AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಸಿಬಿ ಡಿಕ್ಕಿಯಾಗಿ ಇಬ್ಬರ ಸಾವು; 2014ರಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಸವಾರನ ಸಾವಿಗೆ ಕಾರಣವಾಗಿದ್ದ ಆಂಬುಲೆನ್ಸ್ ಚಾಲಕನಿಗೆ 14 ತಿಂಗಳು ಜೈಲು

ಬೈಕ್ನಲ್ಲಿದ್ದ ಸತೀಶ್(37) ಪರಶುರಾಮ್(26) ಮೃತ ದುರ್ದೈವಿ. ಬೈಕ್ ನಲ್ಲಿ ಹೋಗುತ್ತಿರುವಾಗ ಜೆಸಿಬಿ ಡಿಕ್ಕಿಯಾಗಿ ಸಾವು ಸಂಭವಿಸಿದೆ.

ಜೆಸಿಬಿ ಡಿಕ್ಕಿಯಾಗಿ ಇಬ್ಬರ ಸಾವು; 2014ರಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಸವಾರನ ಸಾವಿಗೆ ಕಾರಣವಾಗಿದ್ದ ಆಂಬುಲೆನ್ಸ್ ಚಾಲಕನಿಗೆ 14 ತಿಂಗಳು ಜೈಲು
ಸಾಂಕೇತಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Dec 22, 2021 | 11:34 AM

Share

ತುಮಕೂರು: ಜೆಸಿಬಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಘವನಹೊಸೂರು ಬಳಿ ನಡೆದಿದೆ. ಬೈಕ್ನಲ್ಲಿದ್ದ ಸತೀಶ್(37) ಪರಶುರಾಮ್(26) ಮೃತ ದುರ್ದೈವಿ. ಬೈಕ್ ನಲ್ಲಿ ಹೋಗುತ್ತಿರುವಾಗ ಜೆಸಿಬಿ ಡಿಕ್ಕಿಯಾಗಿ ಸಾವು ಸಂಭವಿಸಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರೈಲಿಗೆ ಸಿಲುಕಿ ವ್ಯಕ್ತಿ ಸಾವು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರು ಸುಮಾರು 45 ವರ್ಷದ ಗುಬ್ಬಿ ಮೂಲದ ಅಪರಿಚಿತ ವ್ಯಕ್ತಿ ಎನ್ನಲಾಗಿದೆ. ತುಮಕೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ಶಿವ(30) ಮೃತ ದುರ್ದೈವಿ. ವೈ.ಎನ್. ಹೊಸಕೋಟೆಯಿಂದ ಬೆಸ್ತರಹಳ್ಳಿಗೆ ಹೋಗುವಾಗ ಈಚರ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಾವಿಗೆ ಕಾರಣವಾಗಿದ್ದ ಌಂಬುಲೆನ್ಸ್ ಚಾಲಕನಿಗೆ 14 ತಿಂಗಳು ಜೈಲು ಮತ್ತು ₹9 ಸಾವಿರ ದಂಡ ವಿಧಿಸಲಾಗಿದೆ. ಪಾವಗಡದ ಸಿವಿಲ್ ನ್ಯಾಯಾಲಯದ ಪ್ರದಾನ ನ್ಯಾಯಾಧೀಶ ಜಗದೀಶ್ ಬಿಸೆರೊಟ್ಟಿ ಆದೇಶ ಹೊರಡಿಸಿದ್ದಾರೆ. 2014 ರ ಅಕ್ಟೋಬರ್ ನಲ್ಲಿ ಅಂಬುಲೇನ್ಸ್ ಚಾಲಕ ನರೇಂದ್ರ ಅತಿವೇಗ ಅಜಾಗರೂಕತೆಯಿಂದ ಚಾಲನೆ ಮಾಡಿ ಬೈಕ್ ಡಿಕ್ಕಿ ಹೊಡೆದಿದ್ದರು. ಬೈಕ್ ಸವಾರ ಮಹಬೂಬ್ ಸಾಬ್ ಮೃತಪಟ್ಟಿದ್ದರು. ಪಾವಗಡ ಸಿಪಿಐ ಭಾನು ಪ್ರಸಾದ್ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ವಕೀಲ ಮಂಜುನಾಥ್ ವಾದ ಮಂಡಿಸಿದ್ದರು. ಸದ್ಯ ಈಗ ಚಾಲಕನಿಗೆ 14 ತಿಂಗಳು ಜೈಲು ಮತ್ತು ₹9 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Book Release: ಉಪನ್ಯಾಸಕಿ ಶ್ರುತಿ ಜೈನ್ ಅಂತರಾಳದ ಮಾತು; ಪ್ರೀತಿಗೊಂದು ಹೆಸರು ಇದು ‘ಝಿಪ್ಪಿ ಗ್ರಫಿ’ ಲೋಕಾರ್ಪಣೆಗೆ ಸಿದ್ಧ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ