AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನಕಾಯಿ ಕಳ್ಳತನ ಮಾಡಿದ ಆರೋಪ; ತುಮಕೂರಿನಲ್ಲಿ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿತ

ಮೂರು ತೆಂಗಿನಕಾಯಿ ಕದ್ದಿದ್ದಾರೆ ಅಂತ ಹರೀಶ್​ನ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ, ಜೊತೆಗೆ ತೆಂಗಿನಕಾಯಿ ಹಾರವನ್ನು ಕೊರಳಿಗೆ ಹಾಕಿ ಕಟ್ಟಿಗೆಯಿಂದ ಹೊಡೆದಿದ್ದಾರೆ. ಹರೀಶ್ ತಂದೆ ಗಂಗಾಧರಯ್ಯ ಎಂಬುವವರು ತುರುವೇಕೆರೆ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ.

ತೆಂಗಿನಕಾಯಿ ಕಳ್ಳತನ ಮಾಡಿದ ಆರೋಪ; ತುಮಕೂರಿನಲ್ಲಿ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿತ
ತೋಟದ ಮಾಲೀಕ ವ್ಯಕ್ತಿಯನ್ನ ಕಂಬಕ್ಕೆ ಕಟ್ಟಿಹಾಕಿ ಹೊಡೆಯುತ್ತಿದ್ದಾರೆ
TV9 Web
| Updated By: sandhya thejappa|

Updated on:Jan 02, 2022 | 3:06 PM

Share

ತುಮಕೂರು: ತೆಂಗಿನಕಾಯಿ ಕಳ್ಳತನ ಮಾಡಿದ್ದಾರೆಂದು ಆರೋಪಿಸಿ, ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತಾವರೆಕೆರೆಯಲ್ಲಿ ನಡೆದಿದೆ. ತೆಂಗಿನ ತೋಟದ ಮಾಲೀಕ ರಾಜು ಎಂಬುವವರು ಹರೀಶ್​ನನ್ನು ಕಟ್ಟಿಹಾಕಿ ಥಳಿಸಿದ್ದಾರೆ. ತಮ್ಮ ತೋಟದಲ್ಲಿ ಮೂರು ತೆಂಗಿನಕಾಯಿಗಳನ್ನ ಕದ್ದಿದ್ದಾನೆ ಎಂದು ಆರೋಪಿಸಿ ರಾಜು ವ್ಯಕ್ತಿಗೆ ಥಳಿಸಿದ್ದಾರೆ. ಸದ್ಯ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಮೂರು ತೆಂಗಿನಕಾಯಿ ಕದ್ದಿದ್ದಾರೆ ಅಂತ ಹರೀಶ್​ನ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ, ಜೊತೆಗೆ ತೆಂಗಿನಕಾಯಿ ಹಾರವನ್ನು ಕೊರಳಿಗೆ ಹಾಕಿ ಕಟ್ಟಿಗೆಯಿಂದ ಹೊಡೆದಿದ್ದಾರೆ. ಹರೀಶ್ ತಂದೆ ಗಂಗಾಧರಯ್ಯ ಎಂಬುವವರು ತುರುವೇಕೆರೆ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಈ ಘಟನೆ ಡಿಸೆಂಬರ್ 18 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಡಕೆ ಕದಿಯುತ್ತಿದ್ದ ಮೂವರು ಅರೆಸ್ಟ್ ತೋಟಗಳಲ್ಲಿ ಅಡಕೆ ಕದಿಯುತ್ತಿದ್ದ ಮೊವರನ್ನ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ ಭಾಗದಲ್ಲಿ ಆರೋಪಿಗಳು ಅಡಕೆ ಕಳ್ಳತನ ಮಾಡುತ್ತಿದ್ದರು. ಕತ್ತಾಳೆಪಾಳ್ಯದ ರವಿಶಂಕರ್(32), ಶಶಿಕುಮಾರ್(26), ನಟರಾಜ(30) ಎಂಬು.ವರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಸುಮಾರು 300 ಕೆಜಿ ಅಡಕೆಯನ್ನು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಶಾಂತಕುಮಾರ್​ಗೆ(28) ಶೋಧ ಕಾರ್ಯ ಮುಂದುವರೆದಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಸಂಜನಾ ಗಲ್ರಾನಿ ಪ್ರೆಗ್ನೆಂಟ್​; ಹೊಸ ವರ್ಷದ ಸಂಭ್ರಮದ ಜತೆಗೆ ಗುಡ್​ ನ್ಯೂಸ್​ ಹಂಚಿಕೊಂಡ ನಟಿ

Literature : ಅಭಿಜ್ಞಾನ ; ಕಿರಂ ಈದ ಹುಲಿಯ ರಕ್ಷಣೆಗೆ ಧಾವಿಸುತ್ತಿದ್ದದ್ದು ಈ ಸಂದರ್ಭದಲ್ಲಿ

Published On - 2:51 pm, Sun, 2 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ