AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಮುಂದೆ ಗಲಾಟೆ ಮಾಡಿದ 24 ಗಂಟೆಯಲ್ಲೇ ಮಹಿಳೆಗೆ ಸಿಕ್ತು ನಿವೇಶನ!

ವಸತಿ ಯೋಜನೆಯಡಿ ಮನೆ ಸಿಗದ್ದಕ್ಕೆ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ತುಮಕೂರು ಕಾರ್ಯಕ್ರಮಕ್ಕೆ ನುಗ್ಗಿ ಮಹಿಳೆಯೋರ್ವಳು ರಂಪಾಟ ಮಾಡಿದ್ದಳು. ಇದೀಗ ಒಂದೇ ದಿನದಲ್ಲಿ ಮಹಿಳೆಗೆ ನಿವೇಶನ ಸಿಕ್ಕಿದೆ.

ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ|

Updated on: Dec 03, 2024 | 5:53 PM

Share

ತುಮಕೂರು, (ಡಿಸೆಂಬರ್ 03): ವಸತಿ ಯೋಜನೆಯಡಿ ಮನೆ ಸಿಗದ್ದಕ್ಕೆ ಆಕ್ರೋಶಗೊಂಡು ಸಿಎಂ ಸಿದ್ದರಾಮಯ್ಯ ಮುಂದೆ ರಂಪಾಟ ಮಾಡಿದ್ದ ಮಹಿಳೆಗೆ ಇದೀಗ ನಿವೇಶನ ಸಿಕ್ಕಿದೆ. ಶಿರಾ ನಗರದ ರಾಬಿಯಾ ಎನ್ನುವ ಮಹಿಳೆ, ನಿನ್ನೆ(ಡಿಸೆಂಬರ್ 02) ತುಮಕೂರು ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆ ಮನೆಗಾಗಿ ಗೋಳಾಡುತ್ತ ಅಳಲು ತೋಡಿಕೊಂಡಿದ್ದರು. ಇದಕ್ಕೆ ಸಿಎಂ ಸಹ ಸ್ಪಂದನೆ ಮಾಡಿದ್ದರು. ಈ ಘಟನೆ ನಡೆದು 24 ಗಂಟೆಯಲ್ಲೇ ರಾಬಿಯಾಗೆ ನಿವೇಶನ ಮಂಜೂರು ಮಾಡಲಾಗಿದೆ. ಮಹಿಳೆ ಗಲಾಟೆ ಬೆನ್ನಲ್ಲೇ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ ಹಾಗೂ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಿವೇಶನ ಪತ್ರ ಹಂಚಿಕೆ ಮಾಡಲಾಗಿದೆ.

ಶಿರಾ‌ ಆಶ್ರಮ ಸಮಿತಿಯಲ್ಲಿ ಮಹಿಳೆ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಿ ನಗರದ ಸರ್ವೇ ನಂ.100ರಲ್ಲಿ ನಗರ ಆಶ್ರಯ ಯೋಜನೆಯಡಿ ರಚಿಸಲಾಗಿರುವ ನಿವೇಶನಗಳ ಪೈಕಿ 20*30 ಅಳತೆಯ ನಿವೇಶನ ಹಂಚಿಕೆ ಮಾಡಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದಡಿ ಸೈಟ್ ಮಂಜೂರು ಮಾಡಿ ಶಿರಾ ನಗರಸಭಾ ಕಾರ್ಯಾಲಯ ಅಧಿಕೃತ ಆದೇಶ ಹೊರಡಿಸಿದ್ದು, ಮುಂದಿನ ದಿನಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದೊಂದಿಗೆ ಅರ್ಜಿದಾರರ ದಾಖಲೆ‌ ಸಲ್ಲಿಸಿ ನಿಯಮಾನುಸಾರ ಹಕ್ಕುಪತ್ರ ವಿತರಿಸಲಾಗುತ್ತದೆ.

ಸಿಎಂ ಕಾರ್ಯಕ್ರಮದಲ್ಲಿ ಮಹಿಳೆ ಮಾಡಿದ್ದೇನು?

ಸ್ಲಂ ಬೋರ್ಡ್ ನಿಂದ ಮನೆಗಾಗಿ ಅರ್ಜಿ ಹಾಕಿದ್ದರು. ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳನ್ನ ಭೇಟಿ ಮಾಡಿದ್ದರೂ ಮನೆ ಇನ್ನೂ ಮಂಜೂರು ಆಗಿರಲಿಲ್ಲ. ಸಾಲದ್ದಕ್ಕೆ ಶಿರಾ ಶಾಸಕ ಟಿಬಿ ಜಯಚಂದ್ರ ಗಮನಕ್ಕೆ ತಂದರೂ ಪ್ರಯೋಜನವಾಗಿರಲಿಲ್ಲ. ಇದೆಲ್ಲದರಿಂದ ಬೇಸತ್ತು ಮೂರು ವರ್ಷದ ಮಗು ಎತ್ತಿಕೊಂಡು ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಸಿಎಂ ಸಿದ್ದರಾಮಯ್ಯನವರ ಕಾರ್ಯಕ್ರಮಕ್ಕೆ ಬಂದಿದ್ದಳು. ಕಾರ್ಯಕ್ರಮ ಮುಗಿದು ಸಿಎಂ ಸಿದ್ದರಾಮಯ್ಯ ಹೊಡುವಾಗ ಈ ಮಹಿಳೆ ಕೂಗಾಡಿದ್ದಳು.

ಪ್ರತಿವರ್ಷವೂ ಅರ್ಜಿ ಸಲ್ಲಿಸುತ್ತಾ ಬಂದಿದ್ದೇನೆ, ಇವತ್ತಿನವರೆಗೂ ಮನೆ ಮಂಜೂರು ಮಾಡುತ್ತಿಲ್ಲ ಎಂದು ರಾಬಿಯಾ ಸಿಎಂ ಮುಂದೆ ಸಮಸ್ಯೆ ಹೇಳಿಕೊಳ್ಳಲು ವೇದಿಕೆಯತ್ತ ಓಡಿ ಹೋಗಿದ್ದಳು. ಈ ವೇಳೆ ಮಹಿಳೆಯನ್ನು ಪೊಲೀಸರು ತಡೆದಿದ್ದರು. ಇದರಿಂದ.ಮತ್ತಷ್ಟು ಆಕ್ರೋಶಗೊಂಡ ರಾಬಿಯಾ, ನಮ್ಮ ಸರ್ಕಾರ ಮಹಿಳೆಯರ ಪರ ಅಂತೀರಾ, ಬಡವರ ಪರ ಅಂತೀರಾ ಆದರೆ ಸಮಸ್ಯೆ ಹೇಳಿಕೊಳ್ಳಲು ಬಂದ್ರೆ ನಮ್ಮನ್ನ ನಿಮ್ಮ ಬಳಿ ಬಿಡಲ್ಲ ಎಂದು ಪೊಲೀಸರ ವಿರುದ್ಧ ಕೂಗಾಡಿದ್ದಳು. ಮಹಿಳೆಯ ಕೂಗಾಟ ಕಂಡು ಓಡೋಡಿ ಬಂದ ಪರಮೇಶ್ವರ್ ಸಮಧಾನಪಡಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯ ಸಮಸ್ಯೆ ಆಲಿಸಿ, ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು. ಅದರಂತೆ ಇದೀಗ ಒಂದೇ ದಿನದಲ್ಲಿ ರಾಬಿಯಾಗೆ ನಿವೇಶನ ಸಿಕ್ಕಿದೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ