AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಕಲಬೆರಕೆ ಮಾಡಿದವರ ವಿರುದ್ಧ ಕಠಿಣಕ್ರಮ: ಕೆ.ಎನ್.ರಾಜಣ್ಣ

ಹಾಲಿನಲ್ಲಿ ಕಲಬೆರಕೆ ವಿಚಾರ ತಿಳಿದು ನನಗೆ ಬಹಳ ನೋವು ತಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಹಾಲು ಕಲಬೆರಕೆ ಮಾಡಿದವರ ವಿರುದ್ಧ ಕಠಿಣಕ್ರಮ: ಕೆ.ಎನ್.ರಾಜಣ್ಣ
ಸಹಕಾರ ಇಲಾಖೆ ಸಚಿವ ಕೆಎನ್ ರಾಜಣ್ಣ
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi|

Updated on:Aug 04, 2023 | 4:36 PM

Share

ತುಮಕೂರು, ಆಗಸ್ಟ್ 4: ಹಾಲು ಕಲಬೆರಕೆ ವಿಚಾರ ತಿಳಿದು ನನಗೆ ಬಹಳ ನೋವು ತಂದಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ (KN Rajanna) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ನಂದಿನಿ ಹಾಲು ಹೊರತಾಗಿ ಬೇರೆ ಎಲ್ಲವೂ ಸ್ಲೋ ಪಾಯ್ಸನ್ ಆಗಿದೆ. ತುಮಕೂರು ಪಾಲಿಕೆ ಕಮಿಷನರ್​ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಸಿಂಥೆಟಿಕ್ ಹಾಲು ಅದು, ಎಷ್ಟು ದಿನ ಇಟ್ಟರೂ ಏನೂ ಆಗುವುದಿಲ್ಲ. ಕಲಬೆರಕೆ ಕುರಿತು ಱಂಡಮ್, ಗುಣಮಟ್ಟದ ಪರೀಕ್ಷೆ ಮಾಡಬೇಕು. ಹಾಲು ಕಲಬೆರಕೆ ಮಾಡಿದವರ ವಿರುದ್ಧ ಕಠಿಣಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: Nandini Ghee: ಸಭೆ ನಡೆಸಿ ನಂದಿನಿ ತುಪ್ಪದ ದರ ಕುರಿತು ಚರ್ಚಿಸೋಣ: ಟಿಟಿಡಿಗೆ ಪತ್ರ ಬರೆದ ಕೆಎಂಎಫ್​

ಹಾಲು ಉತ್ಪಾದಕ ರೈತರಿಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರಿಂದ ಹಾಲಿನ ಉತ್ಪಾದನೆ ಮತ್ತಷ್ಟು ಹೆಚ್ಚಾಗಲಿದೆ. ತುಪ್ಪವೂ ಹೆಚ್ಚಾಗಬಹುದು. ಪ್ರಸ್ತುತ ಸಂದರ್ಭದಲ್ಲಿ ಕೆಎಂಎಫ್​​ನಲ್ಲಿ ತುಪ್ಪದ ಶೇಖರಣೆ ಕಡಿಮೆ ಇದೆ. ತುಪ್ಪದ ಶೇಖರಣೆ ಹೆಚ್ಚಾದರೆ ತಿರುಪತಿ ದೇಗುಲಕ್ಕೂ ಕೊಡಬಹುದು. ಶೇಖರಣೆ ಇಲ್ಲದಿದ್ದರೆ ಎಲ್ಲಿಂದ ಕೊಡುವುದು ಎಂದು ಸಚಿವರು ಪ್ರಶ್ನಿಸಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಹಾಲಿನ ಪುಡಿಗಳ ಪೂರೈಕೆ ಆಗುತ್ತಿಲ್ಲ. ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಗಳ ಪೂರೈಕೆ ಸ್ಥಗಿತವಾಗಿದೆ. ಕಲಬುರಗಿಯಲ್ಲಿ ಕ್ಷೀರಭಾಗ್ಯ ಯೋಜನೆ ನಿರೀಕ್ಷೆಗೆ ತಕ್ಕಂತೆ ಯಶಸ್ವಿಯಾಗಿಲ್ಲ ಎಂದು ಸಹಕಾರ ಇಲಾಖೆ ಸಚಿವರು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Fri, 4 August 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!