AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಪತರು ನಾಡಿನಲ್ಲಿ ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ; ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿ, ರಥೋತ್ಸವಕ್ಕೆ ಸಿದ್ಧತೆ

ಫೆಬ್ರವರಿ 23 ರಿಂದ ಮಾರ್ಚ್ 4ರ ವರೆಗೂ ಸಿದ್ಧಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಮಾರ್ಚ್ 1 ರಂದು ನಡೆಯಲಿರುವ ಶಿವರಾತ್ರಿ ಮಹೋತ್ಸವಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ 10 ದಿನಗಳಿಂದಲೂ ಮಠದ ಅಡುಗೆ ಭಟ್ಟರು, ಶ್ರೀ ಮಠದಲ್ಲಿನ ಮಕ್ಕಳು ಹಾಗೂ ಸಿಬ್ಬಂದಿ ಸೇರಿ ಇಷ್ಟು ಬೃಹತ್ ಪ್ರಮಾಣದಲ್ಲಿ ತಂಬಿಟ್ಟು ತಯಾರಿಸಿದ್ದಾರೆ.

ಕಲ್ಪತರು ನಾಡಿನಲ್ಲಿ ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ; ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿ, ರಥೋತ್ಸವಕ್ಕೆ ಸಿದ್ಧತೆ
ಸಿದ್ಧಗಂಗಾ ಮಠ
TV9 Web
| Edited By: ಆಯೇಷಾ ಬಾನು|

Updated on:Feb 28, 2022 | 7:38 AM

Share

ತುಮಕೂರು: ದಸರಾ ಎಂದರೆ ಮೈಸೂರಿಗೆ(Mysuru Dasara) ಹೇಗೆ ಒಂದು ಭೂಷಣವೂ ಹಾಗೇ ಕಲ್ಪತರು ನಾಡಿಗೆ ಸಿದ್ಧಗಂಗಾ ಮಠದಲ್ಲಿ(Siddaganga Mutt Jatre) ನಡೆಯುವ ಜಾತ್ರೆ ಫೇಮಸ್. ಅದರಲ್ಲೂ ಮಠದ ಪ್ರಸಾದ ಇನ್ನೂ ವಿಶೇಷ. ಈ ಬಾರಿ ಜಾತ್ರೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗ್ತಿದೆ. ತುಮಕೂರಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಕ್ಕಳಲ್ಲಿ ಅದೇನೋ ಹೊಸ ಸಡಗರ.. ಪ್ರಸಾದ ಸೇವಿಸಿ ಧನ್ಯರಾದ ಭಕ್ತರು.. ಹೌದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಜಾತ್ರೋತ್ಸವ ನಡೆದಿದೆ. ಕೊರೊನಾ ಹಿನ್ನೆಲೆ ಕಳೆಗುಂದಿದ್ದ ಜಾತ್ರೆಯನ್ನು ಈ ವರ್ಷ ಅದ್ಧೂರಿಯಾಗಿ ಆಯೋಜಿಸಲಾಗಿದೆ. ಶಿವರಾತ್ರಿ ಅಂಗವಾಗಿ ಪ್ರತಿ ಬಾರಿಯಂತೆ ಈ ಬಾರಿ ತಂಬಿಟ್ಟು ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಅಂದ್ರೆ ಈ ಬಾರಿ ಕಡ್ಲೆ, ಶೇಂಗಾ, ಅಕ್ಕಿ, ಎಳ್ಳು, ಕೊಬ್ಬರಿ ಮತ್ತು ಏಲಕ್ಕಿಯಂತಹ ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿಸಲಾಗಿದೆ.

ಫೆಬ್ರವರಿ 23 ರಿಂದ ಮಾರ್ಚ್ 4ರ ವರೆಗೂ ಸಿದ್ಧಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಮಾರ್ಚ್ 1 ರಂದು ನಡೆಯಲಿರುವ ಶಿವರಾತ್ರಿ ಮಹೋತ್ಸವಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ 10 ದಿನಗಳಿಂದಲೂ ಮಠದ ಅಡುಗೆ ಭಟ್ಟರು, ಶ್ರೀ ಮಠದಲ್ಲಿನ ಮಕ್ಕಳು ಹಾಗೂ ಸಿಬ್ಬಂದಿ ಸೇರಿ ಇಷ್ಟು ಬೃಹತ್ ಪ್ರಮಾಣದಲ್ಲಿ ತಂಬಿಟ್ಟು ತಯಾರಿಸಿದ್ದಾರೆ. ಈಗಾಗಲೇ ದನಗಳ ಜಾತ್ರೋತ್ಸವ ಹಾಗೂ ಕೃಷಿ ವಸ್ತು ಪ್ರದರ್ಶನ ನಡೆದಿದೆ. ಶಿವರಾತ್ರಿ ಮಾರನೇ ದಿನ ಅಂದ್ರೆ ಬುಧವಾರ ರಥೋತ್ಸವ ನಡೆಯಲಿದ್ದು ಭಾರಿ ಜನ ಆಗಮಿಸುವ ನಿರೀಕ್ಷೆ ಇದೆ. ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಜಾತ್ರೆಗೆ ಆಗಮಿಸಿ ಮೆರಗು ತಂದಿದ್ದಾರೆ.

ವರದಿ: ಮಹೇಶ್, ಟಿವಿ9, ತುಮಕೂರು

Siddaganga mutt jatre

ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ

ಇದನ್ನೂ ಓದಿ: ನೇರಳೆ ಹಣ್ಣಿನ ವಿನೆಗರ್ ಸೇವಿಸಿದ್ದೀರಾ? ಇದರಲ್ಲಿನ ಆರೋಗ್ಯಯುತ ಪ್ರಯೋಜನಗಳ ಬಗ್ಗೆ ನೀವು ತಿಳಿಯಲೇಬೇಕು

Ukraine Crisis: ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮ

Published On - 7:36 am, Mon, 28 February 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್