ತುಮಕೂರು: ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ; ಸಾವಿಗೆ ಸತ್ಯಾಂಶ ತಿಳಿಯಲು ಹೂತ್ತಿದ್ದ ಮೃತದೇಹ ಹೊರತೆಗೆದ ಪೊಲೀಸ್ರು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬಡಮುದ್ದಯ್ಯನಪಾಳ್ಯದ ಗೊಲ್ಲರಹಟ್ಟಿಯಲ್ಲಿ ಕಾಡುಗೊಲ್ಲ (Kuadgolla) ಸಮಾಜದ ಮೂಢನಂಬಿಕೆಗೆ ಜುಲೈ 23ರಂದು ಸಿದ್ದೇಶ್-ವಸಂತಾ ದಂಪತಿಯ ಮಗು ಮೃತಪಟ್ಟಿತ್ತು. ಈ ಘಟನೆಗೆ ಸಂಬಂಧಿಸಿ ಇದೀಗ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ತುಮಕೂರು: ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ; ಸಾವಿಗೆ ಸತ್ಯಾಂಶ ತಿಳಿಯಲು ಹೂತ್ತಿದ್ದ ಮೃತದೇಹ ಹೊರತೆಗೆದ ಪೊಲೀಸ್ರು
ತುಮಕೂರು ಜಿಲ್ಲೆಯಲ್ಲಿ ಮೌಢ್ಯಕ್ಕೆ ಮಗು ಬಲಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 02, 2023 | 1:58 PM

ತುಮಕೂರು, ಆ.2: ಜಿಲ್ಲೆಯ ಕೊರಟಗೆರೆ ತಾಲೂಕಿನ ಬಡಮುದ್ದಯ್ಯನಪಾಳ್ಯದ ಗೊಲ್ಲರಹಟ್ಟಿಯಲ್ಲಿ ಕಾಡುಗೊಲ್ಲ (Kuadgolla) ಸಮಾಜದ ಮೂಢನಂಬಿಕೆಗೆ ಜುಲೈ 23ರಂದು ಸಿದ್ದೇಶ್-ವಸಂತಾ ದಂಪತಿಯ ಮಗು ಮೃತಪಟ್ಟಿತ್ತು. ಬಳಿಕ ಸ್ವಗ್ರಾಮ ಬಡಮುದ್ದಯ್ಯನಪಾಳ್ಯದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು‌. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗು ಸಾವಿನ ನಿಜವಾದ ಕಾರಣ ತಿಳಿಯಲು ಇದೀಗ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಉಪಸ್ಥಿತಿಯಲ್ಲಿ ಮೃತದೇಹವನ್ನ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಘಟನೆ ವಿವರ

ವಸಂತಾ ಎಂಬ ಮಹಿಳೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವಳಿ‌ ಶಿಶುವಿಗೆ ಜನ್ಮ ನೀಡಿದ್ದರು. ಆದರೆ, ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಆರೋಗ್ಯವಾಗಿತ್ತು. ಬಳಿಕ ತನ್ನ ಗ್ರಾಮಕ್ಕೆ ವಾಪಸ್ ಬಂದ ವಸಂತಾಳಿಗೆ ಕಾಡುಗೊಲ್ಲ ಸಮುದಾಯದ ಮುಖಂಡರು ನಮ್ಮ ಸಮುದಾಯದ ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಸೂತಕ ಆಗುವುದಿಲ್ಲ. ಹೀಗಾಗಿ ನಾವು ಗ್ರಾಮದೊಳಗೆ ಬಿಟ್ಟುಕೊಳ್ಳುವುದಿಲ್ಲ. ಸೂತಕದ ಬಾಣಂತಿ ಊರ ಒಳಗೆ ಬಂದರೇ ಕೇಡು ಎಂದು ಊರಾಚೆಯ ಜಮೀನಿನಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಸಿಲಿನಲ್ಲಿ ಏಕಾಂಗಿಯಾಗಿ ವಾಸ ಮಾಡುವಂತೆ ಆದೇಶ ನೀಡಿದ್ದರು.

ಇದನ್ನೂ ಓದಿ:ಚಿತ್ರದುರ್ಗ: ಋತುಚಕ್ರದ ವೇಳೆ ಹಟ್ಟಿಯಿಂದ ಹೊರ ಉಳಿದ ಮಹಿಳೆಯರನ್ನು ಮನೆ ಒಳಗೆ ಬಿಟ್ಟು, ಮೌಢ್ಯ ಆಚರಣೆ ನಿಲ್ಲಿಸುವಂತೆ ಗ್ರಾಮಸ್ಥರಿಗೆ ಶಾಸಕಿ ಪೂರ್ಣಿಮಾ ತರಾಟೆ

ಬಳಿಕ ಊರಾಚೆ ಗುಡಿಸಿಲಿನಲ್ಲಿ, ಮಳೆ-ಚಳಿಯಲ್ಲಿ ಏಕಾಂಗಿಯಾಗಿ ವಾಸವಿದ್ದಳು. ಆದರೆ. ಮಗುವಿಗೆ ವಿಪರೀತ ಶೀತವಾಗಿ ಪ್ರಾಣ ಬಿಟ್ಟಿತ್ತು. ನಂತರ ಈ ಘಟನೆಯನ್ನ ಟಿವಿ9ನಲ್ಲಿ ಬಿತ್ತರಿಸುತ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಲ್ಲೇನಹಳ್ಳಿ ಗೊಲ್ಲರಹಟ್ಟಿಗೆ ಭೇಟಿ ನೀಡಿ, ಗ್ರಾಮಸ್ಥರ ಮನವೊಲಿಸಿ ವಸಂತರನ್ನು ಮನೆಗೆ ಸೇರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Wed, 2 August 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?