AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಕ್ಸಲ್ ಕೊತ್ತಗೆರೆ ಶಂಕರ ಬಂಧನ

ತುಮಕೂರು ಜಿಲ್ಲೆಯ ಪಾವಗಡದ ವೆಂಕಟಮ್ಮನಹಳ್ಳಿಯ ಪೊಲೀಸ್ ಕ್ಯಾಂಪ್ ಮೇಲೆ ಸುಮಾರು 300 ಜನ ಮಾವೋಯಿಸ್ಟ್ ನಕ್ಸಲೀಯರು ಬಂದೂಕು, ಬಾಂಬ್‌, ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ದಾಳಿ ನಡೆಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ 7 ಪೊಲೀಸರು, ಖಾಸಗಿ ಬಸ್‌ನ ಕ್ಲೀನರ್‌ ಹತ್ಯೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಕ್ಸಲ್ ಕೊತ್ತಗೆರೆ ಶಂಕರನನ್ನ ಬಂಧಿಸಲಾಗಿದೆ.

19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಕ್ಸಲ್ ಕೊತ್ತಗೆರೆ ಶಂಕರ ಬಂಧನ
ಸಾಂದರ್ಭಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 22, 2024 | 9:49 PM

Share

ತುಮಕೂರು, ಮೇ.22: ಪೊಲೀಸರ ಮೇಲೆ ದಾಳಿ ನಡೆಸಿ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಕ್ಸಲ್ ಕೊತ್ತಗೆರೆ‌ ಶಂಕರ(Naxal Kottagere Shanker)ನನ್ನ ತುಮಕೂರು, ಬೆಂಗಳೂರು ಆಂತರಿಕ ಭದ್ರತಾ ವಿಭಾಗ ಮತ್ತು ಸಿ.ಐ. ತಂಡ ಬಂಧಿಸಿದೆ ಎಂದು ತುಮಕೂರು(Tumakuru) ಎಸ್ಪಿ ಅಶೋಕ್ ವೆಂಕಟ್ ತಿಳಿಸಿದ್ದಾರೆ. ಬಂಧಿತ ಶಂಕರ, ಬೆಂಗಳೂರಿನ ಗೌರಿಪಾಳ್ಯದ ವೆಂಕಟಸ್ವಾಮಿ ಗಾರ್ಡನ್ ನಗರದಲ್ಲಿ ವಾಸವಿದ್ದು, ಬಿಬಿಎಂಪಿಯಲ್ಲಿ ಡ್ರೈವರ್ ಕೆಲಸ ಮಾಡುತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.

ಏನಿದು ಘಟನೆ

2005 ಫೆ. ರಾತ್ರಿ‌10.30 ರ ವೇಳೆ ತುಮಕೂರು ಜಿಲ್ಲೆಯ ಪಾವಗಡದ ವೆಂಕಟಮ್ಮನಹಳ್ಳಿಯ ಪೊಲೀಸ್ ಕ್ಯಾಂಪ್ ಮೇಲೆ ಸುಮಾರು 300 ಜನ ಮಾವೋಯಿಸ್ಟ್ ನಕ್ಸಲೀಯರು ಬಂದೂಕು, ಬಾಂಬ್‌, ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ದಾಳಿ ನಡೆಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ 7 ಪೊಲೀಸರು, ಖಾಸಗಿ ಬಸ್‌ನ ಕ್ಲೀನರ್‌ ಹತ್ಯೆಯಾಗಿತ್ತು. ಜೊತೆಗೆ 5 ಮಂದಿ ಪೊಲೀಸ್ ಸಿಬ್ಬಂದಿಗಳು ಗಂಭೀರ ಗಾಯಗೊಂಡಿದ್ದರು.

ಇದನ್ನೂ ಓದಿ:ಕೊಡಗು-ದಕ್ಷಿಣ ಕನ್ನಡ ಗಡಿಯಲ್ಲಿ ನಕ್ಸಲ್​ ಸದ್ದು; ಅಂಗಡಿಯಿಂದ ದಿನಸಿ ಖರೀದಿಸಿ ತೆರಳಿದ ಬಂದೂಕು ದಾರಿಗಳ ತಂಡ

ಹತ್ಯೆ ಬಳಿಕ ಕ್ಯಾಂಪ್‌ನಲ್ಲಿದ್ದ ಬಂದೂಕು, ಗುಂಡುಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ನಂತರ ತಲೆ ಮರೆಸಿಕೊಂಡಿದ್ದ 32 ಜನ ಆರೋಪಿಗಳ ಮೇಲೆ ಪಾವಗಡದ ಸಿಜೆ[ಜೆಡಿ] ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿತ್ತು. ಈ ಬಗ್ಗೆ ತಿರುಮಣಿ ಪೊಲೀಸ್ ಠಾಣಾ ಮೊನಂ: 07/2005, ಕಲಂ:143, 144, 147, 148, 307, 302, 396, 353, 120,121(ಬಿ),109, 332, 333 ರೆ/ವಿ 149 ಐಪಿಸಿ ಕಲಂ:3.4.5 ಸ್ಪೋಟಕ ನಿಯಂತ್ರಣ ಕಾಯ್ದೆ ಕಲಂ:25 ಶಸ್ತಾçಸ್ತ ಅಧಿನಿಯಮ ಅಡಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ