AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರವಾನಗಿ ಇಲ್ಲದೆ ಓಡಿಸ್ತಿದ್ದ 15 ಆಟೋಗಳು, 1 ಶಾಲಾ ಬಸ್ ವಶಕ್ಕೆ ಪಡೆದ​ ಆರ್​​ಟಿಒ ಅಧಿಕಾರಿಗಳು

ಶಿರಾ ಪಟ್ಟಣದಲ್ಲಿ ಪರವಾನಗಿ ಇಲ್ಲದೆ ಓಡಿಸುತ್ತಿದ್ದ 15 ಆಟೋಗಳು ಹಾಗೂ 1 ಶಾಲಾ ಬಸ್​ನ್ನು​ ಆರ್​​ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ಶೂರೆನ್ಸ್, ಡಿಎಲ್ ಇಲ್ಲದೇ ವಾಹನ ಓಡಿಸುತ್ತಿದ್ದ ಚಾಲಕರಿಗೆ ಆರ್​ಟಿಒ ಇನ್ಸ್​ಪೆಕ್ಟರ್ ಶರೀಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶಾಕ್​ ನೀಡಿದ್ದಾರೆ.

ಪರವಾನಗಿ ಇಲ್ಲದೆ ಓಡಿಸ್ತಿದ್ದ 15 ಆಟೋಗಳು, 1 ಶಾಲಾ ಬಸ್ ವಶಕ್ಕೆ ಪಡೆದ​ ಆರ್​​ಟಿಒ ಅಧಿಕಾರಿಗಳು
ಆರ್​ಟಿಒ ಸೀಜ್​
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 22, 2023 | 10:59 AM

Share

ತುಮಕೂರು, ಸೆ.22: ತುಮಕೂರು ಆರ್​ಟಿಒ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಶಿರಾ ಪಟ್ಟಣ (Sira Town) ದಲ್ಲಿ ಪರವಾನಗಿ ಇಲ್ಲದೆ ಓಡಿಸುತ್ತಿದ್ದ 15 ಆಟೋಗಳು ಹಾಗೂ 1 ಶಾಲಾ ಬಸ್​ನ್ನು​ ಆರ್​​ಟಿಒ (RTO Official) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ಶೂರೆನ್ಸ್, ಡಿಎಲ್ ಇಲ್ಲದೇ ವಾಹನ ಓಡಿಸುತ್ತಿದ್ದ ಚಾಲಕರಿಗೆ ಆರ್​ಟಿಒ ಇನ್ಸ್​ಪೆಕ್ಟರ್ ಶರೀಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶಾಕ್​ ನೀಡಿದ್ದಾರೆ. ಬಹಳ ದಿನಗಳಿಂದ ಸಾರಿಗೆ ಇಲಾಖೆಗೆ ಕಣ್ಣುತಪ್ಪಿಸಿ ಈ ವಾಹನಗಳು ಸಂಚರಿಸುತ್ತಿದ್ದವು. ಇದೀಗ ವಶಕ್ಕೆ ಪಡೆದಿದ್ದು, ಸಾರಿಗೆ ಇಲಾಖೆ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ.

ಕೆರೆಗಳಲ್ಲಿ ಅಕ್ರಮ ಮಣ್ಣು ಮಾಫಿಯಾ, ಒಂದು ಲಾರಿ, ಜೆಸಿಬಿ ಪೊಲೀಸರ ವಶಕ್ಕೆ

ಕೋಲಾರ: ಇತ್ತೀಚೆಗೆ ರಾಜ್ಯದ ಗದಗದಲ್ಲಿ ಮಣ್ಣು ಮಾಫಿಯಾ ಬೆಳಕಿಗೆ ಬಂದಿತ್ತು. ಇದೀಗ ಕೋಲಾರ ತಾಲೂಕಿನ ಆಲೇರಿ ಕೆರೆಯಲ್ಲಿ ಅಕ್ರಮ ಮಣ್ಣು ಮಾಫಿಯಾ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಒಂದು ಲಾರಿ, ಜೆಸಿಬಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಜಿಲ್ಲಾ ಪಂಚಾಯತ್​​ CEO ಪದ್ಮಾಬಸಂತಪ್ಪ ಸೂಚನೆ ಮೇರೆಗೆ ಕಾರ್ಯಾಚರಣೆ ಮಾಡಲಾಗಿತ್ತು. ಇದೀಗ ಲಾರಿ, ಜೆಸಿಬಿಯನ್ನು ಜಪ್ತಿ ಮಾಡಲಾಗಿದ್ದು, ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದ ಖಾಸಗಿ ಬಸ್​​ಗಳು​​: ಬೆಂಗಳೂರು, ಉಡುಪಿಯಲ್ಲಿ ಆರ್​​ಟಿಒ ಅಧಿಕಾರಿಗಳ ಕಾರ್ಯಾಚರಣೆ

ಹಳೇ ವೈಷಮ್ಯ; ಗುಂಪು ಗಲಾಟೆಯಲ್ಲಿ ಐವರಿಗೆ ಚಾಕು ಇರಿತ ಶಿವಮೊಗ್ಗ: ನಗರದ ದ್ರೌಪದಮ್ಮ ಸರ್ಕಲ್​ನಲ್ಲಿ ತಡರಾತ್ರಿ ಹಳೇ ವೈಷಮ್ಯ ಹಿನ್ನಲೆ ಎರಡು ಗುಂಪಿನ ಗಲಾಟೆಯಲ್ಲಿ ಐವರಿಗೆ ಚಾಕು ಇರಿದ ಘಟನೆ ನಡೆದಿದೆ. ಪವನ್ ಹಾಗೂ ಕಿರಣ್ ಎಂಬಾತನ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?