AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಕೊಲೆ: ಬೇಲ್ ಸಿಕ್ಕು 10 ದಿನದ ಬಳಿಕ ಜೈಲಿನಿಂದ ಆಚೆ ಬಂದ ಡಿ ಗ್ಯಾಂಗ್ ಸದಸ್ಯರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳು ತುಮಕೂರು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕಳೆದ ಸೋಮವಾರ ಅಂದ್ರೆ ಹತ್ತು ದಿನಗಳ ಹಿಂದೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿತ್ತು. ಬಾಂಡ್ ಶ್ಯೂರಿಟಿ ಸಮಸ್ಯೆಯಿಂದ ಬಿಡುಗಡೆ ಆಗಿರಲಿಲ್ಲ. ಸದ್ಯ ಇಂದು ಕಾನೂನು ಪ್ರಕ್ರಿಯೆ ಜೊತೆಗೆ ಬಾಂಡ್ ಶ್ಯೂರಿಟಿ ಸಿಕ್ಕ ಹಿನ್ನೆಲೆ ಬಿಡುಗಡೆಯಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ: ಬೇಲ್ ಸಿಕ್ಕು 10 ದಿನದ ಬಳಿಕ ಜೈಲಿನಿಂದ ಆಚೆ ಬಂದ ಡಿ ಗ್ಯಾಂಗ್ ಸದಸ್ಯರು
ರೇಣುಕಾಸ್ವಾಮಿ ಕೊಲೆ: ಬೇಲ್ ಸಿಕ್ಕು 10 ದಿನದ ಬಳಿಕ ಜೈಲಿನಿಂದ ಆಚೆ ಬಂದ ಡಿ ಗ್ಯಾಂಗ್ ಸದಸ್ಯರು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Oct 02, 2024 | 6:03 PM

Share

ತುಮಕೂರು, ಅ.02: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ(Renukaswamy murder case) ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಇತರೆ ಆರೋಪಿಗಳು ಸೇರಿಕೊಂಡು ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ಮೊದಲಿಗೆ ಪೊಲೀಸರ ಬಳಿ ಶರಣಾಗತಿ ಆಗಿದ್ದ ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ ಹಾಗೂ ನಿಖಿಲ್​ರನ್ನ ಜೂನ್ 26 ಕ್ಕೆ ಬೆಂಗಳೂರು ಪರಪ್ಪನ ಅಗ್ರಹಾರದ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

ಸದ್ಯ 15 ನೇ ಆರೋಪಿಯಾದ ಕಾರ್ತಿಕ್, 16 ಆರೋಪಿ ಕೇಶವಮೂರ್ತಿ, 17 ಆರೋಪಿಯಾದ ನಿಖಿಲ್​ಗೆ ಎರಡು ಲಕ್ಷ ಬಾಂಡ್ ಹಾಗೂ ತಲಾ ಇಬ್ಬರ ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರು ಆಗಿದೆ. ಸತತ ಹತ್ತು ದಿನಗಳ ಬಳಿಕ ಬಿಡುಗಡೆ ಆಗಿದ್ದು, ಎ 16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ಹಾಗೂ ಇನ್ನಿಬ್ಬರಿಗೆ 57 ನೇ ಸಿಸಿಹೆಚ್ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ:ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ; ದಾಸನಿಗೆ ಮತ್ತೆ ನಿರಾಸೆ

ಜಾಮೀನು ಮಂಜೂರು ಆದರೂ ಹತ್ತು ದಿನಗಳಿಂದ ಬಿಡುಗಡೆ ಆಗಿರಲಿಲ್ಲ. ಸದ್ಯ ಸಂಬಂಧಿಕರು ಜಾಮೀನು ಶ್ಯೂರಿಟಿ ನೀಡಿ ಬಿಡುಗಡೆ ಮಾಡಿಸಿದ್ದಾರೆ. ತಡರಾತ್ರಿಯೇ ಮೇಲ್ ಮೂಲಕ ಜಾಮೀನು ಆದೇಶ ಬಂದರೂ ಸಮಯ ಮೀರಿದ ಕಾರಣ ಇಂದು ಬೆಳಿಗ್ಗೆ 10 ಗಂಟೆಗೆ ತುಮಕೂರು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹೊರ ಬಂದ ಮೂವರು ಪ್ರತಿಕ್ರಿಯೆ ನೀಡಲು ನಕಾರ ವ್ಯಕ್ತಪಡಿಸಿದ್ದು, ನಮಗೆ ಏನು ಗೊತ್ತಿಲ್ಲ ಎಲ್ಲವೂ ತನಿಖಾಧಿಕಾರಿಗಳ ಮುಂದೆ ವಿವರವಾಗಿ ಹೇಳಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಮತ್ತೋರ್ವ ಆರೋಪಿ ರವಿಶಂಕರ್ ತುಮಕೂರು ಜೈಲಿನಲ್ಲಿಯೇ ಉಳಿದಿದ್ದು, ಮೂವರು ಬಿಡುಗಡೆ ಆಗಿದ್ದಾರೆ. ಹೊರಬಂದ ಬಳಿಕ ನುಣುಚಿಕೊಳ್ತಿದ್ದ ಮೂವರು ತನ್ನ ಸ್ನೇಹಿತರು ಇನೋವಾ ಕಾರಿನಲ್ಲಿ ಬಂದ ತಕ್ಷಣ ಹತ್ತಿ ಹೊರಟು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ