AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ

ತುಮಕೂರಿನಲ್ಲಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನುಮತಿಯಿಲ್ಲದೆ ಸ್ಫೋಟಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಅವರನ್ನು ಮಧುಗಿರಿ ಜೆಎಂಎಫ್‌ಸಿ ನ್ಯಾಯಾಲಯವು ಡಿಸೆಂಬರ್ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ತನಿಖೆ ಮುಂದುವರಿಸುತ್ತಿದ್ದಾರೆ.

ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ
ಡ್ರೋನ್​ ಪ್ರತಾಪ್​
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Dec 16, 2024 | 12:17 PM

Share

ತುಮಕೂರು, ಡಿಸೆಂಬರ್​ 16: ಕೃಷಿ ಹೊಂಡಕ್ಕೆ ಸೋಡಿಯಂ (Sodium) ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ (Drone Pratap) ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್​ ಪ್ರತಾಪ್​ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು.

ತುಮಕೂರು ‌ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ಡ್ರೋನ್​ ಪ್ರತಾಪ್​ ಅವರನ್ನು ಕಳೆದ ಗುರುವಾರ (ಡಿಸೆಂಬರ್​ 12) ಮಿಡಿಗೇಶಿ ಪೊಲೀಸರ ಬಂಧಿಸಿದ್ದರು. ಬಳಿಕ, ಪೊಲೀಸರು ಡ್ರೋನ್​ ಪ್ರತಾಪ್​ನನ್ನು ಶುಕ್ರವಾರ (ಡಿಸೆಂಬರ್​ 13) ರಂದು ‌ಮಧುಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಿದ್ದರು.

ಸೋಮವಾರ (ಡಿ.16) ಪೊಲೀಸ್​ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್​ ಪ್ರತಾಪ್​ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಪ್ರಕರಣ ಸಂಬಂಧ ಡ್ರೋನ್​ ಪ್ರತಾಪ್​ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Mon, 16 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್