AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gubbi News: ಗುಬ್ಬಿ ಕ್ಷೇತ್ರದಲ್ಲಿ ಒಂದೇ ದಿನ 100ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರಿಂದ ರಾಜೀನಾಮೆ

SR Srinivas: ಗುಬ್ಬಿಯಲ್ಲಿ 50 ಸಾವಿರಕ್ಕೂ ಹೆಚ್ಚು ಜಡಿಎಸ್ ಕಾರ್ಯಕರ್ತರಿದ್ದಾರೆ. ರಾಜೀನಾಮೆ ಪರ್ವ ಮುಂದುವರಿದರೆ ಜೆಡಿಎಸ್​ಗೆ ತಲೆನೋವಾಗಬಹುದು ಎಂದು ಹೇಳಲಾಗಿದೆ.

Gubbi News: ಗುಬ್ಬಿ ಕ್ಷೇತ್ರದಲ್ಲಿ ಒಂದೇ ದಿನ 100ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರಿಂದ ರಾಜೀನಾಮೆ
ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಮತ್ತು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 25, 2022 | 10:22 AM

Share

ತುಮಕೂರು: ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ ಜೆಡಿಎಸ್​ನ 100ಕ್ಕೂ ಹೆಚ್ಚು ಕಾರ್ಯಕರ್ತರು (JDS Workers) ರಾಜೀನಾಮೆ ನೀಡಿದ್ದಾರೆ. ಬಿದರೆ ಗ್ರಾಮದ ಕಾರ್ಯಕರ್ತರ ಸಂಖ್ಯೆಯೇ ಹೆಚ್ಚಿನ ಸಂಖ್ಯೆಯಲ್ಲಿದೆ. ಹಾಲಿ ಶಾಸಕ ಎಸ್.ಆರ್.ಶ್ರೀನಿವಾಸ್​​ಗೆ (SR Srinivas) ಪಕ್ಷದಿಂದ ಅನ್ಯಾಯವಾಗಿದೆ ಎಂದು ಖಂಡಿಸಿರುವ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜೀನಾಮೆ ನೀಡುವವರ ಸಂಖ್ಯೆ ಹೆಚ್ಚಾಗಬಹುದು ಎಂದು ವಿಶ್ಲೇಷಿಸಲಾಗಿದ್ದು, ಇದು ಮುಂದುವರಿದರೆ ಜೆಡಿಎಸ್​ಗೆ ತಲೆನೋವಾಗಬಹುದು ಎಂದು ಹೇಳಲಾಗಿದೆ. ಬೂತ್ ಸಮಿತಿ ಸೇರಿ ಹಲವು ಘಟಕಗಳಿಗೆ ರಾಜೀನಾಮೆ ಕೊಡುತ್ತಿರುವ ಕಾರ್ಯಕರ್ತರು ‘ವಾಸಣ್ಣ ಅಭಿಮಾನಿ ಬಳಗ’ ಸೇರುತ್ತಿದ್ದಾರೆ. ಗುಬ್ಬಿಯಲ್ಲಿ 50 ಸಾವಿರಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರಿದ್ದು ಸಂಘಟನೆಯೂ ಬಲಿಷ್ಠವಾಗಿದೆ.

ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಎಚ್​.ಡಿ.ಕುಮಾರಸ್ವಾಮಿ ನಡುವೆ ಸಣ್ಣಮಟ್ಟದಲ್ಲಿ ಹೊಗೆಯಾಡಿದ ಭಿನ್ನಮತ ನಂತರದ ದಿನಗಳಲ್ಲಿ ದೊಡ್ಡದಾಗಿ ಬೆಳೆಯಿತು. ಗುಬ್ಬಿ ಕ್ಷೇತ್ರದಲ್ಲಿ ಬೇರೊಬ್ಬರನ್ನು ಅಭ್ಯರ್ಥಿಗಾಗಿ ನಿಲ್ಲಿಸಲು ಎಚ್​.ಡಿ.ಕುಮಾರಸ್ವಾಮಿ ಮುಂದಾದ ನಂತರ ಪರಿಸ್ಥಿತಿ ಮತ್ತಷ್ಟು ವಿಷಮಿಸಿತು. ರಾಜ್ಯಸಭೆ ಚುನಾವಣೆ ವೇಳೆ ಶ್ರೀನಿವಾಸ್ ಅಡ್ಡಮತ ಹಾಕಿದಾಗಲೂ ಇಬ್ಬರ ನಡುವೆ ಒಂದುಸುತ್ತಿನ ವಾಗ್ವಾದ ನಡೆದಿತ್ತು.

ತಿಥಿ ಕಾರ್ಡ್ ತಯಾರಿಸಿ ವಿಕೃತಿ

ಕಳೆದ ಜೂನ್ ತಿಂಗಳಲ್ಲಿ ರಾಜ್ಯಸಭೆ ಚುನಾವಣೆಯ ನಂತರ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ತಿಥಿ ಕಾಡ್೯ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಪ್ರಚಂಡ ಭೈರವ ಹೆಸರಿನಲ್ಲಿ ಸಿದ್ಧವಾಗಿದ್ದ ಈ ಪೋಸ್ಟ್​ ಜೆಡಿಎಸ್​ನ ವಾಟ್ಸಾಪ್​ ಗ್ರೂಪ್​ಗಳಲ್ಲಿ ಹರಿದಾಡಿತ್ತು. ‘ಜೂನ್​ 10ರಂದು ಎಸ್​.ಆರ್.ಶ್ರೀನಿವಾಸ್ ನಿಧನರಾಗಿದ್ದಾರೆ, ಜೂನ್​ 21ರಂದು ಸ್ವಕ್ಷೇತ್ರ ಗುಬ್ಬಿಯಲ್ಲಿ ಕೈಲಾಸ ಸಮಾರಾಧಾನೆ ನಡೆಯಲಿದೆ’ ಎಂದು ಕಾರ್ಡ್​ನಲ್ಲಿ ಬರೆಯಲಾಗಿತ್ತು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್ ಅಭಿಮಾನಿಗಳು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೂ ಶ್ರದ್ಧಾಂಜಲಿ ಕಾರ್ಡ್ ಸಿದ್ಧಪಡಿಸಿದ್ದರು. ಕುಮಾರಸ್ವಾಮಿ ತಿಥಿ ಪೋಸ್ಟ್​ಗಳೂ ವೈರಲ್ ಆಗಿದ್ದವು.

ಗುಬ್ಬಿ ಶಾಸಕ ಎಸ್​.ಆರ್.ಶ್ರೀನಿವಾಸ್ ಹಲವು ಬಾರಿ ಕಾಂಗ್ರೆಸ್​ನ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಖಾಸಗಿ ಮತ್ತು ಸಾರ್ವಜನಿಕವಾಗಿ ಇಬ್ಬರೂ ನಾಯಕರೂ ಭೇಟಿಯಾಗಿದ್ದ ವಿಚಾರ ಹಲವು ವಿಶ್ಲೇಷಣೆಗಳಿಗೆ ಕಾರಣವಾಗಿತ್ತು. ಶ್ರೀನಿವಾಸ್ ಅವರನ್ನು ಸ್ವತಃ ಸಿದ್ದರಾಮಯ್ಯ ಬಹಿರಂಗವಾಗಿ ಕಾಂಗ್ರೆಸ್​ಗೆ ಆಹ್ವಾನಿಸಿದ್ದರು. ಆದರೆ ಗುಬ್ಬಿಯ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರು ಶ್ರೀವಾಸ್ ಸೇರ್ಪಡೆಯನ್ನು ವಿರೋಧಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ದೊಡ್ಡಮಟ್ಟದಲ್ಲಿ ಬೆಳೆದರೆ ಕಷ್ಟ. ಗುಬ್ಬಿಯಲ್ಲಿ ಜೆಡಿಎಸ್ ಮತ್ತು ಎಸ್​.ಆರ್.ಶ್ರೀನಿವಾಸ್ ವಿರುದ್ಧ ಈವರೆಗೆ ರಾಜಕಾರಣ ಮಾಡಿಕೊಂಡು ಬಂದವರಿಗೆ ಅವರ ಕಾಂಗ್ರೆಸ್ ಸೇರ್ಪಡೆ ಇಷ್ಟವಾಗುತ್ತಿಲ್ಲ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್