AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿಂದಲೇ ಹೆಂಡತಿಯ ಕೊಲೆ? 20 ದಿನಗಳ ನಂತರ ಶವ ಹೊರತೆಗೆದು ಶವಪರೀಕ್ಷೆ

ಅನುಮಾನದ ಪಿಶಾಚಿಯಾಗಿದ್ದ ಗಂಡ ಚೇತನ್ ಮದುವೆಯಾಗಿದ್ದಾಗಿನಿಂದಲೂ ಹೆಂಡತಿಯನ್ನ ಮನೆಯಲ್ಲೇ ಬಂಧಿಸಿಟ್ಟಿದ್ದ. ಆಗಾಗ ವರದಕ್ಷಿಣೆ ಕಿರುಕುಳವನ್ನ ಕೂಡ ನೀಡ್ತಿದ್ದ ಅಂತಾ ಪೋಷಕರು ಆರೋಪ ಮಾಡಿದ್ದಾರೆ. ಹೀಗಾಗಿ ಅವನೇ ಹೆಂಡತಿಯನ್ನ ಕೊಲೆ ಮಾಡಿ, ಮಣ್ಣು ಮಾಡಿದ್ದಾನೆ ಅಂತಾ ವರ್ಷಿಣಿ ಹೆತ್ತವರು ಆರೋಪಿಸುತ್ತಿದ್ದಾರೆ. ಹೆತ್ತವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಶವವನ್ನು ಹೊರತೆಗೆದಿದ್ದಾರೆ. ತುಮಕೂರು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡನಿಂದಲೇ ಹೆಂಡತಿಯ ಕೊಲೆ? 20 ದಿನಗಳ ನಂತರ ಶವ ಹೊರತೆಗೆದು ಶವಪರೀಕ್ಷೆ
ಗಂಡನಿಂದಲೇ ಹೆಂಡತಿಯ ಕೊಲೆ?
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಸಾಧು ಶ್ರೀನಾಥ್​

Updated on: Aug 24, 2023 | 11:41 AM

ತುಮಕೂರು, ಆಗಸ್ಟ್​ 24: ಗಂಡನೇ (husband) ಹೆಂಡತಿಯನ್ನು (wife) ಕೊಲೆ (murder) ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಹೂತಿದ್ದ ಶವವನ್ನ 20 ದಿನಗಳ ನಂತರ ಅಧಿಕಾರಿಗಳು ಹೊರತೆಗೆದು ಶವಪರೀಕ್ಷೆ ನಡೆಸಿದ್ದಾರೆ. ತುಮಕೂರು ಎಸಿ ನೇತೃತ್ವದಲ್ಲಿ ಶವವನ್ನ ಸಿಬ್ಬಂದಿ ಹೊರತೆಗೆದಿದ್ದಾರೆ. ಶವವನ್ನ ಹೊರತೆಗೆದು ಪೋಸ್ಟ್ ಮಾರ್ಟಂ (postmortem) ನಡೆಸಲಿದ್ದಾರೆ. ತುಮಕೂರು (Tumkur) ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಶೆಟ್ಟಿಹಳ್ಳಿ ನಿವಾಸಿ ವರ್ಷಿಣಿ ಎಂಬ ಗೃಹಿಣಿ ಇದೇ ತಿಂಗಳು 2ನೇ ತಾರೀಖು ಸಾವನ್ನಪ್ಪಿದ್ದರು.

ಈ ವೇಳೆ ಪತಿ ಚೇತನ್, ಪತ್ನಿ ವರ್ಷಿಣಿಯ ಹೆತ್ತವರಿಗೂ ತಿಳಿಸದೇ ಆಕೆಯನ್ನ ಮಣ್ಣು ಮಾಡಿ ಬಂದಿದ್ದ. ಇದರಿಂದ ಅನುಮಾನಗೊಂಡ ಪೋಷಕರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಚೇತನ್, 2014 ರಲ್ಲಿ ವರ್ಷಿಣಿಯನ್ನ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳು ಇದ್ದಾರೆ.

ಇದನ್ನೂ ಓದಿ: ಕ್ವಾರ್ಟರ್ ಎಣ್ಣೆ ಕುಡಿಸಿ ಹೊಸ ಆಟೊ ಕದ್ದುಹೋಗಿದ್ದ ಅಡುಗೆ ಭಟ್ಟನನ್ನು ಪೀಣ್ಯ ಪೊಲೀಸರು ಲಾಕ್ ಮಾಡಿದರು!

ಅನುಮಾನದ ಪಿಶಾಚಿಯಾಗಿದ್ದ ಗಂಡ ಚೇತನ್ ಮದುವೆಯಾಗಿದ್ದಾಗಿನಿಂದಲೂ ಹೆಂಡತಿಯನ್ನ ಮನೆಯಲ್ಲೇ ಬಂಧಿಸಿಟ್ಟಿದ್ದ. ಆಗಾಗ ವರದಕ್ಷಿಣೆ ಕಿರುಕುಳವನ್ನ ಕೂಡ ನೀಡ್ತಿದ್ದ ಅಂತಾ ಪೋಷಕರು ಆರೋಪ ಮಾಡಿದ್ದಾರೆ. ಹೀಗಾಗಿ ಅವನೇ ಹೆಂಡತಿಯನ್ನ ಕೊಲೆ ಮಾಡಿ, ಮಣ್ಣು ಮಾಡಿದ್ದಾನೆ ಅಂತಾ ವರ್ಷಿಣಿ ಹೆತ್ತವರು ಆರೋಪಿಸುತ್ತಿದ್ದಾರೆ. ಹೆತ್ತವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಶವವನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸತ್ಯಾಸತ್ಯತೆ ಬಹಿರಂಗವಾಗಲಿದೆ. ತುಮಕೂರು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ