ಗಂಡನಿಂದಲೇ ಹೆಂಡತಿಯ ಕೊಲೆ? 20 ದಿನಗಳ ನಂತರ ಶವ ಹೊರತೆಗೆದು ಶವಪರೀಕ್ಷೆ

ಅನುಮಾನದ ಪಿಶಾಚಿಯಾಗಿದ್ದ ಗಂಡ ಚೇತನ್ ಮದುವೆಯಾಗಿದ್ದಾಗಿನಿಂದಲೂ ಹೆಂಡತಿಯನ್ನ ಮನೆಯಲ್ಲೇ ಬಂಧಿಸಿಟ್ಟಿದ್ದ. ಆಗಾಗ ವರದಕ್ಷಿಣೆ ಕಿರುಕುಳವನ್ನ ಕೂಡ ನೀಡ್ತಿದ್ದ ಅಂತಾ ಪೋಷಕರು ಆರೋಪ ಮಾಡಿದ್ದಾರೆ. ಹೀಗಾಗಿ ಅವನೇ ಹೆಂಡತಿಯನ್ನ ಕೊಲೆ ಮಾಡಿ, ಮಣ್ಣು ಮಾಡಿದ್ದಾನೆ ಅಂತಾ ವರ್ಷಿಣಿ ಹೆತ್ತವರು ಆರೋಪಿಸುತ್ತಿದ್ದಾರೆ. ಹೆತ್ತವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಶವವನ್ನು ಹೊರತೆಗೆದಿದ್ದಾರೆ. ತುಮಕೂರು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡನಿಂದಲೇ ಹೆಂಡತಿಯ ಕೊಲೆ? 20 ದಿನಗಳ ನಂತರ ಶವ ಹೊರತೆಗೆದು ಶವಪರೀಕ್ಷೆ
ಗಂಡನಿಂದಲೇ ಹೆಂಡತಿಯ ಕೊಲೆ?
Follow us
| Updated By: ಸಾಧು ಶ್ರೀನಾಥ್​

Updated on: Aug 24, 2023 | 11:41 AM

ತುಮಕೂರು, ಆಗಸ್ಟ್​ 24: ಗಂಡನೇ (husband) ಹೆಂಡತಿಯನ್ನು (wife) ಕೊಲೆ (murder) ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಹೂತಿದ್ದ ಶವವನ್ನ 20 ದಿನಗಳ ನಂತರ ಅಧಿಕಾರಿಗಳು ಹೊರತೆಗೆದು ಶವಪರೀಕ್ಷೆ ನಡೆಸಿದ್ದಾರೆ. ತುಮಕೂರು ಎಸಿ ನೇತೃತ್ವದಲ್ಲಿ ಶವವನ್ನ ಸಿಬ್ಬಂದಿ ಹೊರತೆಗೆದಿದ್ದಾರೆ. ಶವವನ್ನ ಹೊರತೆಗೆದು ಪೋಸ್ಟ್ ಮಾರ್ಟಂ (postmortem) ನಡೆಸಲಿದ್ದಾರೆ. ತುಮಕೂರು (Tumkur) ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಶೆಟ್ಟಿಹಳ್ಳಿ ನಿವಾಸಿ ವರ್ಷಿಣಿ ಎಂಬ ಗೃಹಿಣಿ ಇದೇ ತಿಂಗಳು 2ನೇ ತಾರೀಖು ಸಾವನ್ನಪ್ಪಿದ್ದರು.

ಈ ವೇಳೆ ಪತಿ ಚೇತನ್, ಪತ್ನಿ ವರ್ಷಿಣಿಯ ಹೆತ್ತವರಿಗೂ ತಿಳಿಸದೇ ಆಕೆಯನ್ನ ಮಣ್ಣು ಮಾಡಿ ಬಂದಿದ್ದ. ಇದರಿಂದ ಅನುಮಾನಗೊಂಡ ಪೋಷಕರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಚೇತನ್, 2014 ರಲ್ಲಿ ವರ್ಷಿಣಿಯನ್ನ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳು ಇದ್ದಾರೆ.

ಇದನ್ನೂ ಓದಿ: ಕ್ವಾರ್ಟರ್ ಎಣ್ಣೆ ಕುಡಿಸಿ ಹೊಸ ಆಟೊ ಕದ್ದುಹೋಗಿದ್ದ ಅಡುಗೆ ಭಟ್ಟನನ್ನು ಪೀಣ್ಯ ಪೊಲೀಸರು ಲಾಕ್ ಮಾಡಿದರು!

ಅನುಮಾನದ ಪಿಶಾಚಿಯಾಗಿದ್ದ ಗಂಡ ಚೇತನ್ ಮದುವೆಯಾಗಿದ್ದಾಗಿನಿಂದಲೂ ಹೆಂಡತಿಯನ್ನ ಮನೆಯಲ್ಲೇ ಬಂಧಿಸಿಟ್ಟಿದ್ದ. ಆಗಾಗ ವರದಕ್ಷಿಣೆ ಕಿರುಕುಳವನ್ನ ಕೂಡ ನೀಡ್ತಿದ್ದ ಅಂತಾ ಪೋಷಕರು ಆರೋಪ ಮಾಡಿದ್ದಾರೆ. ಹೀಗಾಗಿ ಅವನೇ ಹೆಂಡತಿಯನ್ನ ಕೊಲೆ ಮಾಡಿ, ಮಣ್ಣು ಮಾಡಿದ್ದಾನೆ ಅಂತಾ ವರ್ಷಿಣಿ ಹೆತ್ತವರು ಆರೋಪಿಸುತ್ತಿದ್ದಾರೆ. ಹೆತ್ತವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಶವವನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸತ್ಯಾಸತ್ಯತೆ ಬಹಿರಂಗವಾಗಲಿದೆ. ತುಮಕೂರು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು