AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?

ತುಮಕೂರಿನ ಪಾವಗಡದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಾಧಿಕಾರಿ ಜಂಟಿ ನಿರ್ದೇಶಕರ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ವೈರಲ್ ವಿಡಿಯೋ ಹಾಗೂ ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ. ಕಚೇರಿಯಲ್ಲೇ ನೇಣಿಗೆ ಶರಣಾದ ಮಲ್ಲಿಕಾರ್ಜುನ, ಸಾವಿಗೂ ಮುನ್ನ ವಿಡಿಯೋ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?
ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?
Jagadisha B
| Edited By: |

Updated on: Mar 21, 2026 | 8:40 AM

Share

ತುಮಕೂರು, ಮಾರ್ಚ್​ 21: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59) ಆತ್ಮಹತ್ಯೆ (suicide) ಮಾಡಿಕೊಂಡ ಘಟನೆ ಭಾರಿ ವಿವಾದ ಎಬ್ಬಿಸಿದೆ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ.

ಮೇಲಾಧಿಕಾರಿ ಕಿರುಕುಳದಿಂದ ಬೇಸತ್ತಿದ್ದ ಮಲ್ಲಿಕಾರ್ಜುನ

ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಕೃಷ್ಣಪ್ಪ ಅವರಿಗೆ ದೇವರು ಹಾಗೂ ಕಾನೂನು ಶಿಕ್ಷೆ ನೀಡಲಿದೆ ಎಂದೂ ಹೇಳಿದ್ದಾರೆ.

ಸಾವಿಗೂ ಮುನ್ನ ಅಧಿಕಾರಿ ಮಾಡಿದ ವೀಡಿಯೋ ಇಲ್ಲಿದೆ

ಡೆತ್ ನೋಟ್ ವಶಕ್ಕೆ ಪಡೆದಿರುವ ಪೊಲೀಸರು

ಮಲ್ಲಿಕಾರ್ಜುನ ಮೂಲತಃ ಪಾವಗಡ ತಾಲೂಕಿನವರಾಗಿದ್ದು, ಕಳೆದ ಮೂರು ವರ್ಷಗಳಿಂದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನೂ ಕೆಲವೇ ದಿನಗಳಲ್ಲಿ ಅವರ ಸೇವಾ ಅವಧಿ ಮುಕ್ತಾಯಗೊಳ್ಳಬೇಕಿತ್ತು. ಆದರೆ ಜಂಟಿ ನಿರ್ದೇಶಕ ನೀಡಿದ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ದಿನ ಸಂಜೆ, ಕಚೇರಿಯ ಎಲ್ಲಾ ಸಿಬ್ಬಂದಿ ತೆರಳಿದ ನಂತರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.

ಸಾವಿಗೆ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಅದರಲ್ಲಿ ಕೃಷ್ಣಪ್ಪ ಹಾಗೂ ಹಣಕಾಸು ಸಂಬಂಧಿತ ವಿಚಾರಗಳನ್ನೂ ಉಲ್ಲೇಖಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟ್ ವಶಪಡಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು