Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಹಾರೋ ಬೂದಿಗೆ ಚಿನ್ನದ ಬೆಲೆ, ವಿಲೇವಾರಿ ವಾಹನಗಳಿಂದ ಖಾಕಿ ಹಫ್ತಾ ವಸೂಲಿ

ರಾಯಚೂರು ಜಿಲ್ಲೆಯಲ್ಲಿರುವ ವಿದ್ಯುತ್ ಉತ್ಪಾದನಾ ಘಟಕದಿಂದ ಹಾರಿ ಬರುವ ಬೂದಿಯನ್ನು ವಿಲೇವಾರಿ ಮಾಡಲು ಕೊಂಡೊಯ್ಯುವ ಟ್ರಕ್​ಗಳನ್ನು ತಡೆಯುತ್ತಿರುವ ಶಕ್ತಿನಗರ ಠಾಣಾ ಪೊಲೀಸರು, ಹಫ್ತ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ತಿಂಗಳಿಗೆ ಇಂತಿಷ್ಟು ಅಂತ ವಾಹನ ಚಾಲಕರು ನೀಡಬೇಕಂತೆ. ಸದ್ಯ ಹಣ ನೀಡದ ಹಿನ್ನೆಲೆ ನಾಲ್ಕು ದಿನಗಳಿಂದ ಅರಣ್ಯ ಪ್ರದೇಶದಲ್ಲಿ ಲೋಡೆಡ್ ಟ್ರಕ್​ಗಳು ನಿಂತಲ್ಲೇ ನಿಂತಿವೆ.

ರಾಯಚೂರು: ಹಾರೋ ಬೂದಿಗೆ ಚಿನ್ನದ ಬೆಲೆ, ವಿಲೇವಾರಿ ವಾಹನಗಳಿಂದ ಖಾಕಿ ಹಫ್ತಾ ವಸೂಲಿ
ಹಾರೋ ಬೂದಿ ತುಂಬಿರುವ ಟ್ರಕ್​ಗಳು
Follow us
ಭೀಮೇಶ್​​ ಪೂಜಾರ್
| Updated By: Rakesh Nayak Manchi

Updated on:Sep 17, 2023 | 11:52 AM

ತುಮಕೂರು, ಸೆ.17: ಜಿಲ್ಲೆಯಲ್ಲಿರುವ ಆರ್​​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಿಂದ ಹಾರಿ ಬರುವ ಬೂದಿಯನ್ನು (Power Generation Unit Ashes) ವಿಲೇವಾರಿ ಮಾಡಲು ಕೊಂಡೊಯ್ಯುವ ಟ್ರಕ್​ಗಳನ್ನು ತಡೆಯುತ್ತಿರುವ ಶಕ್ತಿನಗರ ಠಾಣಾ ಪೊಲೀಸರು, ಹಫ್ತ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ತಿಂಗಳಿಗೆ ಇಂತಿಷ್ಟು ಅಂತ ವಾಹನ ಚಾಲಕರು ನೀಡಬೇಕಂತೆ. ಸದ್ಯ ಹಣ ನೀಡದ ಹಿನ್ನೆಲೆ ನಾಲ್ಕು ದಿನಗಳಿಂದ 600 ರಿಂದ 700 ಟ್ರಕ್​ಗಳು ಅರಣ್ಯ ಪ್ರದೇಶದಲ್ಲಿ ನಿಂತಲ್ಲೇ ನಿಂತಿವೆ.

ರಾಯಚೂರು ತಾಲೂಕಿನ ಶಕ್ತಿನಗರದ ಆರ್​ಟಿಪಿಎಸ್ ವ್ಯಾಪ್ತಿಯಲ್ಲಿ ಹಣ ವಸೂಲಿಗಾಗಿ ಶಕ್ತಿ ನಗರ ಠಾಣೆ ಪಿಎಸ್​ಐ ಸೌಮ್ಯ ವಾಹನಗಳನ್ನ ತಡೆದು ನಿಲ್ಲಿಸುತ್ತಿದ್ದಾರೆ. ಹಣ ಕೊಡದ್ದಕ್ಕೆ ಸುಮಾರು 600-700 ಟ್ರಕ್​ಗಳನ್ನು ಅರಣ್ಯ ಪ್ರದೇಶದಲ್ಲಿ ನಿಲ್ಲಿಸಲಾಗಿದೆ. ಹೀಗೆ ನಿಲ್ಲಿಸಿದ ವಾಹನಗಳು ಸುಮಾರು 2 ಕಿ.ಮೀ ವ್ಯಾಪ್ತಿಯುದ್ದಕ್ಕೂ ವ್ಯಾಪಿಸಿದೆ.

ಇದನ್ನೂ ಓದಿ: ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಿಸಲು ವಾಹನ ಸವಾರರಿಂದ ದಟ್ಟಣೆ ಶುಲ್ಕ ವಸೂಲಿಗೆ ಚಿಂತನೆ

ಸುಮಾರು 600-700 ಟ್ರಕರ್​ಗಳಿಂದ ತಿಂಗಳಿಗೆ 6-7 ಸಾವಿರ ಹಫ್ತಾ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಒಂದು ಹೊತ್ತಿನ ಊಟಕ್ಕೆ ಮತ್ತು ಒಂದು ಹನಿ ನೀರಿಗೂ ಪರದಾಡುವಂತಾಗಿದೆ. ಟ್ರಕ್ ಹೊರಗಡೆ ಹೋಗಬೇಕೆಂದರೆ ಹಫ್ತ ನೀಡಲೇ ಬೇಕು ಅಂತ ಎಚ್ಚರಿಕೆ ನೀಡಿದ್ದಾರೆ. ಇದರಿಂದಾಗಿ ನಾವು ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ಚಾಲಕರು, ಕ್ಲೀನರ್​ಗಳು ಗಂಭೀರ ಆರೋಪ ಮಾಡಿದ್ದಾರೆ.

ಆರ್​​ಟಿಪಿಎಸ್​ನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಳಕೆಯಾಗುವ ಕಲ್ಲಿದ್ದಲಿನ ವೇಸ್ಟೇಜ್​​ಗೆ ಆ್ಯಶ್ (ಹಾರೋ ಬೂದಿ) ಅಂತ ಹೆಸರು. ಸಿಮೆಂಟ್ ಫ್ಯಾಕ್ಟರಿ, ಕಾರ್ಖಾನೆಗಳಲ್ಲಿ ಬಳಕೆಯಾಗುವ ಆ್ಯಶ್​ಗೆ ಆಂಧ್ರ, ತೆಲಂಗಾಣ, ರಾಜ್ಯದಲ್ಲೂ ಭಾರೀ ಬೇಡಿಕೆ ಇದೆ. ಈ ಹಾರೋ ಬೂದಿಗೆ ಚಿನ್ನದ ಬೆಲೆ ಬಂದಿದ್ದರಿಂದ ಈಗ ಪೊಲೀಸರು ಹಫ್ತಾಗೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಎಸ್​ಪಿ, ಹೆಚ್ಚುವರಿ ಎಸ್​ಪಿ ಅವರಿಗೂ ಮಾಹಿತಿ ಇಲ್ಲದೇ 700 ಟ್ರಕ್​ಗಳನ್ನು ತಡೆದು ನಿಲ್ಲಿಸಲಾಗಿದೆ. ಈ ಬಗ್ಗೆ ಮಾಹಿತಿ ಕೇಳಿದ ಹಿರಿಯ ಅಧಿಕಾರಿಗಳು ಶಾಕ್ ಆಗಿದ್ದಾರೆ. ಆರ್​ಟಿಪಿಎಸ್ ವಿವಿಧ ಕಂಪೆನಿಗಳಿಗೆ ಆ್ಯಶ್ ನೀಡಿ ವಾರ್ಷಿಕ ಸುಮಾರು 40 ಕೋಟಿ ವರೆಗೆ ಆದಾಯ ಪಡೆಯುತ್ತಿದೆ.

ನಿಮಯ ಗಾಳಿಗೆ ತೂರಿ ಬೂದಿ ಸಾಗಾಟ

ಬೂದಿ ಸಾಗಿಸುವಾಗ ನೀರನ್ನು ಸಿಂಪಡಿಸಿಕೊಂಡು ಕೊಂಡೊಯ್ಯಬೇಕು. ಆದರೆ, ಈ ಟ್ರಕ್​ಗಳಲ್ಲಿ ನೀರನ್ನು ಸಿಂಪಡಿಸದೇ ಸಾಗಿಸುತ್ತಿದ್ದಿದ್ದರಿಂದ ಊರಿನ ಜನರಿಗೆ ಸಮಸ್ಯೆ ಉಂಟಾಗುತ್ತಿತ್ತು. ಹೀಗಾಗಿ ಪೊಲೀಸರು ಟ್ರಕ್​ಗಳನ್ನು ತಡೆದಿದ್ದಾರೆ ಹೊರತು ಹಣ ವಸೂಲಿಗಲ್ಲ ಎಂದು ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದಡ್ಡಾಲ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:38 am, Sun, 17 September 23

ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ