​ನ ಮೋಸದಾಟ ಬಯಲು

ಪೆಟ್ರೋಲ್ ಹಾಕದೆ ಏಕಾಏಕಿ ಮೀಟರ್ ರನ್ನಿಂಗ್ ಆಗಿದೆ. ಪೆಟ್ರೋಲ್ ಗನ್ ಕೈಯಲ್ಲಿ ಇದ್ದರೂ ಕೂಡ 6.30 ಪೈಸೆವರೆಗೂ ಮೀಟರ್ ರನ್ ಆಗಿದೆ. ಗ್ರಾಹಕರೊಬ್ಬರು ಪೆಟ್ರೋಲ್ ಹಾಕಿಸಿಕೊಳ್ಳಲು ಹೋದಾಗ ಈ ಮೋಸದಾಟ ಬೆಳಕಿಗೆ ಬಂದಿದೆ.

ವಾಹನಕ್ಕೆ ಪೆಟ್ರೋಲ್ ಬೀಳಲ್ಲ, ಆದ್ರೆ ಮೀಟರ್ ರನ್ನಿಂಗ್ ಆಗುತ್ತೆ; ತುಮಕೂರು ಬಂಕ್​ನ ಮೋಸದಾಟ ಬಯಲು
ಮೀಟರ್ ಓಡುತ್ತಿರುವುದು, ಕೈಯಲ್ಲಿ ಪೆಟ್ರೋಲ್ ಗನ್ ಇದೆ
Follow us
TV9 Web
| Updated By: sandhya thejappa

Updated on:Sep 14, 2021 | 9:37 AM

ತುಮಕೂರು: ಒಂದು ಕಡೆ ಪೆಟ್ರೋಲ್, ಡೀಸೆಲ್ ದರ ಗಗನಕ್ಕೆ ಏರುತ್ತಿದೆ. ಕೊರೊನಾ ಸಂಕಷ್ಟದ ನಡುವೆ ಪೆಟ್ರೋಲ್ ಹಾಕಿಸಿಕೊಳ್ಳಲು ಜನಸಾಮಾನ್ಯರಿಗೆ ಕಷ್ಟವಾಗುತ್ತಿದೆ. ಹೀಗಿರುವಾಗ ಜಿಲ್ಲೆಯ ಪೆಟ್ರೋಲ್ ಬಂಕ್ (Petrol Bunk) ಒಂದರಲ್ಲಿ ವಾಹನಗಳಿಗೆ ಪೆಟ್ರೋಲ್ ಹಾಕದೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವಾಹನಕ್ಕೆ ಪೆಟ್ರೋಲ್ ಬೀಳದೆ ದರ ತೋರಿಸುವ ಮೋಸ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ.

ಈ ಘಟನೆ ತಡರಾತ್ರಿ ನಡೆದಿದ್ದು, ಪೆಟ್ರೋಲ್ ಹಾಕದೆ ಏಕಾಏಕಿ ಮೀಟರ್ ರನ್ನಿಂಗ್ ಆಗಿದೆ. ಪೆಟ್ರೋಲ್ ಗನ್ ಕೈಯಲ್ಲಿ ಇದ್ದರೂ ಕೂಡ 6.30 ಪೈಸೆವರೆಗೂ ಮೀಟರ್ ರನ್ ಆಗಿದೆ. ಗ್ರಾಹಕರೊಬ್ಬರು ಪೆಟ್ರೋಲ್ ಹಾಕಿಸಿಕೊಳ್ಳಲು ಹೋದಾಗ ಈ ಮೋಸದಾಟ ಬೆಳಕಿಗೆ ಬಂದಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿ ವಿರುದ್ಧ ಗ್ರಾಹಕ ಆಕ್ರೋಶ ವ್ಯಕ್ತಪಡಿಸಿದ್ದು, ಪೆಟ್ರೋಲ್ ಹಾಕದೇ ಮೀಟರ್ ರನ್ ಆಗಿದೆ ಅಂತಾ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಬಂಕ್ನ ಮೋಸದಾಟವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಪೆಟ್ರೋಲ್ ಬಂಕ್ ಸಿಬ್ಬಂದಿ ಮತ್ತೆ ಜಿರೋ ಮಾಡಿ ಪೆಟ್ರೋಲ್ ಹಾಕುತ್ತೀವಿ ಎಂದು ಹೇಳಿದ್ದಾರೆ. ಅಂದಿದ್ದಾರೆ. ಇಷ್ಟವಿದ್ದರೇ ಹಾಕಿಸಿಕೊಳ್ಳಿ, ಇಲ್ಲಾ ಬೇರೆ ಕಡೆ ಹೋಗಿ. ಇದೆಲ್ಲಾ ಹಾಗೇ ಆಗಿರುತ್ತೆ ಅಂತಾ ಉಡಾಫೆ ಉತ್ತರ ನೀಡಿದ್ದಾರೆ. ತೈಲ ಬೆಲೆ ಏರಿಕೆ ನಡುವೆ ಈ ರೀತಿ ಮೋಸ ಮಾಡುವುದು ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಹಾಕಿದಂತಾಗುತ್ತದೆ.

ಇದನ್ನೂ ಓದಿ

ಅಂತ್ಯಸಂಸ್ಕಾರಕ್ಕೆ ಹೋಗುವಾಗಲೇ ಬಯಲಾಯ್ತು ಮರ್ಡರ್‌ ಮಿಸ್ಟ್ರಿ, ತಂದೆ ಅಂತ್ಯಕ್ರಿಯೆಗೆ ಸಿದ್ದನಾಗಿದ್ದ ಪುತ್ರ ಅರೆಸ್ಟ್‌

ಕಾನೂನು ಪಾಲಿಸುವವರಿಂದಲೇ ಕಾನೂನು ಉಲ್ಲಂಘನೆ! ಅನುಮತಿ ಪಡೆಯದೆ ಸರ್ಕಾರಿ ನಿವಾಸದಲ್ಲಿದ್ದ ಮರಗಳನ್ನು ಕಡಿದ ಮಂಡ್ಯ ಎಸ್​ಪಿ

(Money earned without putting petrol in Tumkur bunk)

Published On - 9:36 am, Tue, 14 September 21

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ