Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambedkar Jayanti 2022: ಸಚಿವ, ಶಾಸಕ, ಡಿಸಿಎಂ ಆಗಿದ್ದರೂ ದೇಗುಲದೊಳಗೆ ಸೇರಿಸಲ್ಲ -ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬೇಸರ

Dalit: ದಲಿತ ಎಂಬ ಕಾರಣಕ್ಕೆ ದೇವಸ್ಥಾನದೊಳಗೆ ಬಿಟ್ಟುಕೊಳ್ಳಲ್ಲ ಎಂದು ಬಹಿರಂಗವಾಗಿಯೇ ಪರಮೇಶ್ವರ್ ಅವರು ತಮ್ಮ ಅಪಾರ ಬೇಸರ ಹೊರ ಹಾಕಿದರು. ಅದೂ ಡಾ. ಅಂಬೇಡ್ಕರ್ ಜಯಂತಿಯಲ್ಲಿ ಡಾ. ಪರಮೇಶ್ವರ್ ಹೀಗೆ ವಿಷಾದ ವ್ಯಕ್ತಪಡಿಸಿದ್ದು ಪರಿಸ್ಥಿತಿಯ ವ್ಯಂಗ್ಯವಾಗಿತ್ತು.

Ambedkar Jayanti 2022: ಸಚಿವ, ಶಾಸಕ, ಡಿಸಿಎಂ ಆಗಿದ್ದರೂ ದೇಗುಲದೊಳಗೆ ಸೇರಿಸಲ್ಲ -ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬೇಸರ
ಇಂದು ಡಾ. ಅಂಬೇಡ್ಕರ್​ ಜಯಂತಿ - ಸಚಿವ, ಶಾಸಕ, ಡಿಸಿಎಂ ಆಗಿದ್ರೂ ದೇಗುಲದೊಳಗೆ ಸೇರಿಸಲ್ಲ: ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬೇಸರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 14, 2022 | 6:13 PM

ತುಮಕೂರು: ದೇಶದಲ್ಲಿ ಸಮಾನತೆಗೆ ಸ್ಪಷ್ಟ ಭಾಷ್ಯ ಬರೆದ ಅಂದರೆ ಜಗತ್ತಿನಲ್ಲೇ ಅತ್ಯುತ್ತಮ ಸಂವಿಧಾನ ರೂಪಿಸಿ ಡಾ. ಬಿ ಆರ್​ ಅಂಬೇಡ್ಕರ್​ ಅವರ ಜನ್ಮ ದಿನದಂದೇ (Ambedkar jayanti or Bhim Jayanti) ಹಿರಿಯ ಕಾಂಗ್ರೆಸ್​ ನಾಯಕ ಡಾ ಜಿ. ಪರಮೇಶ್ವರ್ ಅವರು (Former DCM Dr G Parameshwara) ಅತ್ಯಂತ ಬೇಸರದ ಸಂಗತಿಯೊಂದನ್ನು ವಿಷಾದದ ದನಿಯಲ್ಲಿ ಹೊರಹಾಕಿದ್ದಾರೆ. ಮಾಜಿ ಸಚಿವ, ಶಾಸಕ, ಉಪ ಮುಖ್ಯಮಂತ್ರಿಯೇ ಆಗಿದ್ದರೂ ದೇಗುಲದೊಳಗೆ (Temple) ನನ್ನನ್ನು ಸೇರಿಸುವುದಿಲ್ಲ (Dalit) ಎಂದು ಕೊರಟಗೆರೆಯಲ್ಲಿ ಮಾಜಿ ಡಿಸಿಎಂ ಡಾ ಜಿ. ಪರಮೇಶ್ವರ್ ಬೇಸರ ವ್ತಕ್ತಪಡಿಸಿದ್ದಾರೆ.

ದಲಿತ ಎಂಬ ಕಾರಣಕ್ಕೆ ದೇವಸ್ಥಾನದೊಳಗೆ ಬಿಟ್ಟುಕೊಳ್ಳಲ್ಲ ಎಂದು ಬಹಿರಂಗವಾಗಿಯೇ ಪರಮೇಶ್ವರ್ ಅವರು ತಮ್ಮ ಅಪಾರ ಬೇಸರ ಹೊರ ಹಾಕಿದರು. ಅದೂ ಡಾ. ಅಂಬೇಡ್ಕರ್ ಜಯಂತಿಯಲ್ಲಿ ಡಾ. ಪರಮೇಶ್ವರ್ ಹೀಗೆ ವಿಷಾದ ವ್ಯಕ್ತಪಡಿಸಿದ್ದು ಪರಿಸ್ಥಿತಿಯ ವ್ಯಂಗ್ಯವಾಗಿತ್ತು. ಕೊರಟಗೆರೆ ಪಟ್ಟಣದ ಪಂಚಾಯಿತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇವಸ್ಥಾನಕ್ಕೆ‌ ಹೋದ್ರೆ ಸ್ವಲ್ಪ ಅಲ್ಲೇ ನಿಂತುಕೊಳ್ಳಿ ಅಂತಾರೆ! ಅಲ್ಲೇ ನಿಲ್ಲಿ ಎಂದು ಮಂಗಳಾರತಿ ತಟ್ಟೆ ತಂದು ಬಿಡ್ತಾರೆ. ದೇಗುಲದೊಳಗೆ ಬಂದು ಬಿಡ್ತೀನಿ ಅಂತಾ ಹೀಗೆ ಮಾಡ್ತಾರೆ. ಇಂಥ ಪರಿಸ್ಥಿತಿ ಈಗಲೂ ಸಮಾಜದಲ್ಲಿದೆ ಎಂದು ಹಿರಿಯ ನಾಯಕ ಜಿ. ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಬೇಸರ ವ್ಯಕ್ತಪಡಿಸಿದರು.

ಸಚಿವ, ಶಾಸಕ, ಡಿಸಿಎಂ ಆಗಿದ್ರೂ ದೇಗುಲದೊಳಗೆ ಸೇರಿಸಲ್ಲ ಎಂದ ಪರಮೇಶ್ವರ್

ಬಹಳಷ್ಟು ಜನ ಅಂಬೇಡ್ಕರ್ ಹೆಸರಲ್ಲಿ ಮೇಲೆ ಮೇಲೆ ಹೋಗಿದ್ದಾರೆ; ಉತ್ತಮ ಸ್ಥಾನ ಪಡೆದು, ಸಮಾಜವನ್ನ ಮರೆತಿದ್ದಾರೆ ಎಂದು ಬೆಂಗಳೂರಿನಲ್ಲಿ ಬೊಮ್ಮಾಯಿ ವಿಷಾದ: ಇಂದು (ಏಪ್ರಿಲ್ 14) ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ (ಭೀಮ್ ಜಯಂತಿ). ಇಂದು ಬಿ.ಆರ್ ಅಂಬೇಡ್ಕರ್ ಅವರ 131ನೇ ಜನುಮ ದಿನ. ಇದರ ಅಂಗವಾಗಿ ವಿಧಾನೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹಳಷ್ಟು ಜನ ಅಂಬೇಡ್ಕರ್ ಹೆಸರಲ್ಲಿ ಮೇಲೆ ಮೇಲೆ ಹೋಗಿದ್ದಾರೆ. ಉತ್ತಮ ಸ್ಥಾನಗಳನ್ನು ಪಡೆದು, ಸಮಾಜವನ್ನೇ ಮರೆತಿದ್ದಾರೆ. ಇವರೆಲ್ಲಾ ಪಟ್ಟಭದ್ರ ಹಿತಾಸಕ್ತರು. ಈ ಪಟ್ಟಭದ್ರ ಹಿತಾಸಕ್ತಿಗಳು ದೇಶವನ್ನು ಹಾಳು ಮಾಡ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದೂ ಓದಿ: ಬಹಳಷ್ಟು ಜನ ಅಂಬೇಡ್ಕರ್ ಹೆಸರಲ್ಲಿ ಮೇಲೆ ಮೇಲೆ ಹೋಗಿದ್ದಾರೆ; ಉತ್ತಮ ಸ್ಥಾನ ಪಡೆದು, ಸಮಾಜವನ್ನ ಮರೆತಿದ್ದಾರೆ -ಬೊಮ್ಮಾಯಿ ವಿಷಾದ

Published On - 3:53 pm, Thu, 14 April 22

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ