AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ; ಸಾವಿಗೆ ಸತ್ಯಾಂಶ ತಿಳಿಯಲು ಹೂತ್ತಿದ್ದ ಮೃತದೇಹ ಹೊರತೆಗೆದ ಪೊಲೀಸ್ರು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬಡಮುದ್ದಯ್ಯನಪಾಳ್ಯದ ಗೊಲ್ಲರಹಟ್ಟಿಯಲ್ಲಿ ಕಾಡುಗೊಲ್ಲ (Kuadgolla) ಸಮಾಜದ ಮೂಢನಂಬಿಕೆಗೆ ಜುಲೈ 23ರಂದು ಸಿದ್ದೇಶ್-ವಸಂತಾ ದಂಪತಿಯ ಮಗು ಮೃತಪಟ್ಟಿತ್ತು. ಈ ಘಟನೆಗೆ ಸಂಬಂಧಿಸಿ ಇದೀಗ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ತುಮಕೂರು: ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ; ಸಾವಿಗೆ ಸತ್ಯಾಂಶ ತಿಳಿಯಲು ಹೂತ್ತಿದ್ದ ಮೃತದೇಹ ಹೊರತೆಗೆದ ಪೊಲೀಸ್ರು
ತುಮಕೂರು ಜಿಲ್ಲೆಯಲ್ಲಿ ಮೌಢ್ಯಕ್ಕೆ ಮಗು ಬಲಿ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 02, 2023 | 1:58 PM

ತುಮಕೂರು, ಆ.2: ಜಿಲ್ಲೆಯ ಕೊರಟಗೆರೆ ತಾಲೂಕಿನ ಬಡಮುದ್ದಯ್ಯನಪಾಳ್ಯದ ಗೊಲ್ಲರಹಟ್ಟಿಯಲ್ಲಿ ಕಾಡುಗೊಲ್ಲ (Kuadgolla) ಸಮಾಜದ ಮೂಢನಂಬಿಕೆಗೆ ಜುಲೈ 23ರಂದು ಸಿದ್ದೇಶ್-ವಸಂತಾ ದಂಪತಿಯ ಮಗು ಮೃತಪಟ್ಟಿತ್ತು. ಬಳಿಕ ಸ್ವಗ್ರಾಮ ಬಡಮುದ್ದಯ್ಯನಪಾಳ್ಯದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು‌. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗು ಸಾವಿನ ನಿಜವಾದ ಕಾರಣ ತಿಳಿಯಲು ಇದೀಗ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಉಪಸ್ಥಿತಿಯಲ್ಲಿ ಮೃತದೇಹವನ್ನ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಘಟನೆ ವಿವರ

ವಸಂತಾ ಎಂಬ ಮಹಿಳೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವಳಿ‌ ಶಿಶುವಿಗೆ ಜನ್ಮ ನೀಡಿದ್ದರು. ಆದರೆ, ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಆರೋಗ್ಯವಾಗಿತ್ತು. ಬಳಿಕ ತನ್ನ ಗ್ರಾಮಕ್ಕೆ ವಾಪಸ್ ಬಂದ ವಸಂತಾಳಿಗೆ ಕಾಡುಗೊಲ್ಲ ಸಮುದಾಯದ ಮುಖಂಡರು ನಮ್ಮ ಸಮುದಾಯದ ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಸೂತಕ ಆಗುವುದಿಲ್ಲ. ಹೀಗಾಗಿ ನಾವು ಗ್ರಾಮದೊಳಗೆ ಬಿಟ್ಟುಕೊಳ್ಳುವುದಿಲ್ಲ. ಸೂತಕದ ಬಾಣಂತಿ ಊರ ಒಳಗೆ ಬಂದರೇ ಕೇಡು ಎಂದು ಊರಾಚೆಯ ಜಮೀನಿನಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಸಿಲಿನಲ್ಲಿ ಏಕಾಂಗಿಯಾಗಿ ವಾಸ ಮಾಡುವಂತೆ ಆದೇಶ ನೀಡಿದ್ದರು.

ಇದನ್ನೂ ಓದಿ:ಚಿತ್ರದುರ್ಗ: ಋತುಚಕ್ರದ ವೇಳೆ ಹಟ್ಟಿಯಿಂದ ಹೊರ ಉಳಿದ ಮಹಿಳೆಯರನ್ನು ಮನೆ ಒಳಗೆ ಬಿಟ್ಟು, ಮೌಢ್ಯ ಆಚರಣೆ ನಿಲ್ಲಿಸುವಂತೆ ಗ್ರಾಮಸ್ಥರಿಗೆ ಶಾಸಕಿ ಪೂರ್ಣಿಮಾ ತರಾಟೆ

ಬಳಿಕ ಊರಾಚೆ ಗುಡಿಸಿಲಿನಲ್ಲಿ, ಮಳೆ-ಚಳಿಯಲ್ಲಿ ಏಕಾಂಗಿಯಾಗಿ ವಾಸವಿದ್ದಳು. ಆದರೆ. ಮಗುವಿಗೆ ವಿಪರೀತ ಶೀತವಾಗಿ ಪ್ರಾಣ ಬಿಟ್ಟಿತ್ತು. ನಂತರ ಈ ಘಟನೆಯನ್ನ ಟಿವಿ9ನಲ್ಲಿ ಬಿತ್ತರಿಸುತ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಲ್ಲೇನಹಳ್ಳಿ ಗೊಲ್ಲರಹಟ್ಟಿಗೆ ಭೇಟಿ ನೀಡಿ, ಗ್ರಾಮಸ್ಥರ ಮನವೊಲಿಸಿ ವಸಂತರನ್ನು ಮನೆಗೆ ಸೇರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Wed, 2 August 23

‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ