AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸ್ತ್ರೀಯರ ಶೌಚಾಲಯದಲ್ಲಿ ವಿಡಿಯೋ ಮಾಡುತ್ತಿದ್ದವನಿಗೆ ಗೂಸಾ

Tumakur News: ಸ್ಕ್ಯಾನಿಂಗ್ ಸೆಂಟರ್​ನಲ್ಲಿ ಕೆಲಸ ಮಾಡ್ತಿದ್ದ ಹರೀಶ್​ನಿಂದ ಈ ದುಷ್ಕೃತ್ಯ ಎಸಗಲಾಗುತ್ತಿತ್ತು ಎಂದು ತಿಳಿದುಬಂದಿದೆ. ಚಾಮರಾಜನಗರ ಮೂಲದ ಹರೀಶ್​ಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ತುಮಕೂರು: ಸ್ತ್ರೀಯರ ಶೌಚಾಲಯದಲ್ಲಿ ವಿಡಿಯೋ ಮಾಡುತ್ತಿದ್ದವನಿಗೆ ಗೂಸಾ
ಶೌಚಾಲಯದಲ್ಲಿ ವಿಡಿಯೋ ಮಾಡುತ್ತಿದ್ದವನಿಗೆ ಗೂಸಾ
TV9 Web
| Edited By: |

Updated on:Oct 19, 2021 | 11:03 PM

Share

ತುಮಕೂರು: ಸ್ತ್ರೀಯರ ಶೌಚಾಲಯದಲ್ಲಿ ವಿಡಿಯೋ ತೆಗೀತಿದ್ದವನಿಗೆ ಗೂಸಾ ನೀಡಿದ ಘಟನೆ ತುಮಕೂರಿನ ವಿಶ್ವ ಗುರು ಸ್ಕ್ಯಾನಿಂಗ್ ಸೆಂಟರ್​ನಲ್ಲಿ ನಡೆದಿದೆ. ಸ್ಕ್ಯಾನಿಂಗ್ ಸೆಂಟರ್​ನಲ್ಲಿ ಕೆಲಸ ಮಾಡ್ತಿದ್ದ ಹರೀಶ್​ನಿಂದ ಈ ದುಷ್ಕೃತ್ಯ ಎಸಗಲಾಗುತ್ತಿತ್ತು ಎಂದು ತಿಳಿದುಬಂದಿದೆ. ಚಾಮರಾಜನಗರ ಮೂಲದ ಹರೀಶ್​ಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಸಾರ್ವಜನಿಕರು, ಮಹಿಳೆಯರಿಂದ ಹರೀಶ್​ಗೆ ಧರ್ಮದೇಟು ಕೊಡಲಾಗಿದೆ.

ಆತ ಸ್ಕ್ಯಾನಿಂಗ್ ಸೆಂಟರ್​ನ ಟಾಯ್ಲೆಟ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಹರೀಶ್​, ಮೊಬೈಲ್​ ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಹರೀಶ್​ನ ಮೊಬೈಲ್​ನಲ್ಲಿ ಮಹಿಳೆಯರ ಬೆತ್ತಲೆ ವಿಡಿಯೋ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆತನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ಹೊಸಬಡಾವಣೆ ಠಾಣಾ ಪೊಲೀಸರ ವಶಕ್ಕೆ ಹರೀಶ್​ ಸಿಕ್ಕಿಬಿದ್ದಿದ್ದಾನೆ.

ಗದಗ: ಮಹಿಳೆಗೆ ಅನೈತಿಕ ಸಂಬಂಧ ಇದೆ ಎಂದು ಥಳಿತ ಮಹಿಳೆಗೆ ಅನೈತಿಕ ಸಂಬಂಧ ಇದೆ ಎಂದು ಅರೆಬೆತ್ತಲೆ ಮಾಡಿ ಮಹಿಳೆ ಒಬ್ಬಾಕೆಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಕೇರಿಯಲ್ಲಿ ಘಟನೆ ನಡೆದಿದೆ. ಮಹಿಳೆಯನ್ನು ಗ್ರಾಮದ ನಡು ರಸ್ತೆಯಲ್ಲಿ ಎಳೆದು ಅರೆಬೆತ್ತಲೆ ಮಾಡಿ ಥಳಿಸಿರುವ ಆರೋಪ ಕೇಳಿಬಂದಿದೆ. ಗಾಯಾಳು ಮಹಿಳೆಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಚಪ್ಪ, ಬಸು, ಮಂಜುನಾಥ, ಅಂದಪ್ಪ, ಸಿದ್ದವ್ವ, ವಿಜಯಲಕ್ಷ್ಮೀ, ಬಸಮ್ಮ ವಿರುದ್ಧ ಹಲ್ಲೆ ಆರೋಪ ಇದೆ. ಆದರೆ, ಈ ಬಗ್ಗೆ ದೂರು ದಾಖಲಿಸಿಕೊಳ್ಳದ ಪೊಲೀಸರ ವಿರುದ್ಧ ಹಲ್ಲೆಗೊಳಗಾದವರು ಆರೋಪ ಮಾಡಿದ್ದಾರೆ.

ರಾಯಚೂರು: ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ವಶ ಉಪ್ಪರಾಳದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆಯಲಾಗಿದೆ. ರಾಯಚೂರು ತಾಲೂಕಿನ ಉಪ್ಪರಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಉಪ್ಪರಾಳದ ಸಿದ್ದನಗೌಡ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ವಶಪಡಿಸಲಾಗಿದೆ.

ಇದನ್ನೂ ಓದಿ: ಹಾಸನ: ಸಮವಸ್ತ್ರದಲ್ಲೇ ಪೊಲೀಸರ ಎಣ್ಣೆ ಪಾರ್ಟಿ; ವಿಡಿಯೋ ವೈರಲ್​

ಇದನ್ನೂ ಓದಿ: ಮಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ; ಮಹಿಳಾ ವೇದಿಕೆ ಸದಸ್ಯೆ ವಿರುದ್ಧವೇ ಎಫ್​ಐಆರ್ ದಾಖಲು

Published On - 4:38 pm, Tue, 19 October 21

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ