AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಕಾಮಗಾರಿ ಪ್ರಶ್ನಿಸಿದ ಸಾರ್ವಜನಿಕರಿಗೆ ಏಕವಚನದಲ್ಲಿ ನಿಂದನೆ: ಇಂಜಿನಿಯರ್​ ಅಮಾನತ್ತು ​

1.80 ಕೋಟಿ ವೆಚ್ಚದಲ್ಲಿ ಐಡಿಹಳ್ಳಿ ಗ್ರಾಮದಿಂದ ಜನಕಲೋಟಿ ಗ್ರಾಮದವರೆಗೂ 6 km ಉದ್ದ ರಸ್ತೆ ಕಾಮಗಾರಿ ಮಾಡಲಾಗಿತ್ತು.‌ ನಿರ್ಮಾಣ ಮಾಡಿ ಒಂದೇ ವರ್ಷದಲ್ಲಿ ಡಾಂಬರ್ ಕಿತ್ತು ಗುಂಡಿಗಳು ಬಿದ್ದಿವೆ.

ಕಳಪೆ ಕಾಮಗಾರಿ ಪ್ರಶ್ನಿಸಿದ ಸಾರ್ವಜನಿಕರಿಗೆ ಏಕವಚನದಲ್ಲಿ ನಿಂದನೆ: ಇಂಜಿನಿಯರ್​ ಅಮಾನತ್ತು  ​
ಸಹಾಯಕ ಇಂಜಿನಿಯರ್ ದೀಪಕ್ ಯಾದವ್ ಅಮಾನತ್ತು
TV9 Web
| Edited By: |

Updated on:Jun 17, 2022 | 1:28 PM

Share

ತುಮಕೂರು: ಕಳಪೆ ಕಾಮಗಾರಿ ಪ್ರಶ್ನಿಸಿದ ಸಾರ್ವಜನಿಕರನ್ನು ನಿಂದಿಸಿದ ಮಧುಗಿರಿ ತಾಲ್ಲೂಕು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ (Engineer) ​ನನ್ನು ಅಮಾನತ್ತು ಮಾಡಿ ಲೋಕೋಪಯೋಗಿ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದೆ. ದೀಪಕ್ ಯಾದವ್​ ಸಾರ್ವಜನಿಕರ ಮೇಲೆ ದರ್ಪ ತೋರಿದ ಇಂಜಿನಿಯರ್. ರಮಣ್ ಕಂಪನಿ 1.80 ಕೋಟಿ ವೆಚ್ಚದಲ್ಲಿ ಐಡಿಹಳ್ಳಿ ಗ್ರಾಮದಿಂದ ಜನಕಲೋಟಿ ಗ್ರಾಮದವರೆಗೂ 6 km ಉದ್ದ ರಸ್ತೆ ಕಾಮಗಾರಿ ಮಾಡಲಾಗಿತ್ತು.‌ ಎರಡು ವರ್ಷದ ಹಿಂದೆ ರಸ್ತೆ ನಿರ್ಮಾಣ ಮಾಡಲಾಗಿದ್ದು, ನಿರ್ಮಾಣ ಮಾಡಿ ಒಂದೇ ವರ್ಷದಲ್ಲಿ ಡಾಂಬರ್ ಕಿತ್ತು ಗುಂಡಿಗಳು ಸೃಷ್ಟಿಯಾಗಿತ್ತು. ಈ ಹಿನ್ನೆಲೆ ಎಇಇ ರಾಜಗೋಪಾಲ್‌ ಹಾಗೂ ಎಇ ದೀಪಕ್ ಯಾದವ್ ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ಭೇಟಿ ನೀಡಿದ್ದರು. ಪರಿಶೀಲನೆ ವೇಳೆ ಸಾರ್ವಜನಿಕರು ಕಾಮಗಾರಿ ಬಗ್ಗೆ ಮಾಹಿತಿ ನೀಡಿದ್ದು, ಜನರ ಮಾಹಿತಿಯನ್ನು ಅಲ್ಲಗಳೆದು ಸಾರ್ವಜನಿಕರನ್ನೇ ಎಇ ದೀಪಕ್ ನಿಂದಿಸಿದ್ದಾನೆ. ನಾನು ಪಿಡಬ್ಲ್ಯೂಡಿ ಎಇ ಏನ್ಮಾಡ್ತಿಯೋ ಮಾಡಿಕೋ ಎಂದು ಏಕವಚನದಲ್ಲಿ ಹಿರಿಯ ಅಧಿಕಾರಿಗಳು ಎಇಇ ರಾಜಗೋಪಾಲ್ ಎದುರು ಗ್ರಾಮಸ್ಥರಿಗೆ ಅವಾಜ್ ಹಾಕಿದ್ದಾನೆ. ದೀಪಕ್ ಯಾದವ್ ವರ್ತನೆ ಖಂಡಿಸಿ ಗ್ರಾಮಸ್ಥರು ಕಾರನ್ನು ತಡೆದಿದ್ದಾರೆ. ಇಂಜಿನಿಯರ್ ಮೇಲೆ ಇಲಾಖೆ ವಿಚಾರಣೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ದೇವನಹಳ್ಳಿಯಲ್ಲಿ ರೈತರು ತಾವು ಬೆಳೆದ ಹೂವನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸಿದರು

ಅಕ್ರಮವಾಗಿ ಟೋಲ್ ಸುಂಕ ಸಂಗ್ರಹ 

ನೆಲಮಂಗಲ: 19ವರ್ಷದ ಕಾಂಟ್ರಾಕ್ಟ್ ಅವಧಿ ಮುಗಿದಿದ್ದರೂ ಅಕ್ರಮವಾಗಿ ಟೋಲ್ ಸುಂಕ ಸಂಗ್ರಹ ಮಾಡುತ್ತಿದ್ದ, NHAI ವಿರುದ್ಧ ಸಂಘಟನೆಗಳ ಬೃಹತ್ ಹೋರಾಟ ಮಾಡಲಾಗಿದೆ. ಮಾಜಿ ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ನೇತೃತ್ವದಲ್ಲಿ ಹೆದ್ದಾರಿ ತಡೆಯಲಾಗಿದ್ದು, ಹೆದ್ದಾರಿ ತಡೆ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಹಿತಕರ ಘಟನೆಗಳು ನಡೆಯದಂತೆ  ನೆಲಮಂಗಲ ಪೊಲೀಸರು ಸ್ಥಳದಲ್ಲಿದ್ದಾರೆ. ಪ್ರಧಾನಿ ಮೋದಿ ಹಾಗೂ ನಿತಿನ್ ಗಡ್ಕರಿ ವಿರುದ್ಧ ಧಿಕ್ಕಾರ ಕೂಗಲಾಗಿದೆ. ವಕೀಲ ಜಗದೀಶ್ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:51 pm, Fri, 17 June 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?