AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಎಸಿಬಿ ದಾಳಿ ವೇಳೆ ತಪ್ಪಿಸಿಕೊಂಡಿದ್ದ ಪಿಎಸ್​ಐ ಜನ್ನೇನಹಳ್ಳಿ ಅರಣ್ಯದ ಬಳಿ ವಶಕ್ಕೆ

ಸಮವಸ್ತ್ರ ಕಿತ್ತೆಸೆದು ಓಡಿ ಹೋಗುತ್ತಿದ್ದ ಸೋಮಶೇಖರ್​ ಇದೀಗ ಎಸಿಬಿ ಅಧಿಕಾರಿಗಳ ವಶವಾಗಿದ್ದಾರೆ. ಲಂಚ ಸ್ವೀಕಾರ ವೇಳೆ ಪಿಎಸ್​​ಐ ಎಸಿಬಿ ಬಲೆಗೆ ಬಿದ್ದಿದ್ದಾರೆ.

ತುಮಕೂರು: ಎಸಿಬಿ ದಾಳಿ ವೇಳೆ ತಪ್ಪಿಸಿಕೊಂಡಿದ್ದ ಪಿಎಸ್​ಐ ಜನ್ನೇನಹಳ್ಳಿ ಅರಣ್ಯದ ಬಳಿ ವಶಕ್ಕೆ
ಸಿ.ಎಸ್.ಪುರ ಪೊಲೀಸ್ ಠಾಣೆ ಮತ್ತು ಆರೋಪಿ ಸೋಮಶೇಖರ್
TV9 Web
| Edited By: |

Updated on:Nov 03, 2021 | 6:10 PM

Share

ತುಮಕೂರು: ಎಸಿಬಿ ದಾಳಿಯ ವೇಳೆ ತಪ್ಪಿಸಿಕೊಂಡಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜನ್ನೇನಹಳ್ಳಿಯ ಪಿಎಸ್​ಐ ವಶಕ್ಕೆ ಪಡೆಯಲಾಗಿದೆ. ಜನ್ನೇನಹಳ್ಳಿ ಅರಣ್ಯದ ಬಳಿ ಪಿಎಸ್ಐಯನ್ನು ಹಿಡಿದಿದ್ದಾರೆ. ತಪ್ಪಿಸಿಕೊಂಡು ಹೋಗಿದ್ದ ಪಿಎಸ್​ಐ ಸೋಮಶೇಖರ್​ರನ್ನು ಎಸಿಬಿ ಅಧಿಕಾರಿಗಳು ಬೆನ್ನಟ್ಟಿ ಹಿಡಿದಿದ್ದಾರೆ. ಸಮವಸ್ತ್ರ ಕಿತ್ತೆಸೆದು ಓಡಿ ಹೋಗುತ್ತಿದ್ದ ಸೋಮಶೇಖರ್​ ಇದೀಗ ಎಸಿಬಿ ಅಧಿಕಾರಿಗಳ ವಶವಾಗಿದ್ದಾರೆ. ಲಂಚ ಸ್ವೀಕಾರ ವೇಳೆ ಪಿಎಸ್​​ಐ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಬೆನ್ನಟ್ಟುವಾಗ ಸುಸ್ತಾಗಿದ್ದ ಎಸಿಬಿ ಕಾನ್ಸ್​​ಟೇಬಲ್​​ಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಸಿಬಿ ಕಾನ್ಸ್​​ಟೇಬಲ್​​ ಮಹೇಶ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಪೊಲೀಸ್ ಠಾಣೆಯಲ್ಲಿ ಪಿಎಸ್​ಐ ಸೋಮಶೇಖರ್ ವಿಚಾರಣೆ ನಡೆಸಲಾಗುತ್ತಿದೆ.

ಕೌಟುಂಬಿಕ ಕಲಹದ ವಿಚಾರವಾಗಿ ಸಿ.ಎಸ್ ಪುರ ಠಾಣೆಯಲ್ಲಿ ಚಂದ್ರಣ್ಣ ಎಂಬುವರ ವಿರುದ್ಧ ಕಳೆದ ಅಕ್ಟೋಬರ್ 22ರಂದು ದೂರು ದಾಖಲಾಗಿತ್ತು. ಇದನ್ನೇ ದಾಳವಾಗಿಸಿಕೊಂಡು ಪೊಲೀಸರು ಚಂದ್ರಣ್ಣನ ಕಾರು ಮುಟ್ಟುಗೋಲು ಹಾಕಿಕೊಂಡಿದ್ದರು. ಕೋರ್ಟ್​ನಲ್ಲಿ ಜಾಮೀನು ಪಡೆದು ಕಾರು ಬಿಡಿಸಿಕೊಳ್ಳಲು ಬಂದಿದ್ದ ಚಂದ್ರಣ್ಣ ಅವರ ಬಳಿ ಕಾರು ಬಿಡಲು ಪಿಎಸ್​ಐ ₹ 28 ಸಾವಿರಕ್ಕೆ ಹೆಡ್​ ಕಾನ್​ಸ್ಟೆಬಲ್ ನಯಾಜ್ ಅಹಮದ್ ಮೂಲಕ ಹಣಕ್ಕೆ ಬೇಡಿಕೆಯಿಟ್ಟಿದ್ದರು.

ಈ ಪೈಕಿ ಮೊದಲ ಕಂತಿನಲ್ಲಿ ₹ 12 ಸಾವಿರ ಲಂಚವನ್ನು ಪಿಎಸ್​ಐ ಪಡೆದುಕೊಂಡಿದ್ದರು. ಉಳಿದ ₹ 16 ಸಾವಿರ ಪಡೆಯುವ ವೇಳೆ ಪಿಎಸ್ಐ ಎಸಿಬಿ ಬಲೆಗೆ ಬಿದ್ದಿದ್ದರು. ಪಿಎಸ್ಐ ಲಂಚ ಕೇಳುತ್ತಿರುವ ಬಗ್ಗೆ ಚಂದ್ರಣ್ಣ ಎಸಿಬಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಇನ್​ಸ್ಪೆಕ್ಟರ್ ವಿಜಯಲಕ್ಷ್ಮಿ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಇದನ್ನೂ ಓದಿ: ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದ ಪಿಎಸ್​ಐ ಪರಾರಿ: ಪೊಲೀಸರನ್ನು ಬೆನ್ನಟ್ಟಿದ ಸಾರ್ವಜನಿಕರು

ಇದನ್ನೂ ಓದಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ; ನಾಲ್ವರು ಪೊಲೀಸ್ ವಶಕ್ಕೆ

Published On - 6:10 pm, Wed, 3 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!