AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಮುಂದುವರಿದ ಅಪ್ಪು ಅಭಿಮಾನಿಗಳ ಸಾವಿನ ಸರಣಿ; ಮತ್ತೆ ಇಬ್ಬರು ನಿಧನ

Puneeth Rajkumar: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಭೀಮ ನಗರದ ನಿವಾಸಿ ಪುನೀತ್ ಅಪ್ಪಟ ಅಭಿಮಾನಿಯಾಗಿದ್ದ ವಿಡಿಯೋಗ್ರಾಫರ್ ಶಿವಮೂರ್ತಿ ಎಂಬವರು ಕೂಡ ಮೃತಪಟ್ಟಿದ್ದಾರೆ.

Puneeth Rajkumar: ಮುಂದುವರಿದ ಅಪ್ಪು ಅಭಿಮಾನಿಗಳ ಸಾವಿನ ಸರಣಿ; ಮತ್ತೆ ಇಬ್ಬರು ನಿಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 05, 2021 | 4:19 PM

Share

ತುಮಕೂರು: ಪವರ್ ಸ್ಟಾರ್, ಅಪ್ಪು ಎಂದೇ ಅಭಿಮಾನಿಗಳಿಂದ ಕರೆಸಿಕೊಂಡಿದ್ದ ನಟ ಪುನೀತ್ ರಾಜ್​ಕುಮಾರ್ ಅಭಿಮಾನಿಗಳ ಸಾವಿನ ಸರಣಿ ಮುಂದುವರಿದಿದೆ. ಪುನಿತ್ ರಾಜಕುಮಾರ್ ಮೃತಪಟ್ಟ ದಿನದಿಂದ ಊಟ ಬಿಟ್ಟಿದ್ದ ತುಮಕೂರು ತಾಲೂಕಿನ ಅರೆಗುಜ್ಜನಹಳ್ಳಿಯ ಅಭಿಮಾನಿ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಭೀಮ ನಗರದ ನಿವಾಸಿ ಪುನೀತ್ ಅಪ್ಪಟ ಅಭಿಮಾನಿಯಾಗಿದ್ದ ವಿಡಿಯೋಗ್ರಾಫರ್ ಶಿವಮೂರ್ತಿ ಎಂಬವರು ಕೂಡ ಮೃತಪಟ್ಟಿದ್ದಾರೆ. ಇಂದು (ನವೆಂಬರ್ 5) ಇಬ್ಬರು ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ತುಮಕೂರು ತಾಲೂಕಿನ ಅರೆಗುಜ್ಜನಹಳ್ಳಿಯಲ್ಲಿ ರವಿಕುಮಾರ್ (27) ಎಂಬವರು ಮೃತಪಟ್ಟ ದುರ್ಘಟನೆ ನಡೆದಿದೆ. ಮನೆ ತುಂಬಾ ಅಪ್ಪು ಫೋಟೋ ಅಂಟಿಸಿಕೊಂಡಿರುವ ರವಿಕುಮಾರ್, ಪುನೀತ್ ರಾಜ್​ಕುಮಾರ್ ಅಂತಿಮ ದರ್ಶನ ಪಡೆದು ಮನೆಗೆ ಹಿಂತಿರುಗಿದ್ದರು. ಬಂಡೆ ಕೆಲಸ ಮಾಡುತ್ತಿದ್ದ ರವಿಕುಮಾರ್ ಬಳಿಕ, ದೊಡ್ಡಮನೆ ಅಪ್ಪು ಅವರೇ ಇಲ್ಲ ನಾನಿದ್ದು ಏನು ಪ್ರಯೋಜನ ಎಂದು ಹೇಳಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ. ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪುನೀತ್ ಸಾವಿನ ನಂತರ ಬೆಂಗಳೂರಿಗೆ ಹೋಗಿ ದರ್ಶನ ಪಡೆದು ಬಂದಿದ್ದ ಚಾಮರಾಜನಗರ ಜಿಲ್ಲೆಯ ಮತ್ತೊಬ್ಬ ಯುವಕ ಇಂದು ಮೃತರಾಗಿದ್ದಾರೆ. ದರ್ಶನ ಪಡೆದು ಬಂದಾಗಿನಿಂದ ಖಿನ್ನತೆಗೊಳಗಾಗಿದ್ದ ಯುವಕ, ಸಾಮಾಜಿಕ ಜಾಲತಾಣದಲ್ಲಿ ಪುನೀತ್ ಚಿತ್ರ ನೋಡುತ್ತ ದುಃಖ ತಡೆಯಲಾಗದೆ ಕೊರಗುತ್ತಿದ್ದ ಎಂದು ತಿಳಿದುಬಂದಿದೆ. ಯುವಕ ಶಿವಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೊಳ್ಳೇಗಾಲ ಪಟ್ಟಣ ರಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೈ ಕುಯ್ದುಕೊಂಡ ಪಿಯುಸಿ ವಿದ್ಯಾರ್ಥಿನಿ ಪುನೀತ್ ರಾಜ್​ಕುಮಾರ್ ಅಕಾಲಿಕ ನಿಧನ ಹಿನ್ನೆಲೆ ಅಭಿಮಾನಿ ಒಬ್ಬರು ಚಾಕುವಿನಿಂದ ಕೈಯಲ್ಲಿ APPU ಎಂದು ಕೊಯ್ದುಕೊಂಡ ದುರ್ಘಟನೆ ನಡೆದಿದೆ. ಮೂಲತಃ ಚಾಮರಾಜನಗರದ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಯಶಸ್ವಿನಿ ಚಾಕುವಿನಲ್ಲಿ ಗಾಯ ಮಾಡಿಕೊಂಡಿದ್ದಾರೆ. ಪುನೀತ್ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಯಶಸ್ವಿನಿ, ಅಪ್ಪು ಅಕಾಲಿಕ ಮರಣದಿಂದ ದುಖಃಕ್ಕೊಳಗಾಗಿದ್ದರು. ಎಷ್ಟೇ ಸಮಾಧಾನ ಮಾಡಿದರು ಸಮಾಧಾನವಾಗದೆ ಕರ್ಚೀಫ್, ಪೇಪರ್ ಮೇಲೆ ಅಪ್ಪು ಬಗ್ಗೆ ರಕ್ತದಲ್ಲಿ ಬರೆದುಕೊಂಡಿದ್ದಾರೆ. I Miss U Appu I Love U I Want U Punith Rajkumar ಎಂದು ರಕ್ತದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ಸಮಾಧಿಗೆ ನಟ ಸೂರ್ಯ ಭೇಟಿ; ಅಪ್ಪು ನೆನೆದು ಕಂಬನಿ ಮಿಡಿದ ಕಾಲಿವುಡ್​ ಸ್ಟಾರ್​ ಹೀರೋ

ಇದನ್ನೂ ಓದಿ: ರಸ್ತೆ, ಪಾರ್ಕ್​, ಮೈದಾನಕ್ಕೆ ಪುನೀತ್​ ಹೆಸರು; ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಹೇಳೋದೇನು?

Published On - 3:32 pm, Fri, 5 November 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!