AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.6 ರಂದು ತುಮಕೂರಿಗೆ ಮೋದಿ: HAL ಹೆಲಿಕಾಪ್ಟರ್ ಕಾರ್ಖಾನೆ ಲೋಕಾರ್ಪಣೆ; ಬಿಗಿ ಪೊಲೀಸ್​ ಬಂದೋಬಸ್ತ, 300 KSRTC ಬಸ್​ ಬುಕ್​

ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಗುಬ್ಬಿ ತಾಲೂಕಿನ, ನಿಟ್ಟೂರು ಬಳಿಯ ಹೆಚ್​ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಉದ್ಘಾಟಿಸಲಿದ್ದಾರೆ.

ಫೆ.6 ರಂದು ತುಮಕೂರಿಗೆ ಮೋದಿ:  HAL ಹೆಲಿಕಾಪ್ಟರ್ ಕಾರ್ಖಾನೆ ಲೋಕಾರ್ಪಣೆ; ಬಿಗಿ ಪೊಲೀಸ್​ ಬಂದೋಬಸ್ತ, 300 KSRTC ಬಸ್​ ಬುಕ್​
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: ವಿವೇಕ ಬಿರಾದಾರ|

Updated on:Feb 05, 2023 | 12:01 PM

Share

ತುಮಕೂರು: ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ. ಗುಬ್ಬಿ ತಾಲೂಕಿನ, ನಿಟ್ಟೂರು ಬಳಿಯ ಹೆಚ್​ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ MI17 ಹೆಲಿಕಾಪ್ಟರ್​ನಲ್ಲಿ ಬರಲಿದ್ದು, ಮಧ್ಯಾಹ್ನ 3.20ಕ್ಕೆ ಹೆಚ್ ಎಎಲ್ ಹೆಲಿಪ್ಯಾಡ್​ನಲ್ಲಿ ಇಳಿಯಲಿದ್ದಾರೆ. ಪ್ರಧಾನಿ 3.30ಕ್ಕೆ ತುಮಕೂರಿನ HAL ಹೆಲಿಕಾಪ್ಟರ್ ಕಾರ್ಖಾನೆಯ ಲೋಕಾರ್ಪಣೆ ಮತ್ತು ಜಲ ಜೀವನ್ ಮಿಷನ್ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ 1 ಗಂಟೆಗಳ ಕಾಲ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 4.40ಕ್ಕೆ ಹೆಚ್​ಎಎಲ್ ಹೆಲಿಪ್ಯಾಡ್​​ಗೆ ಆಗಮಿಸಿ, 4.45ಕ್ಕೆ‌ ಬೆಂಗಳೂರಿನತ್ತ ಪ್ರಯಾಣ ಬೆಳಸಲಿದ್ದಾರೆ.

ವಾಹನಗಳಿಗೆ ಬದಲಿ ಮಾರ್ಗ ಸೂಚನೆ

ನಾಳೆ ಬಾರಿ ಸರಕು ವಾಹನಗಳು, ಕೆಎಸ್ ಆರ್ ಟಿಸಿ ಬಸ್ ಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಡಿಸಿ ಆದೇಶ ಹೊಡಿಸಿದ್ದಾರೆ. ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾರ್ಗವಾಗಿ ಕೆಬಿ ಕ್ರಾಸ್​ಗೆ ಸಂಚರಿಸುವುದು. ತಿಪಟೂರಿನಿಂದ ಬರುವ ವಾಹನಗಳು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸುವುದು ಎದು ಹೇಳಿದ್ದಾರೆ. ಜೊತೆಗೆ ಪ್ರದಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆಗೆ ಮಾಡಲಾಗಿದೆ.

ಇದನ್ನೂ ಓದಿ: ತುಮಕೂರಿನಲ್ಲಿ ದೇಶದ ಅತಿದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ: ಸೋಮವಾರ ಪ್ರಧಾನಿಯಿಂದ ಉದ್ಘಾಟನೆ

ಪೊಲೀಸ್ ಬಿಗಿ ಬಂದೋಬಸ್ತ್

ತುಮಕೂರು ಎಸ್​ಪಿ ಸೇರಿದಂತೆ ಒಟ್ಟು 6 ಎಸ್​ಪಿಗಳ ನೇಮಕ ಮಾಡಲಾಗಿದೆ. 19 ಡಿವೈಎಸ್​ಪಿ, 119 ಸಿಪಿಐ, 239 ಪಿಎಸ್​ಐ, 1202 ಎಎಸ್​ಐ, ಹೆಡ್​​ಕಾನ್ಸ್​ಟೇಬಲ್, 400 ಕಾನ್ಸ್​ಟೇಬಲ್, ಹೋಮ್​ಗಾರ್ಡ್, 14 ಡಿಎಆರ್ ಮತ್ತು 12 ಕೆಎಸ್​ಆರ್​ಪಿ ತುಕಡಿ ಹಾಗೂ ನಾಳೆ ಭದ್ರತೆಗೆ ಒಟ್ಟು 1,600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಜನರನ್ನು ಕರೆತರಲು ಕೆಎಸ್​ಆರ್​ಟಿಸಿ ಹಾಗೂ ಖಾಸಗಿ ಬಸ್​ಗಳ ಬಳಕೆ

ಒಟ್ಟು 300 ಕ್ಕೂ ಹೆಚ್ಚು ಕೆಎಸ್​ಆರ್​ಟಿಸಿ ಬಸ್​​ಗಳನ್ನು ಬುಕ್​ ಮಾಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 609 ಕೆಎಸ್​ಆರ್​ಟಿಸಿ ಬಸ್​ಗಳಿವೆ. ಇದರಲ್ಲಿ ಸದ್ಯ 300 ಬಸ್​​ಗಳನ್ನು ಬುಕ್​ ಮಾಡಲಾಗಿದೆ. 300 ಬಸ್​ಗಳ ಬಳಕೆ ಹಿನ್ನೆಲೆ ನಾಳೆ ಜಿಲ್ಲಾದ್ಯಂತ ಪ್ರಯಾಣಕ್ಕೆ ಸಮಸ್ಯೆ ಉಂಟಾಗಲಿದೆ. ಪ್ರಯಾಣಿಕರಿಗೆ ತೊಂದರೆ ಯಾಗುವ ಸಾಧ್ಯತೆ ಇದೆ.

Published On - 11:36 am, Sun, 5 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ