AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Borewell: ಬೋರ್​ವೆಲ್ ಕೊರೆಯಿಸೇ ಇಲ್ಲ, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಆರೋಪ!

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೆ ಮೇಲನಹಳ್ಳಿ ಗ್ರಾಮದ ಪಕ್ಕ ಹೇಮಾವತಿ ನಾಲೆ ಹಾದುಹೋಗಿದೆ. ಹೇಮಾವತಿ ನಾಲೆ ಪಕ್ಕದಲ್ಲಿ ಸುಮಾರು 10 ಅಡಿ ಆಳದ ಗುಂಡಿ ತೆಗೆಯಲಾಗಿದೆ. ಈ ಗುಂಡಿಗೆ ಕೇಸಿಂಗ್ ಹಾಕಿ ಜೊತೆಗೆ ಡಸ್ಟ್ ಸುರಿದು, ನೀರು ಹಾಕಿ ಬೋರ್ ವೆಲ್ ತೋಡಿದಂತೆ ಮೇಲ್ನೋಟಕ್ಕೆ ಸೃಷ್ಟಿಸಿದ್ದಾರೆ ಎನ್ನಲಾಗಿದೆ.

Borewell: ಬೋರ್​ವೆಲ್ ಕೊರೆಯಿಸೇ ಇಲ್ಲ, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಆರೋಪ!
ಬೋರ್​ವೆಲ್ ಕೊರೆಯದೇ ಹಣ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಕೆ ಮೇಲನಹಳ್ಳಿ ಗ್ರಾಮಸ್ಥ (ಒಳಚಿತ್ರ) ಆರೋಪಿಸಿದ್ದಾರೆ.
TV9 Web
| Updated By: ಸಾಧು ಶ್ರೀನಾಥ್​|

Updated on: Nov 13, 2021 | 12:59 PM

Share

ತುಮಕೂರು: ಬೋರ್​ವೆಲ್ ಕೊರೆಯದೇ ಹಣ ಮಂಜೂರು ಮಾಡಿರುವ ಆರೋಪ ಕೇಳಿಬಂದಿದ್ದು, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೆ ಮೇಲನಹಳ್ಳಿ ಗ್ರಾಮದಲ್ಲಿ ಬೋರ್​ವೆಲ್ ಕೊರೆಯದೇ ಹಣ ಮಂಜೂರು ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.  ಗ್ರಾಮದ ಜಗದೀಶ್, ಲೋಕೇಶ್, ಸುನೀಲ್ ಬೀರಲಿಂಗಪ್ಪ, ಶಂಕರಲಿಂಗಪ್ಪ,ಅಭಿಷೇಕ್ ಸೇರಿದಂತೆ ಹಲವರು ಸೇರಿ ಗೋಲ್‌ಮಾಲ್ ಮಾಡಿದ್ದಾರೆ ಅಂತಾ ಕೆ ಮೇಲನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಂಚಾಯತ್ ಅಧಿಕಾರಿಗಳ ಜೊತೆ ಶಾಮೀಲಾಗಿ ಗೋಲ್ ಮಾಡಿದ್ದಾರೆ ಅಂತಾ ಆರೋಪ ಕೇಳಿಬಂದಿದೆ.

ಗ್ರಾಮದ ಪಕ್ಕ ಹೇಮಾವತಿ ನಾಲೆ ಹಾದುಹೋಗಿದೆ. ಹೇಮಾವತಿ ನಾಲೆ ಪಕ್ಕದಲ್ಲಿ ಸುಮಾರು 10 ಅಡಿ ಆಳದ ಗುಂಡಿ ತೆಗೆಯಲಾಗಿದೆ. ಈ ಗುಂಡಿಗೆ ಕೇಸಿಂಗ್ ಹಾಕಿ ಜೊತೆಗೆ ಡಸ್ಟ್ ಸುರಿದು, ನೀರು ಹಾಕಿ ಬೋರ್ ವೆಲ್ ತೋಡಿದಂತೆ ಮೇಲ್ನೋಟಕ್ಕೆ ಸೃಷ್ಟಿಸಿದ್ದಾರೆ ಎನ್ನಲಾಗಿದೆ.

ಮೋಸದಿಂದ ಹಣ ಮಾಡಲು ಈ ರೀತಿ ಮಾಡಿದ್ದಾರೆ ಅಂತಾ ಗ್ರಾಮಸ್ಥರು ಆರೋಪಿಸಿದ್ದಾರೆ. ಐದಾರು ತಿಂಗಳ ಹಿಂದೆ ನಡೆದ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ‌ ಜರುಗಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಒಟ್ಟಾರೆ ಮೇಲ್ನೋಟಕ್ಕೆ ಬೋರ್ ವೆಲ್ ಕೊರೆಸಿದ್ದೀವಿ ಅಂತಾ ತೋರಿಸಿ ಗ್ರಾಮದ ಕೆಲವರು ಹಣದಾಸೆಗೆ ಗೋಲ್‌ಮಾಲ್ ಮಾಡಿದ್ದಾರೆ ಅಂತಾ ಗ್ರಾಮಸ್ಥರು ಆರೋಪಿಸಿದ್ದಾರೆ.

(no borewell drilling just jcb work but money sanctioned allege villagers in turuvekere taluk tumkur district)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ