AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಆಧಾರಿತ ಮೀಸಲಾತಿ ನಿಲ್ಲಿಸಿ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಆಧರಿಸಿ ಮೀಸಲಾತಿ ಒದಗಿಸಿ: ಮುಖ್ಯಮಂತ್ರಿ ಚಂದ್ರು ಒತ್ತಾಯ

ಈಗಾಗಲೇ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಗಣತಿಯ ವರದಿ ಮಂಡನೆ ಆಗಲಿ. ಅದರ ಆಧಾರದ ಮೇಲೆ ಸರ್ಕಾರ ಮೀಸಲಾತಿ ನೀಡಬೇಕು ಎಂದು ಅವರು ಆಗ್ರಹಿಸಿದರು.

ಜಾತಿ ಆಧಾರಿತ ಮೀಸಲಾತಿ ನಿಲ್ಲಿಸಿ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಆಧರಿಸಿ ಮೀಸಲಾತಿ ಒದಗಿಸಿ: ಮುಖ್ಯಮಂತ್ರಿ ಚಂದ್ರು ಒತ್ತಾಯ
ಮುಖ್ಯಮಂತ್ರಿ ಚಂದ್ರು
TV9 Web
| Updated By: sandhya thejappa|

Updated on:Aug 22, 2021 | 10:27 AM

Share

ತುಮಕೂರು: 2 ಎ ಗೆ ಯಾರು ಬರಬಾರದು. ಬಂದರೆ ಸದ್ಯ ಇರುವವರಿಗೆ ತೊಂದರೆ ಯಾಗಲಿದೆ ಅಂತಾ ಮುಖ್ಯ ಮಂತ್ರಿ ಚಂದ್ರು ತಿಳಿಸಿದ್ದಾರೆ. ಸರ್ಕಾರ ಕೂಡ 2ಎ ಯಾರನ್ನೂ ಸೇರಿಸಬಾರದು. ಸದ್ಯ ಇರೋರಿಗೆ ಸಮರ್ಪಕವಾಗಿ ಮೀಸಲಾತಿ ಸಿಗುತ್ತಿಲ್ಲ. ಹೀಗಾಗಿ ಮತ್ತಷ್ಟು ಬಂದರೆ ತೊಂದರೆ ಯಾಗಲಿದೆ ಅಂತಾ ಹೇಳಿದ್ದಾರೆ. ಅಲ್ಲದೇ ಎಲ್ಲರಿಗೂ ಸಮಸ್ಯೆ ಇರುತ್ತೆ ಅಂತವರನ್ನ ಹುಡುಕಿ ಬೇಕಾದರೆ ವಿಶೇಷ ಅನುದಾನ ನೀಡಲಿ. ನಿಗಮ ಮಾಡಲಿ ಇದನ್ನ ಹೊರತುಪಡಿಸಿ 2 ಎ ಸೇರಿಸಬಾರದು ಅಂತಾ ಒತ್ತಾಯಿಸಿದ್ದಾರೆ.ಅಲ್ಲದೇ ಕಾಂತರಾಜ್ ವರದಿಯನ್ನ ಜಾರಿಗೊಳಿಸಬೇಕು. ಮೀಸಲಾತಿಗೆ ಅವೈಜ್ಞಾನಿಕವಾಗಿ ಸೇರ್ಪಡೆಯನ್ನ ನಿಲ್ಲಿಸಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮೀಸಲಾತಿ ನೀಡಬೇಕು ಅಂತಾ ಒತ್ತಾಯಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕನಾಥ್ , ‘ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ರಾಜ್ಯಾದ್ಯಂತ ಸಭೆ ಮಾಡುತಿದ್ದೇವೆ. ಇದೀಗ ತುಮಕೂರಿನಲ್ಲಿ ಎರಡನೇ ಸಭೆ ನಡೆದಿದೆ. 2ಎ ಗೆ ಯಾವುದೇ ಬಲಿಷ್ಠ ಸಮುದಾಯ ಬರಬಾರದು ಎಂಬುದು ನಮ್ಮ ಒಕ್ಕೊರಲ ಒತ್ತಾಯವಾಗಿದೆ. ಇದರಿಂದ102 ಜಾತಿ ಮತ್ತು ಪ್ರವರ್ಗ 1 ರಲ್ಲಿ 95 ಜಾತಿಗಳಿಗೆ ಅನ್ಯಾಯ ಆಗಲಿದೆ. ಅತಿ ಹಿಂದುಳಿದ ಅನೇಕ ಅಸಹಾಯಕ ಸಮುದಾಯಗಳಿಗೆ ಇನ್ನೂ ಕೂಡ 1% ಮೀಸಲಾತಿ ತಲುಪಿಲ್ಲ. ದೊಡ್ಡ ಸಮುದಾಯ ಬಂದು ಇಲ್ಲಿ ಸೇರಿಕೊಂಡರೆ ಈ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಶಾಸನ ಸಭೆ ಮತ್ತು ಲೋಕ‌ಸಭೆಯಲ್ಲಿ ಕೇವಲ ಎಸ್ಸಿ ಎಸ್ಟಿಗೆ ಮಾತ್ರ ಮೀಸಲಾತಿ ಕೊಟ್ಟಿದ್ದಾರೆ. ಹಿಂದುಳಿದ ವರ್ಗಗಳಿಗೂ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮೀಸಲಾತಿ ಕೊಡಬೇಕು ಎಂಬ ಒತ್ತಾಯ ಇದೆ. ಪಂಚಮ ಸಾಲಿಗರಿಗೆ 2ಎ ಮೀಸಲಾತಿ ಕೊಡಬಾರದು ಎಂದು ನಾವು ಆಗ್ರಹಿಸುತ್ತೇವೆ. ಇದರಿಂದ ಹಿಂದುಳಿದ ಅಸಹಾಯ ಕುಟುಂಬದವರಿಗೆ ಅನ್ಯಾಯವಾಗುತ್ತದೆ. 2015 ರಲ್ಲೇ ಜಾತಿ ಗಣತಿ ವರದಿಯಾಗಿತ್ತು. ಅಂದಿನ ಕಾಂಗ್ರೆಸ್ ಸರ್ಕಾರ ಆಗಲಿ ಇಂದಿನ ಬಿಜೆಪಿ ಸರ್ಕಾರವಾಗಲಿ ಅದನ್ನು ಬಹಿರಂಗ ಪಡಿಸಿಲ್ಲ. ಎಂದು ಶೀಘ್ರ ವರದಿ ಮಂಡಿಸುವಂತೆ ಸಭೆಯಲ್ಲಿ ಒತ್ತಾಯ ಮಾಡಲಾಗಿದೆ’ ಎಂದು ತಿಳಿಸಿದರು.

ಇದನ್ನೂ ಓದಿ: 

Tv9 Kannada Digital Exclusive: ತಾಲಿಬಾನಿಗಳು ನಮ್ಮ ಟಿವಿಯನ್ನು ಕಿತ್ತುಕೊಂಡರು: ಅಫ್ಘಾನಿಸ್ತಾನದಲ್ಲಿ ಕನ್ನಡ ನಾಡಿನ ಯೋಧರ ಕಥೆ

ಪ್ರಬಲ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಡಿ; ಜಾತಿ ಗಣತಿ ಆಧರಿಸಿ ಬಜೆಟ್ ಮಂಡಿಸಿ: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮನವಿ

(Mukhyamantri Chandru urges stop caste based reservation but give economic stage based reservation)

Published On - 6:40 pm, Sat, 21 August 21

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ