AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದ ಪಿಎಸ್​ಐ ಪರಾರಿ: ಪೊಲೀಸರನ್ನು ಬೆನ್ನಟ್ಟಿದ ಸಾರ್ವಜನಿಕರು

ಠಾಣೆಯಿಂದ ಓಡಿ ಹೋಗುತ್ತಿದ್ದ ಅವರನ್ನು ಹಿಡಿಯಲು ಸಾರ್ವಜನಿಕರು ಬೆನ್ನಟ್ಟಿದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ.

ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದ ಪಿಎಸ್​ಐ ಪರಾರಿ: ಪೊಲೀಸರನ್ನು ಬೆನ್ನಟ್ಟಿದ ಸಾರ್ವಜನಿಕರು
ಸಿ.ಎಸ್.ಪುರ ಪೊಲೀಸ್ ಠಾಣೆ ಮತ್ತು ಆರೋಪಿ ಸೋಮಶೇಖರ್
TV9 Web
| Edited By: |

Updated on:Nov 03, 2021 | 4:54 PM

Share

ತುಮಕೂರು: ಲಂಚ ಪಡೆಯುವಾಗಲೇ ಭ್ರಷ್ಟಾಚಾರ ನಿಗ್ರಹ ದಳ (Anti Corruption Bureau – ACB) ಬಲೆಗೆ ಬಿದ್ದಿದ್ದ ಗುಬ್ಬಿ ತಾಲ್ಲೂಕು ಚಂದ್ರಶೇಖರಪುರ (ಸಿ.ಎಸ್.ಪುರ) ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ಸೋಮಶೇಖರ್ ಠಾಣೆಯಿಂದ ಓಡಿ ಹೋಗಿದ್ದಾರೆ. ಠಾಣೆಯಿಂದ ಓಡಿ ಹೋಗುತ್ತಿದ್ದ ಅವರನ್ನು ಹಿಡಿಯಲು ಸಾರ್ವಜನಿಕರು ಬೆನ್ನಟ್ಟಿದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ.

ಪಿಎಸ್​ಐ ಸೋಮಶೇಖರ್ ಮತ್ತು ಕಾನ್​ಸ್ಟೆಬಲ್ ನಯಾಜ್ ಎಸಿಬಿ ಬಲೆಗೆ ಬಿದ್ದಿದ್ದರು. ಎಸಿಬಿ ಅಧಿಕಾರಿಗಳು ಊಟ ಮಾಡುತ್ತಿದ್ದ ವೇಳೆ ಪಿಎಸ್​ಐ ಪೊಲೀಸ್ ಬೈಕ್ ಹತ್ತಿ ಮೊಬೈಲ್ ಫೋನ್​​ನೊಂದಿಗೆ ಪರಾರಿಯಾದರು. ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಎಸಿಬಿ‌ ಬಲೆಗೆ ಪಿಎಸ್ಐ ಸೋಮಶೇಖರ್ ಮತ್ತು ಹೆಡ್​ಕಾನ್​ಸ್ಟೆಬಲ್ ನಯಾಜ್ ಅಹಮ್ಮದ್ ಅವರ ಬಲೆಗೆ ಬಿದ್ದಿದ್ದರು.

ಕೌಟುಂಬಿಕ ಕಲಹದ ವಿಚಾರವಾಗಿ ಸಿ.ಎಸ್ ಪುರ ಠಾಣೆಯಲ್ಲಿ ಚಂದ್ರಣ್ಣ ಎಂಬುವರ ವಿರುದ್ಧ ಕಳೆದ ಅಕ್ಟೋಬರ್ 22ರಂದು ದೂರು ದಾಖಲಾಗಿತ್ತು. ಇದನ್ನೇ ದಾಳವಾಗಿಸಿಕೊಂಡು ಪೊಲೀಸರು ಚಂದ್ರಣ್ಣನ ಕಾರು ಮುಟ್ಟುಗೋಲು ಹಾಕಿಕೊಂಡಿದ್ದರು. ಕೋರ್ಟ್​ನಲ್ಲಿ ಜಾಮೀನು ಪಡೆದು ಕಾರು ಬಿಡಿಸಿಕೊಳ್ಳಲು ಬಂದಿದ್ದ ಚಂದ್ರಣ್ಣ ಅವರ ಬಳಿ ಕಾರು ಬಿಡಲು ಪಿಎಸ್​ಐ ₹ 28 ಸಾವಿರಕ್ಕೆ ಹೆಡ್​ ಕಾನ್​ಸ್ಟೆಬಲ್ ನಯಾಜ್ ಅಹಮದ್ ಮೂಲಕ ಹಣಕ್ಕೆ ಬೇಡಿಕೆಯಿಟ್ಟಿದ್ದರು.

ಈ ಪೈಕಿ ಮೊದಲ ಕಂತಿನಲ್ಲಿ ₹ 12 ಸಾವಿರ ಲಂಚವನ್ನು ಪಿಎಸ್​ಐ ಪಡೆದುಕೊಂಡಿದ್ದರು. ಉಳಿದ ₹ 16 ಸಾವಿರ ಪಡೆಯುವ ವೇಳೆ ಪಿಎಸ್ಐ ಎಸಿಬಿ ಬಲೆಗೆ ಬಿದ್ದಿದ್ದರು. ಪಿಎಸ್ಐ ಲಂಚ ಕೇಳುತ್ತಿರುವ ಬಗ್ಗೆ ಚಂದ್ರಣ್ಣ ಎಸಿಬಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಇನ್​ಸ್ಪೆಕ್ಟರ್ ವಿಜಯಲಕ್ಷ್ಮಿ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತ ಯುಬಿ ಶೆಟ್ಟಿ ಮನೆ ಮೇಲೆ ಐಟಿ ದಾಳಿ; ದಾಖಲೆ ಇಲ್ಲದ 70 ಕೋಟಿ ಮೌಲ್ಯದ ಆದಾಯ ಪತ್ತೆ ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರೋಧಿಸಿ ಕೊಚ್ಚಿಯಲ್ಲಿ ರಸ್ತೆ ತಡೆದ ಕಾಂಗ್ರೆಸ್; ಪ್ರಶ್ನಿಸಿದ ನಟ ಜೋಜು ಜಾರ್ಜ್ ಕಾರಿನ ಮೇಲೆ ದಾಳಿ

Published On - 4:51 pm, Wed, 3 November 21

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್