AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ ಕೈಯಿಂದ ಮಗನಿಗೆ ನಾಮಕರಣ ಮಾಡಿಸಿದ ಅಭಿಮಾನಿ; ತನ್ನ ಹೆಸರಿಟ್ಟು ಉಡುಗೊರೆ ಕೊಟ್ಟ ಸಿದ್ದು

ನಾನು ನಿಮ್ಮ ಅಭಿಮಾನಿ, ನೀವು ಮುಂದೆಯೂ ಸಿಎಂ ಆಗಬೇಕು. ನೀವು ದೀನದಲಿತರ ಆಶಾಕಿರಣ, ನಾನು ನಿಮ್ಮ ದೊಡ್ಡ ಅಭಿಮಾನಿ. ನನ್ನ ಮಗನಿಗೆ ಈ ವೇದಿಕೆಯಲ್ಲಿ ಸಿದ್ದರಾಮಯ್ಯ ಎಂದು ಹೆಸರು ನಾಮಕರಣ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಗಂಗಾಧರ ಮನವಿ ಮಾಡಿದ್ರು.

ತುಮಕೂರಿನ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ ಕೈಯಿಂದ ಮಗನಿಗೆ ನಾಮಕರಣ ಮಾಡಿಸಿದ ಅಭಿಮಾನಿ; ತನ್ನ ಹೆಸರಿಟ್ಟು ಉಡುಗೊರೆ ಕೊಟ್ಟ ಸಿದ್ದು
ಸಿದ್ದರಾಮಯ್ಯ
TV9 Web
| Updated By: ಆಯೇಷಾ ಬಾನು|

Updated on:May 22, 2022 | 10:24 PM

Share

ತುಮಕೂರು: ಜಿಲ್ಲೆಯ ಬಾಲಭವನದಲ್ಲಿ ನಡೆದ ಜನಮನ ಪ್ರತಿಷ್ಠಾನ, ಸಿದ್ದರಾಮಯ್ಯ ಆಡಳಿತ, ಅಂತರಂಗ ಬಹಿರಂಗ ಗ್ರಂಥಾವಲೋಕನ ಸಂಕಿರಣ ಸಂವಾದ ಕಾರ್ಯಕ್ರಮದಲ್ಲಿ ತನ್ನ ಮಗನಿಗೆ ಸಿದ್ದರಾಮಯ್ಯ ಎಂದು ಹೆಸರು ಇಡಲು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿ ಮನವಿ ಮಾಡಿದ ಘಟನೆ ನಡೆದಿದೆ. ಸಂವಾದದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಅವರ ಅಭಿಮಾನಿಯೊಬ್ಬರು ತಮ್ಮ ಮಗನಿಗೆ ತಮ್ಮ ನೆಚ್ಚಿನ ನಾಯಕ ಸಿದ್ದರಾಮಯ್ಯ(Siddaramaiah) ಎಂದು ಹೆಸರು ಇಡುವಂತೆ ಮನವಿ ಮಾಡಿದ್ದಾರೆ.

ನಾನು ನಿಮ್ಮ ಅಭಿಮಾನಿ, ನೀವು ಮುಂದೆಯೂ ಸಿಎಂ ಆಗಬೇಕು. ನೀವು ದೀನದಲಿತರ ಆಶಾಕಿರಣ, ನಾನು ನಿಮ್ಮ ದೊಡ್ಡ ಅಭಿಮಾನಿ. ನನ್ನ ಮಗನಿಗೆ ಈ ವೇದಿಕೆಯಲ್ಲಿ ಸಿದ್ದರಾಮಯ್ಯ ಎಂದು ಹೆಸರು ನಾಮಕರಣ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಗಂಗಾಧರ ಮನವಿ ಮಾಡಿದ್ರು. ಈ ವೇಳೆ ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ಗಂಗಾಧರ ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿ 500 ರೂ ಉಡುಗೊರೆಯಾಗಿ ನೀಡಿದ್ರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತಿಪ್ಪಾಪುರ ಗ್ರಾಮದ ನಿವಾಸಿ ಗಂಗಾಧರ ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಬಂದಿದ್ದು ತಮ್ಮ ಮಗನಿಗೆ ಸಿದ್ದರಾಮಯ್ಯನವರ ಕೈಯಿಂದಲೇ ನಾಮಕರಣ ಮಾಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ನು ಈ ವೇಳೆ ಮಾತನಾಡಿರುವ ಸಿದ್ದರಾಮಯ್ಯ, ಸಂವಾದ ಏರ್ಪಾಡು ಮಾಡುವುದರಿಂದ ಜನರು ಪ್ರಶ್ನೆ ಕೇಳುತ್ತಾರೆ. ಅವರಿಗೆ ನಾವು ಉತ್ತರ ಕೊಡಲಾಗುತ್ತೆ. ಸಮಂಜಸವಾಗಿ ಉತ್ತರ ಕೊಟ್ಟಿದ್ದೇನೆ ಅಂದುಕೊಂಡಿದ್ದೇನೆ. ಅವರಿಗೆ ಖುಷಿಯಿದೆಯೋ ಇಲ್ವೋ ಗೊತ್ತಿಲ್ಲ ಎಂದರು. ಇದೇ ವೇಳೆ ಮಧುಗಿರಿ ಮೂಲದ ಮಗುವಿಗೆ ಸಿದ್ದರಾಮಯ್ಯ ಅಂತಾ ನಾಮಕರಣ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕುಟುಂಬಸ್ಥರು ಸಿದ್ದರಾಮಯ್ಯ ಅಂತಾ ಹೆಸರು ಇಟ್ಟಿದ್ದಾರೆ. ಆ ಮಗು ಉತ್ತಮ ಪ್ರಜೆಯಾಗಲಿ ಅಂತಾ ಆಶಿಸುತ್ತೇನೆ ಎಂದರು.

tmk Siddaramaiah naming

ತನ್ನ ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿಸಿದ ತಾಯಿ

Published On - 9:56 pm, Sun, 22 May 22

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್