ತುಮಕೂರು: ವಾಯವ್ಯ ಸಾರಿಗೆ ಬಸ್​ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು, 6 ಜನರಿಗೆ ಗಾಯ

ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ವಾಯವ್ಯ ಸಾರಿಗೆ ಬಸ್ ಮೇಲೆ ತುಮಕೂರು ಜಿಲ್ಲೆಯ ಶಿರಾ ಟೋಲ್ ಬಳಿ ತಡರಾತ್ರಿ 1:20 ರ ಸುಮಾರಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಬಸ್​​​ನ ಮುಂಭಾಗದ ಗಾಜು ಸಂಪೂರ್ಣ ಪುಡಿಪುಡಿಯಾಗಿದೆ. ಕಲ್ಲು ತೂರಾಟದಿಂದಾಗಿ 5-6 ಪ್ರಯಾಣಿಕರಿಗೆ ಗಾಯಗಳಾಗಿವೆ.

ತುಮಕೂರು: ವಾಯವ್ಯ ಸಾರಿಗೆ ಬಸ್​ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು, 6 ಜನರಿಗೆ ಗಾಯ
ಬಸ್​ ಮೇಲೆ ಕಲ್ಲು ತೂರಾಟ
ಮಹೇಶ್ ಇ, ಭೂಮನಹಳ್ಳಿ Edited By: ವಿವೇಕ ಬಿರಾದಾರ

Updated on: Feb 19, 2024 | 11:58 AM

ತುಮಕೂರು, ಫೆಬ್ರವರಿ 19: ವಾಯವ್ಯ ಸಾರಿಗೆ ಬಸ್ (NWKRTC)​ ಮೇಲೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಶಿರಾ ಟೋಲ್ (Sira Toll)​ ಬಳಿ ತಡರಾತ್ರಿ ಘಟನೆ ನಡೆದಿದೆ. ಬಸ್ ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿತ್ತು. ತಡರಾತ್ರಿ 1:20 ರ ಸುಮಾರಿಗೆ ಮಾರ್ಗ ಮಧ್ಯೆ ಶಿರಾ ಟೋಲ್​ ಬಳಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಬಸ್​​​ನ ಮುಂಭಾಗದ ಗಾಜು ಸಂಪೂರ್ಣ ಪುಡಿಪುಡಿಯಾಗಿದೆ. ಕಲ್ಲು ತೂರಾಟದಿಂದಾಗಿ 5-6 ಪ್ರಯಾಣಿಕರಿಗೆ ಗಾಯಗಳಾಗಿವೆ. ದೃಷ್ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೆಂಗಳೂರು ಪೊಲೀಸರಿಗೆ ಟ್ಯಾಗ್​​ ಮಾಡಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಶಿರಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us