AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Borewell: ಬೋರ್​ವೆಲ್ ಕೊರೆಯಿಸೇ ಇಲ್ಲ, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಆರೋಪ!

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೆ ಮೇಲನಹಳ್ಳಿ ಗ್ರಾಮದ ಪಕ್ಕ ಹೇಮಾವತಿ ನಾಲೆ ಹಾದುಹೋಗಿದೆ. ಹೇಮಾವತಿ ನಾಲೆ ಪಕ್ಕದಲ್ಲಿ ಸುಮಾರು 10 ಅಡಿ ಆಳದ ಗುಂಡಿ ತೆಗೆಯಲಾಗಿದೆ. ಈ ಗುಂಡಿಗೆ ಕೇಸಿಂಗ್ ಹಾಕಿ ಜೊತೆಗೆ ಡಸ್ಟ್ ಸುರಿದು, ನೀರು ಹಾಕಿ ಬೋರ್ ವೆಲ್ ತೋಡಿದಂತೆ ಮೇಲ್ನೋಟಕ್ಕೆ ಸೃಷ್ಟಿಸಿದ್ದಾರೆ ಎನ್ನಲಾಗಿದೆ.

Borewell: ಬೋರ್​ವೆಲ್ ಕೊರೆಯಿಸೇ ಇಲ್ಲ, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಆರೋಪ!
ಬೋರ್​ವೆಲ್ ಕೊರೆಯದೇ ಹಣ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಕೆ ಮೇಲನಹಳ್ಳಿ ಗ್ರಾಮಸ್ಥ (ಒಳಚಿತ್ರ) ಆರೋಪಿಸಿದ್ದಾರೆ.
TV9 Web
| Edited By: |

Updated on: Nov 13, 2021 | 12:59 PM

Share

ತುಮಕೂರು: ಬೋರ್​ವೆಲ್ ಕೊರೆಯದೇ ಹಣ ಮಂಜೂರು ಮಾಡಿರುವ ಆರೋಪ ಕೇಳಿಬಂದಿದ್ದು, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೆ ಮೇಲನಹಳ್ಳಿ ಗ್ರಾಮದಲ್ಲಿ ಬೋರ್​ವೆಲ್ ಕೊರೆಯದೇ ಹಣ ಮಂಜೂರು ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.  ಗ್ರಾಮದ ಜಗದೀಶ್, ಲೋಕೇಶ್, ಸುನೀಲ್ ಬೀರಲಿಂಗಪ್ಪ, ಶಂಕರಲಿಂಗಪ್ಪ,ಅಭಿಷೇಕ್ ಸೇರಿದಂತೆ ಹಲವರು ಸೇರಿ ಗೋಲ್‌ಮಾಲ್ ಮಾಡಿದ್ದಾರೆ ಅಂತಾ ಕೆ ಮೇಲನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಂಚಾಯತ್ ಅಧಿಕಾರಿಗಳ ಜೊತೆ ಶಾಮೀಲಾಗಿ ಗೋಲ್ ಮಾಡಿದ್ದಾರೆ ಅಂತಾ ಆರೋಪ ಕೇಳಿಬಂದಿದೆ.

ಗ್ರಾಮದ ಪಕ್ಕ ಹೇಮಾವತಿ ನಾಲೆ ಹಾದುಹೋಗಿದೆ. ಹೇಮಾವತಿ ನಾಲೆ ಪಕ್ಕದಲ್ಲಿ ಸುಮಾರು 10 ಅಡಿ ಆಳದ ಗುಂಡಿ ತೆಗೆಯಲಾಗಿದೆ. ಈ ಗುಂಡಿಗೆ ಕೇಸಿಂಗ್ ಹಾಕಿ ಜೊತೆಗೆ ಡಸ್ಟ್ ಸುರಿದು, ನೀರು ಹಾಕಿ ಬೋರ್ ವೆಲ್ ತೋಡಿದಂತೆ ಮೇಲ್ನೋಟಕ್ಕೆ ಸೃಷ್ಟಿಸಿದ್ದಾರೆ ಎನ್ನಲಾಗಿದೆ.

ಮೋಸದಿಂದ ಹಣ ಮಾಡಲು ಈ ರೀತಿ ಮಾಡಿದ್ದಾರೆ ಅಂತಾ ಗ್ರಾಮಸ್ಥರು ಆರೋಪಿಸಿದ್ದಾರೆ. ಐದಾರು ತಿಂಗಳ ಹಿಂದೆ ನಡೆದ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ‌ ಜರುಗಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಒಟ್ಟಾರೆ ಮೇಲ್ನೋಟಕ್ಕೆ ಬೋರ್ ವೆಲ್ ಕೊರೆಸಿದ್ದೀವಿ ಅಂತಾ ತೋರಿಸಿ ಗ್ರಾಮದ ಕೆಲವರು ಹಣದಾಸೆಗೆ ಗೋಲ್‌ಮಾಲ್ ಮಾಡಿದ್ದಾರೆ ಅಂತಾ ಗ್ರಾಮಸ್ಥರು ಆರೋಪಿಸಿದ್ದಾರೆ.

(no borewell drilling just jcb work but money sanctioned allege villagers in turuvekere taluk tumkur district)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!