ರೇಣುಕಾಸ್ವಾಮಿ ಕೊಲೆ: ಬೇಲ್ ಸಿಕ್ಕು 10 ದಿನದ ಬಳಿಕ ಜೈಲಿನಿಂದ ಆಚೆ ಬಂದ ಡಿ ಗ್ಯಾಂಗ್ ಸದಸ್ಯರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳು ತುಮಕೂರು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕಳೆದ ಸೋಮವಾರ ಅಂದ್ರೆ ಹತ್ತು ದಿನಗಳ ಹಿಂದೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿತ್ತು. ಬಾಂಡ್ ಶ್ಯೂರಿಟಿ ಸಮಸ್ಯೆಯಿಂದ ಬಿಡುಗಡೆ ಆಗಿರಲಿಲ್ಲ. ಸದ್ಯ ಇಂದು ಕಾನೂನು ಪ್ರಕ್ರಿಯೆ ಜೊತೆಗೆ ಬಾಂಡ್ ಶ್ಯೂರಿಟಿ ಸಿಕ್ಕ ಹಿನ್ನೆಲೆ ಬಿಡುಗಡೆಯಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ: ಬೇಲ್ ಸಿಕ್ಕು 10 ದಿನದ ಬಳಿಕ ಜೈಲಿನಿಂದ ಆಚೆ ಬಂದ ಡಿ ಗ್ಯಾಂಗ್ ಸದಸ್ಯರು
ರೇಣುಕಾಸ್ವಾಮಿ ಕೊಲೆ: ಬೇಲ್ ಸಿಕ್ಕು 10 ದಿನದ ಬಳಿಕ ಜೈಲಿನಿಂದ ಆಚೆ ಬಂದ ಡಿ ಗ್ಯಾಂಗ್ ಸದಸ್ಯರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 02, 2024 | 6:03 PM

ತುಮಕೂರು, ಅ.02: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ(Renukaswamy murder case) ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಇತರೆ ಆರೋಪಿಗಳು ಸೇರಿಕೊಂಡು ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ಮೊದಲಿಗೆ ಪೊಲೀಸರ ಬಳಿ ಶರಣಾಗತಿ ಆಗಿದ್ದ ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ ಹಾಗೂ ನಿಖಿಲ್​ರನ್ನ ಜೂನ್ 26 ಕ್ಕೆ ಬೆಂಗಳೂರು ಪರಪ್ಪನ ಅಗ್ರಹಾರದ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

ಸದ್ಯ 15 ನೇ ಆರೋಪಿಯಾದ ಕಾರ್ತಿಕ್, 16 ಆರೋಪಿ ಕೇಶವಮೂರ್ತಿ, 17 ಆರೋಪಿಯಾದ ನಿಖಿಲ್​ಗೆ ಎರಡು ಲಕ್ಷ ಬಾಂಡ್ ಹಾಗೂ ತಲಾ ಇಬ್ಬರ ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರು ಆಗಿದೆ. ಸತತ ಹತ್ತು ದಿನಗಳ ಬಳಿಕ ಬಿಡುಗಡೆ ಆಗಿದ್ದು, ಎ 16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ಹಾಗೂ ಇನ್ನಿಬ್ಬರಿಗೆ 57 ನೇ ಸಿಸಿಹೆಚ್ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ:ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ; ದಾಸನಿಗೆ ಮತ್ತೆ ನಿರಾಸೆ

ಜಾಮೀನು ಮಂಜೂರು ಆದರೂ ಹತ್ತು ದಿನಗಳಿಂದ ಬಿಡುಗಡೆ ಆಗಿರಲಿಲ್ಲ. ಸದ್ಯ ಸಂಬಂಧಿಕರು ಜಾಮೀನು ಶ್ಯೂರಿಟಿ ನೀಡಿ ಬಿಡುಗಡೆ ಮಾಡಿಸಿದ್ದಾರೆ. ತಡರಾತ್ರಿಯೇ ಮೇಲ್ ಮೂಲಕ ಜಾಮೀನು ಆದೇಶ ಬಂದರೂ ಸಮಯ ಮೀರಿದ ಕಾರಣ ಇಂದು ಬೆಳಿಗ್ಗೆ 10 ಗಂಟೆಗೆ ತುಮಕೂರು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹೊರ ಬಂದ ಮೂವರು ಪ್ರತಿಕ್ರಿಯೆ ನೀಡಲು ನಕಾರ ವ್ಯಕ್ತಪಡಿಸಿದ್ದು, ನಮಗೆ ಏನು ಗೊತ್ತಿಲ್ಲ ಎಲ್ಲವೂ ತನಿಖಾಧಿಕಾರಿಗಳ ಮುಂದೆ ವಿವರವಾಗಿ ಹೇಳಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಮತ್ತೋರ್ವ ಆರೋಪಿ ರವಿಶಂಕರ್ ತುಮಕೂರು ಜೈಲಿನಲ್ಲಿಯೇ ಉಳಿದಿದ್ದು, ಮೂವರು ಬಿಡುಗಡೆ ಆಗಿದ್ದಾರೆ. ಹೊರಬಂದ ಬಳಿಕ ನುಣುಚಿಕೊಳ್ತಿದ್ದ ಮೂವರು ತನ್ನ ಸ್ನೇಹಿತರು ಇನೋವಾ ಕಾರಿನಲ್ಲಿ ಬಂದ ತಕ್ಷಣ ಹತ್ತಿ ಹೊರಟು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ