AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?

ತುಮಕೂರಿನ ಪಾವಗಡದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಾಧಿಕಾರಿ ಜಂಟಿ ನಿರ್ದೇಶಕರ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ವೈರಲ್ ವಿಡಿಯೋ ಹಾಗೂ ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ. ಕಚೇರಿಯಲ್ಲೇ ನೇಣಿಗೆ ಶರಣಾದ ಮಲ್ಲಿಕಾರ್ಜುನ, ಸಾವಿಗೂ ಮುನ್ನ ವಿಡಿಯೋ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?
ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?
ಜಗದೀಶ ಬಿ.
| Edited By: |

Updated on: Mar 21, 2026 | 8:40 AM

Share

ತುಮಕೂರು, ಮಾರ್ಚ್​ 21: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59) ಆತ್ಮಹತ್ಯೆ (suicide) ಮಾಡಿಕೊಂಡ ಘಟನೆ ಭಾರಿ ವಿವಾದ ಎಬ್ಬಿಸಿದೆ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ.

ಮೇಲಾಧಿಕಾರಿ ಕಿರುಕುಳದಿಂದ ಬೇಸತ್ತಿದ್ದ ಮಲ್ಲಿಕಾರ್ಜುನ

ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಕೃಷ್ಣಪ್ಪ ಅವರಿಗೆ ದೇವರು ಹಾಗೂ ಕಾನೂನು ಶಿಕ್ಷೆ ನೀಡಲಿದೆ ಎಂದೂ ಹೇಳಿದ್ದಾರೆ.

ಸಾವಿಗೂ ಮುನ್ನ ಅಧಿಕಾರಿ ಮಾಡಿದ ವೀಡಿಯೋ ಇಲ್ಲಿದೆ

ಡೆತ್ ನೋಟ್ ವಶಕ್ಕೆ ಪಡೆದಿರುವ ಪೊಲೀಸರು

ಮಲ್ಲಿಕಾರ್ಜುನ ಮೂಲತಃ ಪಾವಗಡ ತಾಲೂಕಿನವರಾಗಿದ್ದು, ಕಳೆದ ಮೂರು ವರ್ಷಗಳಿಂದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನೂ ಕೆಲವೇ ದಿನಗಳಲ್ಲಿ ಅವರ ಸೇವಾ ಅವಧಿ ಮುಕ್ತಾಯಗೊಳ್ಳಬೇಕಿತ್ತು. ಆದರೆ ಜಂಟಿ ನಿರ್ದೇಶಕ ನೀಡಿದ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ದಿನ ಸಂಜೆ, ಕಚೇರಿಯ ಎಲ್ಲಾ ಸಿಬ್ಬಂದಿ ತೆರಳಿದ ನಂತರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.

ಸಾವಿಗೆ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಅದರಲ್ಲಿ ಕೃಷ್ಣಪ್ಪ ಹಾಗೂ ಹಣಕಾಸು ಸಂಬಂಧಿತ ವಿಚಾರಗಳನ್ನೂ ಉಲ್ಲೇಖಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟ್ ವಶಪಡಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ