AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ, ಸಚಿವ ಮಾಧುಸ್ವಾಮಿಯವರಿಂದ ವಿಶ್ವ ಜ್ಯೋತಿ ಪುಸ್ತಕ ಬಿಡುಗಡೆ

ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತುಮಕೂರು ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ, ಸಚಿವ ಮಾಧುಸ್ವಾಮಿಯವರಿಂದ ವಿಶ್ವ ಜ್ಯೋತಿ ಪುಸ್ತಕ ಬಿಡುಗಡೆ
ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸ್ಮರಣೆ
TV9 Web
| Edited By: ಆಯೇಷಾ ಬಾನು|

Updated on: Jan 21, 2023 | 1:32 PM

Share

ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಜೊತೆ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಎಸ್​​.ಟಿ.ಸೋಮಶೇಖರ್, ವಿ.ಸೋಮಣ್ಣ ಸೇರಿ ಹಲವರು ಭಾಗಿಯಾಗಿದ್ದರು.

ಇನ್ನು ಸಿದ್ದಗಂಗಾ ಮಠಕ್ಕೆ ಬಿಎಲ್ ಸಂತೋಷ್, ವಸತಿ ಸಚಿವ ವಿ ಸೋಮಣ್ಣ‌, ಬಿವೈ ವಿಜಯೇಂದ್ರ‌ ಹಾಗೂ ಸಚಿವ ಬಿ.ಸಿ. ನಾಗೇಶ್ ಕೂಡ ಆಗಮಿಸಿದ್ದಾರೆ. ಇನ್ನು ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಶಿವಕುಮಾರಶ್ರೀಗಳ ಪುಣ್ಯ ಸ್ಮರಣೆಯಲ್ಲಿ ಭಾಗಿಯಾಗಲು ಬಂದಿದ್ದೇನೆ. ಫೆಬ್ರವರಿ ತಿಂಗಳಿನಲ್ಲಿ ಶಿವಕುಮಾರ ಶ್ರೀಗಳಿಗೆ ಗೌರವ ಸಲ್ಲಿಸಿ ಸರ್ಕಾರದಿಂದ ದಾಸೋಹ ದಿನ ಆಚರಿಸಲಾಗುತ್ತೆ ಎಂದರು. ಇದೇ ವೇಳೆ ಶಿವಕುಮಾರ ಶ್ರೀಗಳ ಪುತ್ಥಳಿ ನಿರ್ಮಾಣ ಕಾಮಗಾರಿ ಸ್ಥಗಿತ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಮೊನ್ನೆ ಶ್ರೀಗಳ ಹುಟ್ಟೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಶೀಘ್ರದಲ್ಲಿ ಕಾಮಗಾರಿ ಮತ್ತೆ ಆರಂಭಿಸಲಾಗುವುದು ಎಂದರು.

Basavaraj bommai

ಮತ್ತೊಂದೆಡೆ ಸಿದ್ಧಗಂಗಾ ಮಠದ ಗೋಸಲ ಸಿದ್ದೇಶ್ವರ ರಂಗಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಲ್​.ಸಂತೋಷ್, ಸಚಿವರಾದ ಆರಗ ಜ್ಞಾನೇಂದ್ರ, ಮಾಧುಸ್ವಾಮಿ, ಎಸ್​​.ಟಿ.ಸೋಮಶೇಖರ್, ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ಭಗವಂತ್ ಖೂಬಾ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಸೇರಿ ಹಲವರು ಭಾಗಿಯಾಗಲಿದ್ದಾರೆ.

ವಿಶ್ವ ಜ್ಯೋತಿ ಪುಸ್ತಕ ಬಿಡುಗಡೆ ಮಾಡಿದ ಸಚಿವ ಮಾಧುಸ್ವಾಮಿ

ಶಿವಕುಮಾರ ಸ್ವಾಮೀಜಿ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಚಿವ ಮಾಧುಸ್ವಾಮಿ ವಿಶ್ವ ಜ್ಯೋತಿ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಶಿವಕುಮಾರ ಶ್ರೀಗಳ ಕುರಿತ ಲೇಖನ ಸಂಗ್ರಹ ಪುಸ್ತಕ ಇದಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ