AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಮನೆಗೆ ನುಗ್ಗಿ ಕರೆದುಕೊಂಡು ಹೋದರು, ಅಪರಾಧಿಯಂತೆ ನಡೆಸಿಕೊಂಡರು: ಪೊಲೀಸರ ವಿರುದ್ಧ ಶಕುಂತಲಾ ನಟರಾಜ್​ ಆರೋಪ

ನಿನ್ನೆ ಬೆಳಗ್ಗೆ 7.30 ಸುಮಾರಿಗೆ 8 ಜನ ಪೊಲೀಸರು ಏಕಾಏಕಿ ಮನೆಗೆ ನುಗ್ಗಿ, ಮಕ್ಕಳ ಮುಂದೆಯೇ ನನ್ನನ್ನು ಕರೆದುಕೊಂಡು ಹೋಗಿದ್ದಾರೆ. ಫೋನ್​​​ ಕಸಿದುಕೊಂಡು ಅಪರಾಧಿ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣದ ಸಹಸಂಚಾಲಕಿ ಶಕುಂತಲಾ ನಟರಾಜ್​ ಆರೋಪಿಸಿದ್ದಾರೆ.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on:Jul 29, 2023 | 4:33 PM

Share

ತುಮಕೂರು, ಜುಲೈ 29: ಉಡುಪಿ ಕಾಲೇಜ್ ವಿದ್ಯಾರ್ಥಿನಿಯರ ವಿಡಿಯೋ ಕೇಸ್​​ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಕುಟುಂಬದ ವಿರುದ್ಧ ಟ್ವಿಟ್​​ ಮಾಡಿದ್ದ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಹಸಂಚಾಲಕಿ ಶಕುಂತಲಾ ನಟರಾಜ್​​ರನ್ನು ನಿನ್ನೆ ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿತ್ತು. ಇದೀಗ ಟಿವಿ9 ಜತೆ ಮಾತನಾಡಿದ ಅವರು, ಮನೆಗೆ ಬಂದು ಏಕಾಏಕಿ ನನ್ನನ್ನು ಪೊಲೀಸರು ಕರದುಕೊಂಡು ಹೋದರು. ಫೋನ್​​​ ಕಸಿದುಕೊಂಡು ಅಪರಾಧಿ ರೀತಿಯಲ್ಲಿ ನಡೆಸಿಕೊಂಡರು ಎಂದು ಆರೋಪಿಸಿದ್ದಾರೆ.

ನಿನ್ನೆ ಬೆಳಗ್ಗೆ 7.30 ಸುಮಾರಿಗೆ 8 ಜನ ಪೊಲೀಸರು ನಮ್ಮ ಮನೆಗೆ ಬಂದಿದ್ದರು. ಡ್ರೆಸ್​ ಬದಲಾಯಿಸಿಕೊಳ್ಳಲು ಬಿಡದೆ, ಮಕ್ಕಳ ಮುಂದೆಯೇ ನನ್ನನ್ನು ಕರೆದುಕೊಂಡು ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆಗೆ ಹೋದರು. ಪೊಲೀಸ್ ಠಾಣೆಯಲ್ಲಿ ಹೀಗೆಲ್ಲಾ ಬರೆಯಬೇಡಿ ಎಂದು ಹೇಳಿದರು. ಬಳಿಕ ನಮ್ಮ ಪಕ್ಷದ ನಾಯಕರಾದ ರವಿಕುಮಾರ್, ಸಿದ್ದರಾಜು, ಅಶ್ವತ್ ನಾರಾಯಣ ಬಂದು ಜಾಮೀನು ಕೊಡಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ

ಸಿದ್ದರಾಮಯ್ಯ ಸರ್ಕಾರ ಹಿಟ್ಲರ್​ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಅವರು ಏನಾದರೂ ಪ್ರಶ್ನಾತೀತಾ ನಾಯಕರಾ? ನಾವು ಏನೂ ಪ್ರಶ್ನೆ ಮಾಡಬಾರದಾ ಎಂದು ಪ್ರಶ್ನಿಸಿದರು. ಸಣ್ಣ ವಿಷಯವನ್ನು ದೊಡ್ಡದು ಮಾಡಿ ಕಾನೂನು ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಮನೆ ಹಾಳಾಗ ಅಂದಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಏಕವಚನದಲ್ಲಿ ಮಾತನಾಡುತ್ತಾರೆ. ಆದರೆ ನಾವು ಅವರ ಮನೆಯ ಬಗ್ಗೆ ಮಾತಾಡಿದಕ್ಕೆ ವೈಯಕ್ತಿವಾಗಿ ತೆಗೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಶಕುಂತಲಾ ನಟರಾಜ್ ವಾಗ್ದಾಳಿ ಮಾಡಿದ್ದಾರೆ.

ಏನೇ ಆದರೂ ಕೂಡ ನನ್ನ ಹೋರಾಟ ಹೀಗೆ ಇರುತ್ತೆ. ಕೇಸ್ ಹಾಕಿದ ತಕ್ಷಣ ನಾನು ತಲೆಕೆಡಿಸಿಕೊಳ್ಳಲ್ಲ. ನನ್ನ ಒಬ್ಬಳ ಧ್ವನಿ ಧಮನ ಮಾಡಿದರೆ, ನನ್ನಂತ ನೂರು ಕಾರ್ಯಕರ್ತರು ಬಿಜೆಪಿಯಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದರು.

ಮುಸ್ಲಿಂ ಯುವತಿಯರು ಟಾಯ್ಲೆಟ್​ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​​ ಅವರ ಪ್ರಕಾರ ಮಕ್ಕಳಾಟವಂತೆ. ಸಿಎಂ ಸಿದ್ಧರಾಮಯ್ಯ ಅವರ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ, ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ ಎಂದು ಶಕುಂತಲಾ ನಟರಾಜ್​ ನಿನ್ನೆ ಟ್ವೀಟ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:24 pm, Sat, 29 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ