AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬಲೆಗೆ ಸಿಲುಕಿ ಒದ್ದಾಡುತ್ತಿದ್ದ ಏಳು ಅಡಿ ಉದ್ದದ ಕೆರೆ ಹಾವು ರಕ್ಷಣೆ

ಬಲೆಯನ್ನು ಕತ್ತರಿಸಿ, ಮೈದಾನದ ನೆಟ್​ನಲ್ಲಿ ಸಿಲುಕಿ ಪರದಾಡುತ್ತಿದ್ದ ಹಾವನ್ನು ರಕ್ಷಿಸಿದ್ದಾರೆ. ಇನ್ನೂ ಹಾವು ಸರಿಸುಮಾರು ನಾಲ್ಕು ಗಂಟೆಗಳ ಕಾಲ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿತ್ತು. ಸದ್ಯ ವನ್ಯಜೀವಿ ಸಂಸ್ಥೆಯವರು ಅರ್ಧಗಂಟೆ ಕಾಲ ಕಾರ್ಯಾಚರಣೆ ನಡೆಸಿ ಹಾವು ರಕ್ಷಿಸಿದ್ದಾರೆ.

ತುಮಕೂರು: ಬಲೆಗೆ ಸಿಲುಕಿ ಒದ್ದಾಡುತ್ತಿದ್ದ ಏಳು ಅಡಿ ಉದ್ದದ ಕೆರೆ ಹಾವು ರಕ್ಷಣೆ
ಏಳು ಅಡಿ ಉದ್ದದ ಕೆರೆ ಹಾವು ರಕ್ಷಣೆ
TV9 Web
| Edited By: |

Updated on:Nov 24, 2021 | 10:58 AM

Share

ತುಮಕೂರು: ಆಟದ ಮೈದಾನದ ಬಲೆಗೆ ಸಿಲುಕಿ ಹಾವೊಂದು ಒದ್ದಾಡುತ್ತಿದ್ದ ಘಟನೆ ತುಮಕೂರು ನಗರದ ಬಟವಾಡಿ ಬಳಿಯಿರುವ ಖಾಸಗಿ ಶಾಲೆ ಬಳಿಯ ಮೈದಾನದಲ್ಲಿ ನಡೆದಿದೆ. ಮೈದಾನದಲ್ಲಿದ್ದ  ಬಲೆಯಲ್ಲಿ ಏಳು ಅಡಿಯ ಕೆರೆ ಹಾವು (Snake) ಸಿಲುಕಿ ಒದ್ದಾಡುತ್ತಿತ್ತು. ಈ ವೇಳೆ ಗಮನಿಸಿದ ಯುವಕನೋರ್ವ ವಾರಂಗಲ್ ವನ್ಯಜೀವಿ ಸಂಸ್ಥೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ವಾರಂಗಲ್ ವನ್ಯಜೀವಿ ಸಂಸ್ಥೆಯ ಉರಗತಜ್ಞ ದಿಲೀಪ್, ಗುರಕಿರಣ್, ಗಿರೀಶ್, ನೀತಿನ್ ರಾಜ್ ಹಾವನ್ನು ರಕ್ಷಣೆ (Rescue) ಮಾಡಿದ್ದಾರೆ.

ಬಲೆಯನ್ನು ಕತ್ತರಿಸಿ, ಮೈದಾನದ ನೆಟ್​ನಲ್ಲಿ ಸಿಲುಕಿ ಪರದಾಡುತ್ತಿದ್ದ ಹಾವನ್ನು ರಕ್ಷಿಸಿದ್ದಾರೆ. ಇನ್ನೂ ಹಾವು ಸರಿಸುಮಾರು ನಾಲ್ಕು ಗಂಟೆಗಳ ಕಾಲ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿತ್ತು. ಸದ್ಯ ವನ್ಯಜೀವಿ ಸಂಸ್ಥೆಯವರು ಅರ್ಧಗಂಟೆ ಕಾಲ ಕಾರ್ಯಾಚರಣೆ ನಡೆಸಿ ಹಾವು ರಕ್ಷಿಸಿದ್ದಾರೆ.

ಇತ್ತೀಚೆಗೆ ಸುರಿದ ನಿರಂತರ ಮಳೆಗೆ ಹಾವುಗಳು, ಇನ್ನಿತರ ವಿಷ ಜಂತುಗಳು, ಕೀಟಗಳು ಬಯಲಿಗೆ ಬರುತ್ತಿದ್ದು, ಮನೆಗಳಿಗೂ ನುಗ್ಗಿ ಆತಂಕ ಸೃಷ್ಟಿ ಮಾಡುತ್ತಿವೆ. ಸದ್ಯ ಏಳು ಅಡಿ ಹಾವು ರಕ್ಷಣೆ ಮಾಡಲಾಗಿದ್ದು, ನಂತರ ಹಾವನ್ನು ಕಾಡಿನತ್ತ ಬಿಟ್ಟಿದ್ದಾರೆ.

ಬೆಂಗಳೂರು: ವರುಣನ ಅವಾಂತರದ ಮಧ್ಯೆ ಮೀನನ್ನು ನುಂಗಿನೀರು ಕುಡಿದ ಹಾವು ಅಕಾಲಿಕ ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿದ್ದಾರೆ. ಬೆಂಗಳೂರಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ. ಈ ನಡುವೆ ಇನ್ನೂ 2 ದಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಧಾರಾಕಾರ ಮಳೆಗೆ ರಸ್ತೆಗಳೇ ಕೆರೆಗಳಂತಾಗಿವೆ. ಹುಳ, ಹಪಟೆಗಳು ಮನೆ ಹೊಕ್ಕಿವೆ. ಅಂತೆಯೇ ಭಾರೀ ಮಳೆಗೆ ಸಿಂಗಾಪುರ ಕೆರೆ ಕೋಡಿ ಒಡೆದ ಪರಿಣಾಮ ಸಮೀಪದ ಲೇಔಟ್​ಗೆ ನೀರು ಸತತವಾಗಿ ನುಗ್ಗುತ್ತಿದೆ. ಈ ಅವಾಂತರದ ಮಧ್ಯೆ ಮೀನನ್ನು ಹಾವೊಂದು ನುಂಗಿದೆ. ಸದ್ಯ ಮೀನು ನುಂಗುತ್ತಿರುವ ದೃಶ್ಯ ನೋಡಿ ಸ್ಥಳೀಯ ನಿವಾಸಿಗಳು ಹೌಹಾರಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಬೆಂಗಳೂರಿನ ಸಿಂಗಪೂರ್ ಕಾಲೊನಿಯಲ್ಲಿ  ಮಳೆನೀರಿನ ಜೊತೆ ಹಾವುಗಳೂ ಹರಿದು ಬರುತ್ತಿವೆ!

ವರುಣನ ಅವಾಂತರದ ಮಧ್ಯೆ ಮೀನನ್ನು ನುಂಗಿನೀರು ಕುಡಿದ ಹಾವು

Published On - 10:53 am, Wed, 24 November 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು