AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.6 ರಂದು ತುಮಕೂರಿಗೆ ಮೋದಿ: HAL ಹೆಲಿಕಾಪ್ಟರ್ ಕಾರ್ಖಾನೆ ಲೋಕಾರ್ಪಣೆ; ಬಿಗಿ ಪೊಲೀಸ್​ ಬಂದೋಬಸ್ತ, 300 KSRTC ಬಸ್​ ಬುಕ್​

ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಗುಬ್ಬಿ ತಾಲೂಕಿನ, ನಿಟ್ಟೂರು ಬಳಿಯ ಹೆಚ್​ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಉದ್ಘಾಟಿಸಲಿದ್ದಾರೆ.

ಫೆ.6 ರಂದು ತುಮಕೂರಿಗೆ ಮೋದಿ:  HAL ಹೆಲಿಕಾಪ್ಟರ್ ಕಾರ್ಖಾನೆ ಲೋಕಾರ್ಪಣೆ; ಬಿಗಿ ಪೊಲೀಸ್​ ಬಂದೋಬಸ್ತ, 300 KSRTC ಬಸ್​ ಬುಕ್​
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Feb 05, 2023 | 12:01 PM

Share

ತುಮಕೂರು: ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ. ಗುಬ್ಬಿ ತಾಲೂಕಿನ, ನಿಟ್ಟೂರು ಬಳಿಯ ಹೆಚ್​ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ MI17 ಹೆಲಿಕಾಪ್ಟರ್​ನಲ್ಲಿ ಬರಲಿದ್ದು, ಮಧ್ಯಾಹ್ನ 3.20ಕ್ಕೆ ಹೆಚ್ ಎಎಲ್ ಹೆಲಿಪ್ಯಾಡ್​ನಲ್ಲಿ ಇಳಿಯಲಿದ್ದಾರೆ. ಪ್ರಧಾನಿ 3.30ಕ್ಕೆ ತುಮಕೂರಿನ HAL ಹೆಲಿಕಾಪ್ಟರ್ ಕಾರ್ಖಾನೆಯ ಲೋಕಾರ್ಪಣೆ ಮತ್ತು ಜಲ ಜೀವನ್ ಮಿಷನ್ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ 1 ಗಂಟೆಗಳ ಕಾಲ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 4.40ಕ್ಕೆ ಹೆಚ್​ಎಎಲ್ ಹೆಲಿಪ್ಯಾಡ್​​ಗೆ ಆಗಮಿಸಿ, 4.45ಕ್ಕೆ‌ ಬೆಂಗಳೂರಿನತ್ತ ಪ್ರಯಾಣ ಬೆಳಸಲಿದ್ದಾರೆ.

ವಾಹನಗಳಿಗೆ ಬದಲಿ ಮಾರ್ಗ ಸೂಚನೆ

ನಾಳೆ ಬಾರಿ ಸರಕು ವಾಹನಗಳು, ಕೆಎಸ್ ಆರ್ ಟಿಸಿ ಬಸ್ ಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಡಿಸಿ ಆದೇಶ ಹೊಡಿಸಿದ್ದಾರೆ. ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾರ್ಗವಾಗಿ ಕೆಬಿ ಕ್ರಾಸ್​ಗೆ ಸಂಚರಿಸುವುದು. ತಿಪಟೂರಿನಿಂದ ಬರುವ ವಾಹನಗಳು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸುವುದು ಎದು ಹೇಳಿದ್ದಾರೆ. ಜೊತೆಗೆ ಪ್ರದಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆಗೆ ಮಾಡಲಾಗಿದೆ.

ಇದನ್ನೂ ಓದಿ: ತುಮಕೂರಿನಲ್ಲಿ ದೇಶದ ಅತಿದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ: ಸೋಮವಾರ ಪ್ರಧಾನಿಯಿಂದ ಉದ್ಘಾಟನೆ

ಪೊಲೀಸ್ ಬಿಗಿ ಬಂದೋಬಸ್ತ್

ತುಮಕೂರು ಎಸ್​ಪಿ ಸೇರಿದಂತೆ ಒಟ್ಟು 6 ಎಸ್​ಪಿಗಳ ನೇಮಕ ಮಾಡಲಾಗಿದೆ. 19 ಡಿವೈಎಸ್​ಪಿ, 119 ಸಿಪಿಐ, 239 ಪಿಎಸ್​ಐ, 1202 ಎಎಸ್​ಐ, ಹೆಡ್​​ಕಾನ್ಸ್​ಟೇಬಲ್, 400 ಕಾನ್ಸ್​ಟೇಬಲ್, ಹೋಮ್​ಗಾರ್ಡ್, 14 ಡಿಎಆರ್ ಮತ್ತು 12 ಕೆಎಸ್​ಆರ್​ಪಿ ತುಕಡಿ ಹಾಗೂ ನಾಳೆ ಭದ್ರತೆಗೆ ಒಟ್ಟು 1,600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಜನರನ್ನು ಕರೆತರಲು ಕೆಎಸ್​ಆರ್​ಟಿಸಿ ಹಾಗೂ ಖಾಸಗಿ ಬಸ್​ಗಳ ಬಳಕೆ

ಒಟ್ಟು 300 ಕ್ಕೂ ಹೆಚ್ಚು ಕೆಎಸ್​ಆರ್​ಟಿಸಿ ಬಸ್​​ಗಳನ್ನು ಬುಕ್​ ಮಾಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 609 ಕೆಎಸ್​ಆರ್​ಟಿಸಿ ಬಸ್​ಗಳಿವೆ. ಇದರಲ್ಲಿ ಸದ್ಯ 300 ಬಸ್​​ಗಳನ್ನು ಬುಕ್​ ಮಾಡಲಾಗಿದೆ. 300 ಬಸ್​ಗಳ ಬಳಕೆ ಹಿನ್ನೆಲೆ ನಾಳೆ ಜಿಲ್ಲಾದ್ಯಂತ ಪ್ರಯಾಣಕ್ಕೆ ಸಮಸ್ಯೆ ಉಂಟಾಗಲಿದೆ. ಪ್ರಯಾಣಿಕರಿಗೆ ತೊಂದರೆ ಯಾಗುವ ಸಾಧ್ಯತೆ ಇದೆ.

Published On - 11:36 am, Sun, 5 February 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ