AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬಲೆಗೆ ಸಿಲುಕಿ ಒದ್ದಾಡುತ್ತಿದ್ದ ಏಳು ಅಡಿ ಉದ್ದದ ಕೆರೆ ಹಾವು ರಕ್ಷಣೆ

ಬಲೆಯನ್ನು ಕತ್ತರಿಸಿ, ಮೈದಾನದ ನೆಟ್​ನಲ್ಲಿ ಸಿಲುಕಿ ಪರದಾಡುತ್ತಿದ್ದ ಹಾವನ್ನು ರಕ್ಷಿಸಿದ್ದಾರೆ. ಇನ್ನೂ ಹಾವು ಸರಿಸುಮಾರು ನಾಲ್ಕು ಗಂಟೆಗಳ ಕಾಲ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿತ್ತು. ಸದ್ಯ ವನ್ಯಜೀವಿ ಸಂಸ್ಥೆಯವರು ಅರ್ಧಗಂಟೆ ಕಾಲ ಕಾರ್ಯಾಚರಣೆ ನಡೆಸಿ ಹಾವು ರಕ್ಷಿಸಿದ್ದಾರೆ.

ತುಮಕೂರು: ಬಲೆಗೆ ಸಿಲುಕಿ ಒದ್ದಾಡುತ್ತಿದ್ದ ಏಳು ಅಡಿ ಉದ್ದದ ಕೆರೆ ಹಾವು ರಕ್ಷಣೆ
ಏಳು ಅಡಿ ಉದ್ದದ ಕೆರೆ ಹಾವು ರಕ್ಷಣೆ
TV9 Web
| Edited By: |

Updated on:Nov 24, 2021 | 10:58 AM

Share

ತುಮಕೂರು: ಆಟದ ಮೈದಾನದ ಬಲೆಗೆ ಸಿಲುಕಿ ಹಾವೊಂದು ಒದ್ದಾಡುತ್ತಿದ್ದ ಘಟನೆ ತುಮಕೂರು ನಗರದ ಬಟವಾಡಿ ಬಳಿಯಿರುವ ಖಾಸಗಿ ಶಾಲೆ ಬಳಿಯ ಮೈದಾನದಲ್ಲಿ ನಡೆದಿದೆ. ಮೈದಾನದಲ್ಲಿದ್ದ  ಬಲೆಯಲ್ಲಿ ಏಳು ಅಡಿಯ ಕೆರೆ ಹಾವು (Snake) ಸಿಲುಕಿ ಒದ್ದಾಡುತ್ತಿತ್ತು. ಈ ವೇಳೆ ಗಮನಿಸಿದ ಯುವಕನೋರ್ವ ವಾರಂಗಲ್ ವನ್ಯಜೀವಿ ಸಂಸ್ಥೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ವಾರಂಗಲ್ ವನ್ಯಜೀವಿ ಸಂಸ್ಥೆಯ ಉರಗತಜ್ಞ ದಿಲೀಪ್, ಗುರಕಿರಣ್, ಗಿರೀಶ್, ನೀತಿನ್ ರಾಜ್ ಹಾವನ್ನು ರಕ್ಷಣೆ (Rescue) ಮಾಡಿದ್ದಾರೆ.

ಬಲೆಯನ್ನು ಕತ್ತರಿಸಿ, ಮೈದಾನದ ನೆಟ್​ನಲ್ಲಿ ಸಿಲುಕಿ ಪರದಾಡುತ್ತಿದ್ದ ಹಾವನ್ನು ರಕ್ಷಿಸಿದ್ದಾರೆ. ಇನ್ನೂ ಹಾವು ಸರಿಸುಮಾರು ನಾಲ್ಕು ಗಂಟೆಗಳ ಕಾಲ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿತ್ತು. ಸದ್ಯ ವನ್ಯಜೀವಿ ಸಂಸ್ಥೆಯವರು ಅರ್ಧಗಂಟೆ ಕಾಲ ಕಾರ್ಯಾಚರಣೆ ನಡೆಸಿ ಹಾವು ರಕ್ಷಿಸಿದ್ದಾರೆ.

ಇತ್ತೀಚೆಗೆ ಸುರಿದ ನಿರಂತರ ಮಳೆಗೆ ಹಾವುಗಳು, ಇನ್ನಿತರ ವಿಷ ಜಂತುಗಳು, ಕೀಟಗಳು ಬಯಲಿಗೆ ಬರುತ್ತಿದ್ದು, ಮನೆಗಳಿಗೂ ನುಗ್ಗಿ ಆತಂಕ ಸೃಷ್ಟಿ ಮಾಡುತ್ತಿವೆ. ಸದ್ಯ ಏಳು ಅಡಿ ಹಾವು ರಕ್ಷಣೆ ಮಾಡಲಾಗಿದ್ದು, ನಂತರ ಹಾವನ್ನು ಕಾಡಿನತ್ತ ಬಿಟ್ಟಿದ್ದಾರೆ.

ಬೆಂಗಳೂರು: ವರುಣನ ಅವಾಂತರದ ಮಧ್ಯೆ ಮೀನನ್ನು ನುಂಗಿನೀರು ಕುಡಿದ ಹಾವು ಅಕಾಲಿಕ ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿದ್ದಾರೆ. ಬೆಂಗಳೂರಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ. ಈ ನಡುವೆ ಇನ್ನೂ 2 ದಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಧಾರಾಕಾರ ಮಳೆಗೆ ರಸ್ತೆಗಳೇ ಕೆರೆಗಳಂತಾಗಿವೆ. ಹುಳ, ಹಪಟೆಗಳು ಮನೆ ಹೊಕ್ಕಿವೆ. ಅಂತೆಯೇ ಭಾರೀ ಮಳೆಗೆ ಸಿಂಗಾಪುರ ಕೆರೆ ಕೋಡಿ ಒಡೆದ ಪರಿಣಾಮ ಸಮೀಪದ ಲೇಔಟ್​ಗೆ ನೀರು ಸತತವಾಗಿ ನುಗ್ಗುತ್ತಿದೆ. ಈ ಅವಾಂತರದ ಮಧ್ಯೆ ಮೀನನ್ನು ಹಾವೊಂದು ನುಂಗಿದೆ. ಸದ್ಯ ಮೀನು ನುಂಗುತ್ತಿರುವ ದೃಶ್ಯ ನೋಡಿ ಸ್ಥಳೀಯ ನಿವಾಸಿಗಳು ಹೌಹಾರಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಬೆಂಗಳೂರಿನ ಸಿಂಗಪೂರ್ ಕಾಲೊನಿಯಲ್ಲಿ  ಮಳೆನೀರಿನ ಜೊತೆ ಹಾವುಗಳೂ ಹರಿದು ಬರುತ್ತಿವೆ!

ವರುಣನ ಅವಾಂತರದ ಮಧ್ಯೆ ಮೀನನ್ನು ನುಂಗಿನೀರು ಕುಡಿದ ಹಾವು

Published On - 10:53 am, Wed, 24 November 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!