AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಯಕ ಯೋಗಿ ಹುಟ್ಟುಹಬ್ಬ ಆಚರಣೆಗೆ ಕೊರೊನಾ ಅಡ್ಡಿ.. ಸರಳ ಆಚರಣೆಗೆ ಸಿದ್ಧತೆ

ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಹುಟ್ಟುಹಬ್ಬ ಅದ್ದೂರಿಯಾಗಿ ಆಚರಿಸಲು ಸಿದ್ಧಗಂಗಾ ಮಠ ಸಿದ್ದತೆ ಮಾಡಿಕೊಂಡಿತ್ತು. ಆದ್ರೆ ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಶುರುವಾಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ನಿನ್ನೆ ಸಿಎಂ ಬಿ.ಎಸ್. ಯಡಿಯೂರಪ್ಪ ಕೊರೊನಾ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.

ಕಾಯಕ ಯೋಗಿ ಹುಟ್ಟುಹಬ್ಬ ಆಚರಣೆಗೆ ಕೊರೊನಾ ಅಡ್ಡಿ.. ಸರಳ ಆಚರಣೆಗೆ ಸಿದ್ಧತೆ
ಸಿದ್ಧಲಿಂಗ ಶ್ರೀಗಳು
ಆಯೇಷಾ ಬಾನು
|

Updated on: Mar 30, 2021 | 11:22 AM

Share

ತುಮಕೂರು: ಕಾಯಕ ಯೋಗಿ, ಭಕ್ತರ ಪಾಲಿನ ಭಗವಂತ, ಅರಿವಿನ ಜ್ಯೋತಿ ಬೆಳಗಿಸಿದ ಪರಮ ಗುರು, ಅದೆಷ್ಟೂ ಮಕ್ಕಳ ಭವಿಷ್ಯ ರೂಪಿಸಿದ ನಡೆದಾಡುವ ದೇವರು. ಇಂತಹ ಮಹಾನ್ ಸಾಧಕನ ಜನ್ಮದಿನಾಚರಣೆಗೆ ಕೊರೊನಾ ಅಡ್ಡಿಯಾಗಿದೆ. ಏಪ್ರಿಲ್ 1ರಂದು ಸಿದ್ಧಗಂಗಾ ಮಠದ ಶಿವೈಕ್ಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿಗಳ ಜನ್ಮದಿನ. ಆದ್ರೆ ಕೊರೊನಾ ಎರಡನೇ ಅಲೆಯ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಸಿದ್ಧಗಂಗಾ ಮಠ ನಿರ್ಧರಿಸಿದೆ.

ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಹುಟ್ಟುಹಬ್ಬ ಅದ್ದೂರಿಯಾಗಿ ಆಚರಿಸಲು ಸಿದ್ಧಗಂಗಾ ಮಠ ಸಿದ್ದತೆ ಮಾಡಿಕೊಂಡಿತ್ತು. ಆದ್ರೆ ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಶುರುವಾಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ನಿನ್ನೆ ಸಿಎಂ ಬಿ.ಎಸ್. ಯಡಿಯೂರಪ್ಪ ಕೊರೊನಾ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ಹೀಗಾಗಿ ಸರಳವಾಗಿ ಶಿವಕುಮಾರ ಸ್ವಾಮೀಜಿಗಳ ಹುಟ್ಟುಹಬ್ಬವನ್ನು ಆಚರಿಸಲು ಮಠ ನಿರ್ಧರಿಸಿದೆ. ಕೊರೊನಾ ಮಾರ್ಗಸೂಚಿಯ ಪ್ರಕಾರ ಎಲ್ಲಾ ರೀತಿ ಸಿದ್ಧತೆಗಳನ್ನು ಮಠದ ಸಿಬ್ಬಂದಿ ಮಾಡಿಕೊಳ್ಳುತ್ತಿದ್ದಾರೆ.

ಏಪ್ರಿಲ್ 1 ಗದ್ದುಗೆ ಪೂಜೆ ನೆರವೇರಿಸಿ ಹುಟ್ಟುಹಬ್ಬ ಆಚರಣೆ ಮಾಡಲು ಸಿದ್ಧತೆ ನಡೆದಿದೆ. ಹಾಗೂ ಮಠಕ್ಕೆ ಭಕ್ತಾದಿಗಳು ಬರುವುದಕ್ಕೆ ನಿರ್ಬಂಧ ಇಲ್ಲ. ಮಠಕ್ಕೆ ಭಕ್ತರು ಬರಬಹುದು ಆದರೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು. ಭಕ್ತರು ಕೊವಿಡ್ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿರುತ್ತದೆ. ಕೊವಿಡ್ ಹಿನ್ನೆಲೆ ಉಪರಾಷ್ಟ್ರಪತಿ ಕಾರ್ಯಕ್ರಮವೂ ರದ್ದು ಮಾಡಲಾಗಿದೆ ಎಂದು ಸರಳವಾಗಿ ಆಚರಣೆ ಬಗ್ಗೆ ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು ತಿಳಿಸಿದ್ದಾರೆ.

ಇದನ್ನೂ ಓದಿ: 111 ವರ್ಷ ಕಾಲ ಬದುಕಿದ್ದ ಸಿದ್ದಗಂಗಾ ಶ್ರೀಗಳ 111 ಅಡಿ ಎತ್ತರದ ಪ್ರತಿಮೆ ವೀರಾಪುರದಲ್ಲಿ ತಲೆ ಎತ್ತಲಿದೆ!

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!