AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ ಕೈಯಿಂದ ಮಗನಿಗೆ ನಾಮಕರಣ ಮಾಡಿಸಿದ ಅಭಿಮಾನಿ; ತನ್ನ ಹೆಸರಿಟ್ಟು ಉಡುಗೊರೆ ಕೊಟ್ಟ ಸಿದ್ದು

ನಾನು ನಿಮ್ಮ ಅಭಿಮಾನಿ, ನೀವು ಮುಂದೆಯೂ ಸಿಎಂ ಆಗಬೇಕು. ನೀವು ದೀನದಲಿತರ ಆಶಾಕಿರಣ, ನಾನು ನಿಮ್ಮ ದೊಡ್ಡ ಅಭಿಮಾನಿ. ನನ್ನ ಮಗನಿಗೆ ಈ ವೇದಿಕೆಯಲ್ಲಿ ಸಿದ್ದರಾಮಯ್ಯ ಎಂದು ಹೆಸರು ನಾಮಕರಣ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಗಂಗಾಧರ ಮನವಿ ಮಾಡಿದ್ರು.

ತುಮಕೂರಿನ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ ಕೈಯಿಂದ ಮಗನಿಗೆ ನಾಮಕರಣ ಮಾಡಿಸಿದ ಅಭಿಮಾನಿ; ತನ್ನ ಹೆಸರಿಟ್ಟು ಉಡುಗೊರೆ ಕೊಟ್ಟ ಸಿದ್ದು
ಸಿದ್ದರಾಮಯ್ಯ
TV9 Web
| Edited By: |

Updated on:May 22, 2022 | 10:24 PM

Share

ತುಮಕೂರು: ಜಿಲ್ಲೆಯ ಬಾಲಭವನದಲ್ಲಿ ನಡೆದ ಜನಮನ ಪ್ರತಿಷ್ಠಾನ, ಸಿದ್ದರಾಮಯ್ಯ ಆಡಳಿತ, ಅಂತರಂಗ ಬಹಿರಂಗ ಗ್ರಂಥಾವಲೋಕನ ಸಂಕಿರಣ ಸಂವಾದ ಕಾರ್ಯಕ್ರಮದಲ್ಲಿ ತನ್ನ ಮಗನಿಗೆ ಸಿದ್ದರಾಮಯ್ಯ ಎಂದು ಹೆಸರು ಇಡಲು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿ ಮನವಿ ಮಾಡಿದ ಘಟನೆ ನಡೆದಿದೆ. ಸಂವಾದದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಅವರ ಅಭಿಮಾನಿಯೊಬ್ಬರು ತಮ್ಮ ಮಗನಿಗೆ ತಮ್ಮ ನೆಚ್ಚಿನ ನಾಯಕ ಸಿದ್ದರಾಮಯ್ಯ(Siddaramaiah) ಎಂದು ಹೆಸರು ಇಡುವಂತೆ ಮನವಿ ಮಾಡಿದ್ದಾರೆ.

ನಾನು ನಿಮ್ಮ ಅಭಿಮಾನಿ, ನೀವು ಮುಂದೆಯೂ ಸಿಎಂ ಆಗಬೇಕು. ನೀವು ದೀನದಲಿತರ ಆಶಾಕಿರಣ, ನಾನು ನಿಮ್ಮ ದೊಡ್ಡ ಅಭಿಮಾನಿ. ನನ್ನ ಮಗನಿಗೆ ಈ ವೇದಿಕೆಯಲ್ಲಿ ಸಿದ್ದರಾಮಯ್ಯ ಎಂದು ಹೆಸರು ನಾಮಕರಣ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಗಂಗಾಧರ ಮನವಿ ಮಾಡಿದ್ರು. ಈ ವೇಳೆ ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ಗಂಗಾಧರ ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿ 500 ರೂ ಉಡುಗೊರೆಯಾಗಿ ನೀಡಿದ್ರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತಿಪ್ಪಾಪುರ ಗ್ರಾಮದ ನಿವಾಸಿ ಗಂಗಾಧರ ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಬಂದಿದ್ದು ತಮ್ಮ ಮಗನಿಗೆ ಸಿದ್ದರಾಮಯ್ಯನವರ ಕೈಯಿಂದಲೇ ನಾಮಕರಣ ಮಾಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ನು ಈ ವೇಳೆ ಮಾತನಾಡಿರುವ ಸಿದ್ದರಾಮಯ್ಯ, ಸಂವಾದ ಏರ್ಪಾಡು ಮಾಡುವುದರಿಂದ ಜನರು ಪ್ರಶ್ನೆ ಕೇಳುತ್ತಾರೆ. ಅವರಿಗೆ ನಾವು ಉತ್ತರ ಕೊಡಲಾಗುತ್ತೆ. ಸಮಂಜಸವಾಗಿ ಉತ್ತರ ಕೊಟ್ಟಿದ್ದೇನೆ ಅಂದುಕೊಂಡಿದ್ದೇನೆ. ಅವರಿಗೆ ಖುಷಿಯಿದೆಯೋ ಇಲ್ವೋ ಗೊತ್ತಿಲ್ಲ ಎಂದರು. ಇದೇ ವೇಳೆ ಮಧುಗಿರಿ ಮೂಲದ ಮಗುವಿಗೆ ಸಿದ್ದರಾಮಯ್ಯ ಅಂತಾ ನಾಮಕರಣ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕುಟುಂಬಸ್ಥರು ಸಿದ್ದರಾಮಯ್ಯ ಅಂತಾ ಹೆಸರು ಇಟ್ಟಿದ್ದಾರೆ. ಆ ಮಗು ಉತ್ತಮ ಪ್ರಜೆಯಾಗಲಿ ಅಂತಾ ಆಶಿಸುತ್ತೇನೆ ಎಂದರು.

tmk Siddaramaiah naming

ತನ್ನ ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿಸಿದ ತಾಯಿ

Published On - 9:56 pm, Sun, 22 May 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ