AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಸಿಬಿ ಡಿಕ್ಕಿಯಾಗಿ ಇಬ್ಬರ ಸಾವು; 2014ರಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಸವಾರನ ಸಾವಿಗೆ ಕಾರಣವಾಗಿದ್ದ ಆಂಬುಲೆನ್ಸ್ ಚಾಲಕನಿಗೆ 14 ತಿಂಗಳು ಜೈಲು

ಬೈಕ್ನಲ್ಲಿದ್ದ ಸತೀಶ್(37) ಪರಶುರಾಮ್(26) ಮೃತ ದುರ್ದೈವಿ. ಬೈಕ್ ನಲ್ಲಿ ಹೋಗುತ್ತಿರುವಾಗ ಜೆಸಿಬಿ ಡಿಕ್ಕಿಯಾಗಿ ಸಾವು ಸಂಭವಿಸಿದೆ.

ಜೆಸಿಬಿ ಡಿಕ್ಕಿಯಾಗಿ ಇಬ್ಬರ ಸಾವು; 2014ರಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಸವಾರನ ಸಾವಿಗೆ ಕಾರಣವಾಗಿದ್ದ ಆಂಬುಲೆನ್ಸ್ ಚಾಲಕನಿಗೆ 14 ತಿಂಗಳು ಜೈಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 22, 2021 | 11:34 AM

Share

ತುಮಕೂರು: ಜೆಸಿಬಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಘವನಹೊಸೂರು ಬಳಿ ನಡೆದಿದೆ. ಬೈಕ್ನಲ್ಲಿದ್ದ ಸತೀಶ್(37) ಪರಶುರಾಮ್(26) ಮೃತ ದುರ್ದೈವಿ. ಬೈಕ್ ನಲ್ಲಿ ಹೋಗುತ್ತಿರುವಾಗ ಜೆಸಿಬಿ ಡಿಕ್ಕಿಯಾಗಿ ಸಾವು ಸಂಭವಿಸಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರೈಲಿಗೆ ಸಿಲುಕಿ ವ್ಯಕ್ತಿ ಸಾವು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರು ಸುಮಾರು 45 ವರ್ಷದ ಗುಬ್ಬಿ ಮೂಲದ ಅಪರಿಚಿತ ವ್ಯಕ್ತಿ ಎನ್ನಲಾಗಿದೆ. ತುಮಕೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ಶಿವ(30) ಮೃತ ದುರ್ದೈವಿ. ವೈ.ಎನ್. ಹೊಸಕೋಟೆಯಿಂದ ಬೆಸ್ತರಹಳ್ಳಿಗೆ ಹೋಗುವಾಗ ಈಚರ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಾವಿಗೆ ಕಾರಣವಾಗಿದ್ದ ಌಂಬುಲೆನ್ಸ್ ಚಾಲಕನಿಗೆ 14 ತಿಂಗಳು ಜೈಲು ಮತ್ತು ₹9 ಸಾವಿರ ದಂಡ ವಿಧಿಸಲಾಗಿದೆ. ಪಾವಗಡದ ಸಿವಿಲ್ ನ್ಯಾಯಾಲಯದ ಪ್ರದಾನ ನ್ಯಾಯಾಧೀಶ ಜಗದೀಶ್ ಬಿಸೆರೊಟ್ಟಿ ಆದೇಶ ಹೊರಡಿಸಿದ್ದಾರೆ. 2014 ರ ಅಕ್ಟೋಬರ್ ನಲ್ಲಿ ಅಂಬುಲೇನ್ಸ್ ಚಾಲಕ ನರೇಂದ್ರ ಅತಿವೇಗ ಅಜಾಗರೂಕತೆಯಿಂದ ಚಾಲನೆ ಮಾಡಿ ಬೈಕ್ ಡಿಕ್ಕಿ ಹೊಡೆದಿದ್ದರು. ಬೈಕ್ ಸವಾರ ಮಹಬೂಬ್ ಸಾಬ್ ಮೃತಪಟ್ಟಿದ್ದರು. ಪಾವಗಡ ಸಿಪಿಐ ಭಾನು ಪ್ರಸಾದ್ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ವಕೀಲ ಮಂಜುನಾಥ್ ವಾದ ಮಂಡಿಸಿದ್ದರು. ಸದ್ಯ ಈಗ ಚಾಲಕನಿಗೆ 14 ತಿಂಗಳು ಜೈಲು ಮತ್ತು ₹9 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Book Release: ಉಪನ್ಯಾಸಕಿ ಶ್ರುತಿ ಜೈನ್ ಅಂತರಾಳದ ಮಾತು; ಪ್ರೀತಿಗೊಂದು ಹೆಸರು ಇದು ‘ಝಿಪ್ಪಿ ಗ್ರಫಿ’ ಲೋಕಾರ್ಪಣೆಗೆ ಸಿದ್ಧ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ