ಹಾಲು ಕಲಬೆರಕೆ ಮಾಡಿದವರ ವಿರುದ್ಧ ಕಠಿಣಕ್ರಮ: ಕೆ.ಎನ್.ರಾಜಣ್ಣ

ಹಾಲಿನಲ್ಲಿ ಕಲಬೆರಕೆ ವಿಚಾರ ತಿಳಿದು ನನಗೆ ಬಹಳ ನೋವು ತಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಹಾಲು ಕಲಬೆರಕೆ ಮಾಡಿದವರ ವಿರುದ್ಧ ಕಠಿಣಕ್ರಮ: ಕೆ.ಎನ್.ರಾಜಣ್ಣ
ಸಹಕಾರ ಇಲಾಖೆ ಸಚಿವ ಕೆಎನ್ ರಾಜಣ್ಣ
Follow us
| Updated By: Rakesh Nayak Manchi

Updated on:Aug 04, 2023 | 4:36 PM

ತುಮಕೂರು, ಆಗಸ್ಟ್ 4: ಹಾಲು ಕಲಬೆರಕೆ ವಿಚಾರ ತಿಳಿದು ನನಗೆ ಬಹಳ ನೋವು ತಂದಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ (KN Rajanna) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ನಂದಿನಿ ಹಾಲು ಹೊರತಾಗಿ ಬೇರೆ ಎಲ್ಲವೂ ಸ್ಲೋ ಪಾಯ್ಸನ್ ಆಗಿದೆ. ತುಮಕೂರು ಪಾಲಿಕೆ ಕಮಿಷನರ್​ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಸಿಂಥೆಟಿಕ್ ಹಾಲು ಅದು, ಎಷ್ಟು ದಿನ ಇಟ್ಟರೂ ಏನೂ ಆಗುವುದಿಲ್ಲ. ಕಲಬೆರಕೆ ಕುರಿತು ಱಂಡಮ್, ಗುಣಮಟ್ಟದ ಪರೀಕ್ಷೆ ಮಾಡಬೇಕು. ಹಾಲು ಕಲಬೆರಕೆ ಮಾಡಿದವರ ವಿರುದ್ಧ ಕಠಿಣಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: Nandini Ghee: ಸಭೆ ನಡೆಸಿ ನಂದಿನಿ ತುಪ್ಪದ ದರ ಕುರಿತು ಚರ್ಚಿಸೋಣ: ಟಿಟಿಡಿಗೆ ಪತ್ರ ಬರೆದ ಕೆಎಂಎಫ್​

ಹಾಲು ಉತ್ಪಾದಕ ರೈತರಿಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರಿಂದ ಹಾಲಿನ ಉತ್ಪಾದನೆ ಮತ್ತಷ್ಟು ಹೆಚ್ಚಾಗಲಿದೆ. ತುಪ್ಪವೂ ಹೆಚ್ಚಾಗಬಹುದು. ಪ್ರಸ್ತುತ ಸಂದರ್ಭದಲ್ಲಿ ಕೆಎಂಎಫ್​​ನಲ್ಲಿ ತುಪ್ಪದ ಶೇಖರಣೆ ಕಡಿಮೆ ಇದೆ. ತುಪ್ಪದ ಶೇಖರಣೆ ಹೆಚ್ಚಾದರೆ ತಿರುಪತಿ ದೇಗುಲಕ್ಕೂ ಕೊಡಬಹುದು. ಶೇಖರಣೆ ಇಲ್ಲದಿದ್ದರೆ ಎಲ್ಲಿಂದ ಕೊಡುವುದು ಎಂದು ಸಚಿವರು ಪ್ರಶ್ನಿಸಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಹಾಲಿನ ಪುಡಿಗಳ ಪೂರೈಕೆ ಆಗುತ್ತಿಲ್ಲ. ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಗಳ ಪೂರೈಕೆ ಸ್ಥಗಿತವಾಗಿದೆ. ಕಲಬುರಗಿಯಲ್ಲಿ ಕ್ಷೀರಭಾಗ್ಯ ಯೋಜನೆ ನಿರೀಕ್ಷೆಗೆ ತಕ್ಕಂತೆ ಯಶಸ್ವಿಯಾಗಿಲ್ಲ ಎಂದು ಸಹಕಾರ ಇಲಾಖೆ ಸಚಿವರು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Fri, 4 August 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?