AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.6 ರಂದು ತುಮಕೂರಿಗೆ ಮೋದಿ: HAL ಹೆಲಿಕಾಪ್ಟರ್ ಕಾರ್ಖಾನೆ ಲೋಕಾರ್ಪಣೆ; ಬಿಗಿ ಪೊಲೀಸ್​ ಬಂದೋಬಸ್ತ, 300 KSRTC ಬಸ್​ ಬುಕ್​

ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಗುಬ್ಬಿ ತಾಲೂಕಿನ, ನಿಟ್ಟೂರು ಬಳಿಯ ಹೆಚ್​ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಉದ್ಘಾಟಿಸಲಿದ್ದಾರೆ.

ಫೆ.6 ರಂದು ತುಮಕೂರಿಗೆ ಮೋದಿ:  HAL ಹೆಲಿಕಾಪ್ಟರ್ ಕಾರ್ಖಾನೆ ಲೋಕಾರ್ಪಣೆ; ಬಿಗಿ ಪೊಲೀಸ್​ ಬಂದೋಬಸ್ತ, 300 KSRTC ಬಸ್​ ಬುಕ್​
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Feb 05, 2023 | 12:01 PM

Share

ತುಮಕೂರು: ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ. ಗುಬ್ಬಿ ತಾಲೂಕಿನ, ನಿಟ್ಟೂರು ಬಳಿಯ ಹೆಚ್​ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ MI17 ಹೆಲಿಕಾಪ್ಟರ್​ನಲ್ಲಿ ಬರಲಿದ್ದು, ಮಧ್ಯಾಹ್ನ 3.20ಕ್ಕೆ ಹೆಚ್ ಎಎಲ್ ಹೆಲಿಪ್ಯಾಡ್​ನಲ್ಲಿ ಇಳಿಯಲಿದ್ದಾರೆ. ಪ್ರಧಾನಿ 3.30ಕ್ಕೆ ತುಮಕೂರಿನ HAL ಹೆಲಿಕಾಪ್ಟರ್ ಕಾರ್ಖಾನೆಯ ಲೋಕಾರ್ಪಣೆ ಮತ್ತು ಜಲ ಜೀವನ್ ಮಿಷನ್ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ 1 ಗಂಟೆಗಳ ಕಾಲ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 4.40ಕ್ಕೆ ಹೆಚ್​ಎಎಲ್ ಹೆಲಿಪ್ಯಾಡ್​​ಗೆ ಆಗಮಿಸಿ, 4.45ಕ್ಕೆ‌ ಬೆಂಗಳೂರಿನತ್ತ ಪ್ರಯಾಣ ಬೆಳಸಲಿದ್ದಾರೆ.

ವಾಹನಗಳಿಗೆ ಬದಲಿ ಮಾರ್ಗ ಸೂಚನೆ

ನಾಳೆ ಬಾರಿ ಸರಕು ವಾಹನಗಳು, ಕೆಎಸ್ ಆರ್ ಟಿಸಿ ಬಸ್ ಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಡಿಸಿ ಆದೇಶ ಹೊಡಿಸಿದ್ದಾರೆ. ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾರ್ಗವಾಗಿ ಕೆಬಿ ಕ್ರಾಸ್​ಗೆ ಸಂಚರಿಸುವುದು. ತಿಪಟೂರಿನಿಂದ ಬರುವ ವಾಹನಗಳು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸುವುದು ಎದು ಹೇಳಿದ್ದಾರೆ. ಜೊತೆಗೆ ಪ್ರದಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆಗೆ ಮಾಡಲಾಗಿದೆ.

ಇದನ್ನೂ ಓದಿ: ತುಮಕೂರಿನಲ್ಲಿ ದೇಶದ ಅತಿದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ: ಸೋಮವಾರ ಪ್ರಧಾನಿಯಿಂದ ಉದ್ಘಾಟನೆ

ಪೊಲೀಸ್ ಬಿಗಿ ಬಂದೋಬಸ್ತ್

ತುಮಕೂರು ಎಸ್​ಪಿ ಸೇರಿದಂತೆ ಒಟ್ಟು 6 ಎಸ್​ಪಿಗಳ ನೇಮಕ ಮಾಡಲಾಗಿದೆ. 19 ಡಿವೈಎಸ್​ಪಿ, 119 ಸಿಪಿಐ, 239 ಪಿಎಸ್​ಐ, 1202 ಎಎಸ್​ಐ, ಹೆಡ್​​ಕಾನ್ಸ್​ಟೇಬಲ್, 400 ಕಾನ್ಸ್​ಟೇಬಲ್, ಹೋಮ್​ಗಾರ್ಡ್, 14 ಡಿಎಆರ್ ಮತ್ತು 12 ಕೆಎಸ್​ಆರ್​ಪಿ ತುಕಡಿ ಹಾಗೂ ನಾಳೆ ಭದ್ರತೆಗೆ ಒಟ್ಟು 1,600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಜನರನ್ನು ಕರೆತರಲು ಕೆಎಸ್​ಆರ್​ಟಿಸಿ ಹಾಗೂ ಖಾಸಗಿ ಬಸ್​ಗಳ ಬಳಕೆ

ಒಟ್ಟು 300 ಕ್ಕೂ ಹೆಚ್ಚು ಕೆಎಸ್​ಆರ್​ಟಿಸಿ ಬಸ್​​ಗಳನ್ನು ಬುಕ್​ ಮಾಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 609 ಕೆಎಸ್​ಆರ್​ಟಿಸಿ ಬಸ್​ಗಳಿವೆ. ಇದರಲ್ಲಿ ಸದ್ಯ 300 ಬಸ್​​ಗಳನ್ನು ಬುಕ್​ ಮಾಡಲಾಗಿದೆ. 300 ಬಸ್​ಗಳ ಬಳಕೆ ಹಿನ್ನೆಲೆ ನಾಳೆ ಜಿಲ್ಲಾದ್ಯಂತ ಪ್ರಯಾಣಕ್ಕೆ ಸಮಸ್ಯೆ ಉಂಟಾಗಲಿದೆ. ಪ್ರಯಾಣಿಕರಿಗೆ ತೊಂದರೆ ಯಾಗುವ ಸಾಧ್ಯತೆ ಇದೆ.

Published On - 11:36 am, Sun, 5 February 23

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು