AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಪತರು ನಾಡಿನಲ್ಲಿ ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ; ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿ, ರಥೋತ್ಸವಕ್ಕೆ ಸಿದ್ಧತೆ

ಫೆಬ್ರವರಿ 23 ರಿಂದ ಮಾರ್ಚ್ 4ರ ವರೆಗೂ ಸಿದ್ಧಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಮಾರ್ಚ್ 1 ರಂದು ನಡೆಯಲಿರುವ ಶಿವರಾತ್ರಿ ಮಹೋತ್ಸವಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ 10 ದಿನಗಳಿಂದಲೂ ಮಠದ ಅಡುಗೆ ಭಟ್ಟರು, ಶ್ರೀ ಮಠದಲ್ಲಿನ ಮಕ್ಕಳು ಹಾಗೂ ಸಿಬ್ಬಂದಿ ಸೇರಿ ಇಷ್ಟು ಬೃಹತ್ ಪ್ರಮಾಣದಲ್ಲಿ ತಂಬಿಟ್ಟು ತಯಾರಿಸಿದ್ದಾರೆ.

ಕಲ್ಪತರು ನಾಡಿನಲ್ಲಿ ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ; ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿ, ರಥೋತ್ಸವಕ್ಕೆ ಸಿದ್ಧತೆ
ಸಿದ್ಧಗಂಗಾ ಮಠ
TV9 Web
| Edited By: ಆಯೇಷಾ ಬಾನು|

Updated on:Feb 28, 2022 | 7:38 AM

Share

ತುಮಕೂರು: ದಸರಾ ಎಂದರೆ ಮೈಸೂರಿಗೆ(Mysuru Dasara) ಹೇಗೆ ಒಂದು ಭೂಷಣವೂ ಹಾಗೇ ಕಲ್ಪತರು ನಾಡಿಗೆ ಸಿದ್ಧಗಂಗಾ ಮಠದಲ್ಲಿ(Siddaganga Mutt Jatre) ನಡೆಯುವ ಜಾತ್ರೆ ಫೇಮಸ್. ಅದರಲ್ಲೂ ಮಠದ ಪ್ರಸಾದ ಇನ್ನೂ ವಿಶೇಷ. ಈ ಬಾರಿ ಜಾತ್ರೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗ್ತಿದೆ. ತುಮಕೂರಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಕ್ಕಳಲ್ಲಿ ಅದೇನೋ ಹೊಸ ಸಡಗರ.. ಪ್ರಸಾದ ಸೇವಿಸಿ ಧನ್ಯರಾದ ಭಕ್ತರು.. ಹೌದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಜಾತ್ರೋತ್ಸವ ನಡೆದಿದೆ. ಕೊರೊನಾ ಹಿನ್ನೆಲೆ ಕಳೆಗುಂದಿದ್ದ ಜಾತ್ರೆಯನ್ನು ಈ ವರ್ಷ ಅದ್ಧೂರಿಯಾಗಿ ಆಯೋಜಿಸಲಾಗಿದೆ. ಶಿವರಾತ್ರಿ ಅಂಗವಾಗಿ ಪ್ರತಿ ಬಾರಿಯಂತೆ ಈ ಬಾರಿ ತಂಬಿಟ್ಟು ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಅಂದ್ರೆ ಈ ಬಾರಿ ಕಡ್ಲೆ, ಶೇಂಗಾ, ಅಕ್ಕಿ, ಎಳ್ಳು, ಕೊಬ್ಬರಿ ಮತ್ತು ಏಲಕ್ಕಿಯಂತಹ ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿಸಲಾಗಿದೆ.

ಫೆಬ್ರವರಿ 23 ರಿಂದ ಮಾರ್ಚ್ 4ರ ವರೆಗೂ ಸಿದ್ಧಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಮಾರ್ಚ್ 1 ರಂದು ನಡೆಯಲಿರುವ ಶಿವರಾತ್ರಿ ಮಹೋತ್ಸವಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ 10 ದಿನಗಳಿಂದಲೂ ಮಠದ ಅಡುಗೆ ಭಟ್ಟರು, ಶ್ರೀ ಮಠದಲ್ಲಿನ ಮಕ್ಕಳು ಹಾಗೂ ಸಿಬ್ಬಂದಿ ಸೇರಿ ಇಷ್ಟು ಬೃಹತ್ ಪ್ರಮಾಣದಲ್ಲಿ ತಂಬಿಟ್ಟು ತಯಾರಿಸಿದ್ದಾರೆ. ಈಗಾಗಲೇ ದನಗಳ ಜಾತ್ರೋತ್ಸವ ಹಾಗೂ ಕೃಷಿ ವಸ್ತು ಪ್ರದರ್ಶನ ನಡೆದಿದೆ. ಶಿವರಾತ್ರಿ ಮಾರನೇ ದಿನ ಅಂದ್ರೆ ಬುಧವಾರ ರಥೋತ್ಸವ ನಡೆಯಲಿದ್ದು ಭಾರಿ ಜನ ಆಗಮಿಸುವ ನಿರೀಕ್ಷೆ ಇದೆ. ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಜಾತ್ರೆಗೆ ಆಗಮಿಸಿ ಮೆರಗು ತಂದಿದ್ದಾರೆ.

ವರದಿ: ಮಹೇಶ್, ಟಿವಿ9, ತುಮಕೂರು

Siddaganga mutt jatre

ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ

ಇದನ್ನೂ ಓದಿ: ನೇರಳೆ ಹಣ್ಣಿನ ವಿನೆಗರ್ ಸೇವಿಸಿದ್ದೀರಾ? ಇದರಲ್ಲಿನ ಆರೋಗ್ಯಯುತ ಪ್ರಯೋಜನಗಳ ಬಗ್ಗೆ ನೀವು ತಿಳಿಯಲೇಬೇಕು

Ukraine Crisis: ಉಕ್ರೇನ್ ನಿರ್ಮಿತ ವಿಶ್ವದ ಬೃಹತ್​ ಸರಕು ಸಾಗಣೆ ವಿಮಾನ ಸುಟ್ಟು ಭಸ್ಮ

Published On - 7:36 am, Mon, 28 February 22

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್