AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ

ತುಮಕೂರಿನಲ್ಲಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನುಮತಿಯಿಲ್ಲದೆ ಸ್ಫೋಟಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಅವರನ್ನು ಮಧುಗಿರಿ ಜೆಎಂಎಫ್‌ಸಿ ನ್ಯಾಯಾಲಯವು ಡಿಸೆಂಬರ್ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ತನಿಖೆ ಮುಂದುವರಿಸುತ್ತಿದ್ದಾರೆ.

ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ
ಡ್ರೋನ್​ ಪ್ರತಾಪ್​
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Dec 16, 2024 | 12:17 PM

Share

ತುಮಕೂರು, ಡಿಸೆಂಬರ್​ 16: ಕೃಷಿ ಹೊಂಡಕ್ಕೆ ಸೋಡಿಯಂ (Sodium) ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ (Drone Pratap) ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್​ ಪ್ರತಾಪ್​ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು.

ತುಮಕೂರು ‌ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ಡ್ರೋನ್​ ಪ್ರತಾಪ್​ ಅವರನ್ನು ಕಳೆದ ಗುರುವಾರ (ಡಿಸೆಂಬರ್​ 12) ಮಿಡಿಗೇಶಿ ಪೊಲೀಸರ ಬಂಧಿಸಿದ್ದರು. ಬಳಿಕ, ಪೊಲೀಸರು ಡ್ರೋನ್​ ಪ್ರತಾಪ್​ನನ್ನು ಶುಕ್ರವಾರ (ಡಿಸೆಂಬರ್​ 13) ರಂದು ‌ಮಧುಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಿದ್ದರು.

ಸೋಮವಾರ (ಡಿ.16) ಪೊಲೀಸ್​ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್​ ಪ್ರತಾಪ್​ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಪ್ರಕರಣ ಸಂಬಂಧ ಡ್ರೋನ್​ ಪ್ರತಾಪ್​ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Mon, 16 December 24

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ