AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆಗೆ ಮನೆಗಳಿಗೆ ನುಗ್ಗುತ್ತಿರುವ ಹಾವುಗಳು; ದೇವರ ಮನೆಯಲ್ಲಿ ಕೊಳಕು ಮಂಡಲ ಕಂಡು ಬೆಚ್ಚಿಬಿದ್ದ ಮನೆ ಮಂದಿ

ಕೊಳಕು ಮಂಡಲ ಹಾವು ಬಂದಿರುವುದರಿಂದ ಮನೆಯವರಿಗೆ ತೀವ್ರ ಆತಂಕ ಮೂಡಿಸಿದೆ. ಸದ್ಯ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ವಾರಂಗಲ್ ವನ್ಯಜೀವಿ ಸಂಸ್ಥೆಯವರು ಕೊಳಕು ಮಂಡಲ ಹಾವನ್ನು ರಕ್ಷಿಸಿ, ಹತ್ತಿರದ ದೇವರಾಯನದುರ್ಗ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ನಿರಂತರ ಮಳೆಗೆ ಮನೆಗಳಿಗೆ ನುಗ್ಗುತ್ತಿರುವ ಹಾವುಗಳು; ದೇವರ ಮನೆಯಲ್ಲಿ ಕೊಳಕು ಮಂಡಲ ಕಂಡು ಬೆಚ್ಚಿಬಿದ್ದ ಮನೆ ಮಂದಿ
ದೇವರ ಮನೆಯಲ್ಲಿ ಹಾವು ಪ್ರತ್ಯಕ್ಷ
Follow us
TV9 Web
| Updated By: preethi shettigar

Updated on:Nov 26, 2021 | 8:58 AM

ತುಮಕೂರು: ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಮಳೆಯಿಂದ ಕೆರೆ, ಕುಂಟೆ, ಹಳ್ಳ, ನದಿ, ಜಲಾಶಯಗಳು ತುಂಬಿ ಹರಿಯುತ್ತಿವೆ. ಇದರಿಂದ ರೈತರು ಒಂದು ಕಡೆ ಖುಷಿಯಾದರೇ ಮತ್ತೊಂದು ಕಡೆ ಮನೆಗಳಿಗೆ ಹಾವುಗಳು (Snakes) ನುಗ್ಗುತ್ತಿದ್ದು ಇದರಿಂದ ಜನರು ಭಯಬೀತರಾಗಿದ್ದಾರೆ. ಮನೆಗಳ ಕಾಂಪೌಂಡ್​ಗಳಲ್ಲಿ, ಗೋಡೆಗಳಲ್ಲಿ, ಮನೆಗಳ ಒಳಗಡೆ ಅದರಲ್ಲೂ ದೇವರ ಮನೆಯಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿದ್ದು, ಇದರಿಂದ ಜನರು ತೀವ್ರ ಭಯಬೀತರಾಗಿದ್ದಾರೆ. ಸದ್ಯ ತುಮಕೂರು ಹೊರವಲಯದ ಶಿರಾ ಗೇಟ್ ಬಳಿಯಿರುವ ಗೋಪಾಲಕೃಷ್ಣ ರವರ ಮನೆಯಲ್ಲಿ ಐದು ಅಡಿ ಉದ್ದದ ಕೊಳಕು ಮಂಡಲ ಹಾವೊಂದು ಪ್ರತ್ಯಕ್ಷವಾಗಿದೆ.

ಅದು ಕೂಡ ಮನೆಯ ದೇವರ ಕೋಣೆಯಲ್ಲಿ ಹಾವು ಪ್ರತ್ಯಕ್ಷವಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಾಣವಾಗಿದೆ. ಸಹಜವಾಗಿ ದೇವರ ಕೋಣೆಯಲ್ಲಿ ನಾಗರಹಾವುಗಳು ಸಿಗುವುದು ಕೇಳಿದ್ದೇವೆ. ಆಗ ಅದನ್ನು ದೇವರು ಅಂತಾ ಮನೆಯವರು ಪೂಜಿಸಿ ಹೊರಗಡೆ ಬಿಡುತ್ತಿದ್ದರು. ಆದರೆ ಕೊಳಕು ಮಂಡಲ ಹಾವು ಬಂದಿರುವುದರಿಂದ ಮನೆಯವರಿಗೆ ತೀವ್ರ ಆತಂಕ ಮೂಡಿಸಿದೆ. ಸದ್ಯ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ವಾರಂಗಲ್ ವನ್ಯಜೀವಿ ಸಂಸ್ಥೆಯವರು ಕೊಳಕು ಮಂಡಲ ಹಾವನ್ನು ರಕ್ಷಿಸಿ, ಹತ್ತಿರದ ದೇವರಾಯನದುರ್ಗ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ಬೆಂಗಳೂರು: ವರುಣನ ಅವಾಂತರದ ಮಧ್ಯೆ ಮೀನನ್ನು ನುಂಗಿನೀರು ಕುಡಿದ ಹಾವು ಅಕಾಲಿಕ ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿದ್ದಾರೆ. ಬೆಂಗಳೂರಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ. ಈ ನಡುವೆ ಇನ್ನೂ 2 ದಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಧಾರಾಕಾರ ಮಳೆಗೆ ರಸ್ತೆಗಳೇ ಕೆರೆಗಳಂತಾಗಿವೆ. ಹುಳ, ಹಪಟೆಗಳು ಮನೆ ಹೊಕ್ಕಿವೆ. ಅಂತೆಯೇ ಭಾರೀ ಮಳೆಗೆ ಸಿಂಗಾಪುರ ಕೆರೆ ಕೋಡಿ ಒಡೆದ ಪರಿಣಾಮ ಸಮೀಪದ ಲೇಔಟ್​ಗೆ ನೀರು ಸತತವಾಗಿ ನುಗ್ಗುತ್ತಿದೆ. ಈ ಅವಾಂತರದ ಮಧ್ಯೆ ಮೀನನ್ನು ಹಾವೊಂದು ನುಂಗಿದೆ. ಸದ್ಯ ಮೀನು ನುಂಗುತ್ತಿರುವ ದೃಶ್ಯ ನೋಡಿ ಸ್ಥಳೀಯ ನಿವಾಸಿಗಳು ಹೌಹಾರಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಬೆಂಗಳೂರಿನ ಸಿಂಗಪೂರ್ ಕಾಲೊನಿಯಲ್ಲಿ  ಮಳೆನೀರಿನ ಜೊತೆ ಹಾವುಗಳೂ ಹರಿದು ಬರುತ್ತಿವೆ!

ತುಮಕೂರು: ಬಲೆಗೆ ಸಿಲುಕಿ ಒದ್ದಾಡುತ್ತಿದ್ದ ಏಳು ಅಡಿ ಉದ್ದದ ಕೆರೆ ಹಾವು ರಕ್ಷಣೆ

Published On - 8:23 am, Fri, 26 November 21

VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ