AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಕೊಬರಿ ಬೆಲೆಯದ್ದೇ ಚಿಂತೆ! ಅಹೋರಾತ್ರಿ ಧರಣಿ

Dry Coconut: ಕಲ್ಪತರು ನಾಡು ಎಂದೇ ಪ್ರಸಿದ್ಧವಾಗಿರುವ ತುಮಕೂರು ಜಿಲ್ಲೆಯಲ್ಲಿ ಈಗ ಕೊಬರಿ ಬೆಲೆಯದ್ದೇ ಚಿಂತೆ. ನಿಗದಿಯಾದ ಬೆಂಬಲ ಬೆಲೆಯೂ ಇಲ್ಲ, ಅತ್ತ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯೂ ಕೊಬರಿಗೆ ಸಿಗ್ತಿಲ್ಲ. ಜೊತೆಗೆ ತೆಂಗು, ಅಡಿಕೆಗೆ ರೋಗಗಳು ಬಂದಿದ್ದು ಶಾಸಕರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅಂತಾ ಆರೋಪಿಸಿದ್ದಾರೆ.

ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಕೊಬರಿ ಬೆಲೆಯದ್ದೇ ಚಿಂತೆ! ಅಹೋರಾತ್ರಿ ಧರಣಿ
ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಕೊಬರಿ ಬೆಲೆಯದ್ದೇ ಚಿಂತೆ!
TV9 Web
| Edited By: |

Updated on: Mar 09, 2023 | 3:55 PM

Share

ಕಲ್ಪತರು ನಾಡು ಎಂದೇ ಪ್ರಸಿದ್ಧವಾಗಿರುವ ತುಮಕೂರು ಜಿಲ್ಲೆಯಲ್ಲಿ ಈಗ ಕೊಬರಿ (Dry Coconut) ಬೆಲೆಯದ್ದೇ ಚಿಂತೆಯಾಗಿದೆ. ನಿಗದಿಯಾದ ಬೆಂಬಲ ಬೆಲೆಯೂ ಇಲ್ಲ, ಅತ್ತ ಸೂಕ್ತ ಮಾರುಕಟ್ಟೆ ಬೆಲೆಯೂ (Dry Coconut Market prices) ಕೊಬರಿಗೆ ಸಿಗ್ತಿಲ್ಲ. ಹೀಗಾಗಿ ತುರುವೇಕೆರೆಯಲ್ಲಿ ಜೆಡಿಎಸ್ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗಿದೆ. ಹೌದು.. ಕಲ್ಪತರು ನಾಡು ತುಮಕೂರು (Tumkur) ಜಿಲ್ಲೆಯ ರೈತರಿಗೆ ಕೊಬರಿ ಬೆಲೆಯದ್ದೇ ಚಿಂತೆಯಾಗಿದೆ. ಸೂಕ್ತ ಬೆಲೆ ಸಿಗದೇ ಕೊಬರಿ ನಂಬಿ ಜೀವನ ಮಾಡ್ತಿದ್ದ ‌ಲಕ್ಷಾಂತರ ರೈತರು ಈಗ ಬೀದಿಗೆ ಬೀಳುವ ಪರಿಸ್ಥಿತಿ ‌ನಿರ್ಮಾಣವಾಗಿದೆ. ಕಾರಣ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಕೊಬ್ಬರಿ ಮಾರಾಟವಾಗಿದೆ. ಇದರಿಂದ ಲಕ್ಷಾಂತರ ರೈತರಿಗೆ (Coconut growers) ನಷ್ಟವಾಗಿದೆ. ಕೊಬರಿಗೆ ಮತ್ತಷ್ಟು ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ತುರುವೇಕೆರೆಯಲ್ಲಿ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.

ಇನ್ನು ನೂರಾರು ಸಂಖ್ಯೆಯಲ್ಲಿ ಧರಣಿಯಲ್ಲಿ ಭಾಗವಹಿಸಿದ್ದು, ಧರಣಿಯಲ್ಲಿ ಮಾಜಿ ಶಾಸಕ ಎಮ್ ಟಿ ಕೃಷ್ಣಪ್ಪ ಭಾಗಿಯಾಗಿ ಸರ್ಕಾರ ಹಾಗೂ ಸ್ಥಳೀಯ ಶಾಸಕ ಮಸಾಲೆ ಜಯರಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ವರ್ಷ ಕೊಬರಿ ಬೆಲೆ 18 ಸಾವಿರ ಇತ್ತು, ಈ ಬಾರಿ 9 ಸಾವಿರಕ್ಕೆ ಕುಸಿದಿದೆ. ಹೀಗಾಗಿ ಸರ್ಕಾರ ಕನಿಷ್ಠ 15 ಸಾವಿರ ಬೆಲೆ‌ ನೀಡಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ:

ಕೊಬ್ಬರಿ ಬೆಳೆಗಾರರ ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರ: ಪ್ರತಿ ಕ್ವಿಂಟಾಲ್‌ಗೆ 11,750 ರೂ. ಬೆಂಬಲ ಬೆಲೆ ನಿಗದಿ

ಅಲ್ಲದೇ ತುರುವೇಕೆರೆ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿಲ್ಲ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ರೈತರು ಬೇಸತ್ತಿದ್ದಾರೆ. ಸರ್ಕಾರ ಮೂರು ಫೇಸ್ ವಿದ್ಯುತ್ ನೀಡ್ತಿಲ್ಲ. 26,000 ರೂ ಡೆಪಾಸಿಟ್ ಕಟ್ಟಿಸಿಕೊಂಡಿರೂ ಟಿಸಿ ನೀಡಿಲ್ಲ. ರೈತರು ಇದರಿಂದಲೂ ರೋಸಿ ಹೋಗಿದ್ದಾರೆ ಅಂತಾ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ತೆಂಗು, ಅಡಿಕೆಗೆ ರೋಗಗಳು ಬಂದಿದ್ದು ಶಾಸಕರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅಂತಾ ಆರೋಪಿಸಿದ್ದಾರೆ.

ಒಟ್ಟಾರೆ ಜಿಲ್ಲೆಯ ಬಹುತೇಕ ಮೂರು ಫೇಸ್ ವಿದ್ಯುತ್ ಹಾಗೂ ಟಿಸಿಗಳನ್ನ ಸರ್ಕಾರ ಸಮರ್ಪಕವಾಗಿ ನೀಡ್ತಿಲ್ಲ. ಜೊತೆಗೆ ಕೊಬರಿ ಬೆಳೆಗೆ ಬೆಂಬಲ ಬೆಲೆಯೂ ಇಲ್ಲ. ಸೂಕ್ತ ಬೆಲೆಯೂ ಇಲ್ಲವಾಗಿದೆ. ಇದರಿಂದ ರೈತರು ಬೇಸತ್ತು ಅಹೋರಾತ್ರಿ ಧರಣಿ‌ ನಡೆಸುತ್ತಿದ್ದಾರೆ.

ವರದಿ: ಮಹೇಶ್, ಟಿವಿ9, ತುಮಕೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ