AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿಂದಲೇ ಹೆಂಡತಿಯ ಕೊಲೆ? 20 ದಿನಗಳ ನಂತರ ಶವ ಹೊರತೆಗೆದು ಶವಪರೀಕ್ಷೆ

ಅನುಮಾನದ ಪಿಶಾಚಿಯಾಗಿದ್ದ ಗಂಡ ಚೇತನ್ ಮದುವೆಯಾಗಿದ್ದಾಗಿನಿಂದಲೂ ಹೆಂಡತಿಯನ್ನ ಮನೆಯಲ್ಲೇ ಬಂಧಿಸಿಟ್ಟಿದ್ದ. ಆಗಾಗ ವರದಕ್ಷಿಣೆ ಕಿರುಕುಳವನ್ನ ಕೂಡ ನೀಡ್ತಿದ್ದ ಅಂತಾ ಪೋಷಕರು ಆರೋಪ ಮಾಡಿದ್ದಾರೆ. ಹೀಗಾಗಿ ಅವನೇ ಹೆಂಡತಿಯನ್ನ ಕೊಲೆ ಮಾಡಿ, ಮಣ್ಣು ಮಾಡಿದ್ದಾನೆ ಅಂತಾ ವರ್ಷಿಣಿ ಹೆತ್ತವರು ಆರೋಪಿಸುತ್ತಿದ್ದಾರೆ. ಹೆತ್ತವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಶವವನ್ನು ಹೊರತೆಗೆದಿದ್ದಾರೆ. ತುಮಕೂರು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡನಿಂದಲೇ ಹೆಂಡತಿಯ ಕೊಲೆ? 20 ದಿನಗಳ ನಂತರ ಶವ ಹೊರತೆಗೆದು ಶವಪರೀಕ್ಷೆ
ಗಂಡನಿಂದಲೇ ಹೆಂಡತಿಯ ಕೊಲೆ?
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಸಾಧು ಶ್ರೀನಾಥ್​|

Updated on: Aug 24, 2023 | 11:41 AM

Share

ತುಮಕೂರು, ಆಗಸ್ಟ್​ 24: ಗಂಡನೇ (husband) ಹೆಂಡತಿಯನ್ನು (wife) ಕೊಲೆ (murder) ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಹೂತಿದ್ದ ಶವವನ್ನ 20 ದಿನಗಳ ನಂತರ ಅಧಿಕಾರಿಗಳು ಹೊರತೆಗೆದು ಶವಪರೀಕ್ಷೆ ನಡೆಸಿದ್ದಾರೆ. ತುಮಕೂರು ಎಸಿ ನೇತೃತ್ವದಲ್ಲಿ ಶವವನ್ನ ಸಿಬ್ಬಂದಿ ಹೊರತೆಗೆದಿದ್ದಾರೆ. ಶವವನ್ನ ಹೊರತೆಗೆದು ಪೋಸ್ಟ್ ಮಾರ್ಟಂ (postmortem) ನಡೆಸಲಿದ್ದಾರೆ. ತುಮಕೂರು (Tumkur) ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಶೆಟ್ಟಿಹಳ್ಳಿ ನಿವಾಸಿ ವರ್ಷಿಣಿ ಎಂಬ ಗೃಹಿಣಿ ಇದೇ ತಿಂಗಳು 2ನೇ ತಾರೀಖು ಸಾವನ್ನಪ್ಪಿದ್ದರು.

ಈ ವೇಳೆ ಪತಿ ಚೇತನ್, ಪತ್ನಿ ವರ್ಷಿಣಿಯ ಹೆತ್ತವರಿಗೂ ತಿಳಿಸದೇ ಆಕೆಯನ್ನ ಮಣ್ಣು ಮಾಡಿ ಬಂದಿದ್ದ. ಇದರಿಂದ ಅನುಮಾನಗೊಂಡ ಪೋಷಕರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಚೇತನ್, 2014 ರಲ್ಲಿ ವರ್ಷಿಣಿಯನ್ನ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳು ಇದ್ದಾರೆ.

ಇದನ್ನೂ ಓದಿ: ಕ್ವಾರ್ಟರ್ ಎಣ್ಣೆ ಕುಡಿಸಿ ಹೊಸ ಆಟೊ ಕದ್ದುಹೋಗಿದ್ದ ಅಡುಗೆ ಭಟ್ಟನನ್ನು ಪೀಣ್ಯ ಪೊಲೀಸರು ಲಾಕ್ ಮಾಡಿದರು!

ಅನುಮಾನದ ಪಿಶಾಚಿಯಾಗಿದ್ದ ಗಂಡ ಚೇತನ್ ಮದುವೆಯಾಗಿದ್ದಾಗಿನಿಂದಲೂ ಹೆಂಡತಿಯನ್ನ ಮನೆಯಲ್ಲೇ ಬಂಧಿಸಿಟ್ಟಿದ್ದ. ಆಗಾಗ ವರದಕ್ಷಿಣೆ ಕಿರುಕುಳವನ್ನ ಕೂಡ ನೀಡ್ತಿದ್ದ ಅಂತಾ ಪೋಷಕರು ಆರೋಪ ಮಾಡಿದ್ದಾರೆ. ಹೀಗಾಗಿ ಅವನೇ ಹೆಂಡತಿಯನ್ನ ಕೊಲೆ ಮಾಡಿ, ಮಣ್ಣು ಮಾಡಿದ್ದಾನೆ ಅಂತಾ ವರ್ಷಿಣಿ ಹೆತ್ತವರು ಆರೋಪಿಸುತ್ತಿದ್ದಾರೆ. ಹೆತ್ತವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಶವವನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸತ್ಯಾಸತ್ಯತೆ ಬಹಿರಂಗವಾಗಲಿದೆ. ತುಮಕೂರು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ