AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ; ಸಾವಿಗೆ ಸತ್ಯಾಂಶ ತಿಳಿಯಲು ಹೂತ್ತಿದ್ದ ಮೃತದೇಹ ಹೊರತೆಗೆದ ಪೊಲೀಸ್ರು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬಡಮುದ್ದಯ್ಯನಪಾಳ್ಯದ ಗೊಲ್ಲರಹಟ್ಟಿಯಲ್ಲಿ ಕಾಡುಗೊಲ್ಲ (Kuadgolla) ಸಮಾಜದ ಮೂಢನಂಬಿಕೆಗೆ ಜುಲೈ 23ರಂದು ಸಿದ್ದೇಶ್-ವಸಂತಾ ದಂಪತಿಯ ಮಗು ಮೃತಪಟ್ಟಿತ್ತು. ಈ ಘಟನೆಗೆ ಸಂಬಂಧಿಸಿ ಇದೀಗ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ತುಮಕೂರು: ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ; ಸಾವಿಗೆ ಸತ್ಯಾಂಶ ತಿಳಿಯಲು ಹೂತ್ತಿದ್ದ ಮೃತದೇಹ ಹೊರತೆಗೆದ ಪೊಲೀಸ್ರು
ತುಮಕೂರು ಜಿಲ್ಲೆಯಲ್ಲಿ ಮೌಢ್ಯಕ್ಕೆ ಮಗು ಬಲಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 02, 2023 | 1:58 PM

Share

ತುಮಕೂರು, ಆ.2: ಜಿಲ್ಲೆಯ ಕೊರಟಗೆರೆ ತಾಲೂಕಿನ ಬಡಮುದ್ದಯ್ಯನಪಾಳ್ಯದ ಗೊಲ್ಲರಹಟ್ಟಿಯಲ್ಲಿ ಕಾಡುಗೊಲ್ಲ (Kuadgolla) ಸಮಾಜದ ಮೂಢನಂಬಿಕೆಗೆ ಜುಲೈ 23ರಂದು ಸಿದ್ದೇಶ್-ವಸಂತಾ ದಂಪತಿಯ ಮಗು ಮೃತಪಟ್ಟಿತ್ತು. ಬಳಿಕ ಸ್ವಗ್ರಾಮ ಬಡಮುದ್ದಯ್ಯನಪಾಳ್ಯದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು‌. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗು ಸಾವಿನ ನಿಜವಾದ ಕಾರಣ ತಿಳಿಯಲು ಇದೀಗ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಉಪಸ್ಥಿತಿಯಲ್ಲಿ ಮೃತದೇಹವನ್ನ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಘಟನೆ ವಿವರ

ವಸಂತಾ ಎಂಬ ಮಹಿಳೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವಳಿ‌ ಶಿಶುವಿಗೆ ಜನ್ಮ ನೀಡಿದ್ದರು. ಆದರೆ, ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಆರೋಗ್ಯವಾಗಿತ್ತು. ಬಳಿಕ ತನ್ನ ಗ್ರಾಮಕ್ಕೆ ವಾಪಸ್ ಬಂದ ವಸಂತಾಳಿಗೆ ಕಾಡುಗೊಲ್ಲ ಸಮುದಾಯದ ಮುಖಂಡರು ನಮ್ಮ ಸಮುದಾಯದ ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಸೂತಕ ಆಗುವುದಿಲ್ಲ. ಹೀಗಾಗಿ ನಾವು ಗ್ರಾಮದೊಳಗೆ ಬಿಟ್ಟುಕೊಳ್ಳುವುದಿಲ್ಲ. ಸೂತಕದ ಬಾಣಂತಿ ಊರ ಒಳಗೆ ಬಂದರೇ ಕೇಡು ಎಂದು ಊರಾಚೆಯ ಜಮೀನಿನಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಸಿಲಿನಲ್ಲಿ ಏಕಾಂಗಿಯಾಗಿ ವಾಸ ಮಾಡುವಂತೆ ಆದೇಶ ನೀಡಿದ್ದರು.

ಇದನ್ನೂ ಓದಿ:ಚಿತ್ರದುರ್ಗ: ಋತುಚಕ್ರದ ವೇಳೆ ಹಟ್ಟಿಯಿಂದ ಹೊರ ಉಳಿದ ಮಹಿಳೆಯರನ್ನು ಮನೆ ಒಳಗೆ ಬಿಟ್ಟು, ಮೌಢ್ಯ ಆಚರಣೆ ನಿಲ್ಲಿಸುವಂತೆ ಗ್ರಾಮಸ್ಥರಿಗೆ ಶಾಸಕಿ ಪೂರ್ಣಿಮಾ ತರಾಟೆ

ಬಳಿಕ ಊರಾಚೆ ಗುಡಿಸಿಲಿನಲ್ಲಿ, ಮಳೆ-ಚಳಿಯಲ್ಲಿ ಏಕಾಂಗಿಯಾಗಿ ವಾಸವಿದ್ದಳು. ಆದರೆ. ಮಗುವಿಗೆ ವಿಪರೀತ ಶೀತವಾಗಿ ಪ್ರಾಣ ಬಿಟ್ಟಿತ್ತು. ನಂತರ ಈ ಘಟನೆಯನ್ನ ಟಿವಿ9ನಲ್ಲಿ ಬಿತ್ತರಿಸುತ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಲ್ಲೇನಹಳ್ಳಿ ಗೊಲ್ಲರಹಟ್ಟಿಗೆ ಭೇಟಿ ನೀಡಿ, ಗ್ರಾಮಸ್ಥರ ಮನವೊಲಿಸಿ ವಸಂತರನ್ನು ಮನೆಗೆ ಸೇರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Wed, 2 August 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ