AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಪರಮೇಶ್ವರ್​ಗೆ ಸಿಎಂ ಸ್ಥಾನ ಸಿಗಲಿ ಎಂದು ಪರೋಕ್ಷವಾಗಿ ನುಡಿದ ಎಲೆರಾಂಪುರ ಮಠದ ಸ್ವಾಮೀಜಿ

ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ‌ನಡೆದ ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ನನಗೂ ಒಂದು ಆಸೆ ಇದೆ, ನಮ್ಮ ಜಿಲ್ಲೆಗೆ ಸಿಎಂ ಸ್ಥಾನ ಬರುವ ದಿನಗಳು ಬರಲಿ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮಿಜೀ ಅವರು ಪರೋಕ್ಷವಾಗಿ ನುಡಿದಿದ್ದಾರೆ.

ಗೃಹ ಸಚಿವ ಪರಮೇಶ್ವರ್​ಗೆ ಸಿಎಂ ಸ್ಥಾನ ಸಿಗಲಿ ಎಂದು ಪರೋಕ್ಷವಾಗಿ ನುಡಿದ ಎಲೆರಾಂಪುರ ಮಠದ ಸ್ವಾಮೀಜಿ
ಗೃಹ ಸಚಿವ ಪರಮೇಶ್ವರ್​ಗೆ ಸಿಎಂ ಸ್ಥಾನ ಸಿಗಲಿ ಎಂದು ನುಡಿದ ಸ್ವಾಮೀಜಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Oct 03, 2024 | 1:31 PM

Share

ತುಮಕೂರು‌, ಅ.03: ಸಿಎಂ ಸಿದ್ದರಾಮಯ್ಯಗೆ (Siddaramaiah) ಮುಡಾ ಕೇಸ್ (MUDA Case) ಸಂಕಷ್ಟ ತಂದಿಟ್ಟಿದೆ. ಸಿಎಂ ರಾಜೀನಾಮೆ ನೀಡಲೇ ಬೇಕು ಎಂದು ವಿಪಕ್ಷ ಒತ್ತಾಯಿಸುತ್ತಿದೆ. ಇದರ ನಡುವೆ ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ್‌ (Dr G Parameshwar) ಅವರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಇತ್ತ ಪರಮೇಶ್ವರ್ ಗೆ ಸಿಎಂ ಸ್ಥಾನ ಸಿಗಲಿ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮಿಜೀ ಅವರು ದಸರಾ ವೇದಿಕೆ ಮೇಲೆ ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ.

ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ‌ನಡೆದ ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ಸಿಎಂ ಖುರ್ಚಿಗಾಗಿ ಕೂಗು ಎದ್ದಿದೆ. ನನಗೂ ಒಂದು ಆಸೆ ಇದೆ, ನಮ್ಮ ಜಿಲ್ಲೆಗೆ ಸಿಎಂ ಸ್ಥಾನ ಬರುವ ದಿನಗಳು ಬರಲಿ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮಿಜೀ ಅವರು ಪರೋಕ್ಷವಾಗಿ ನುಡಿದಿದ್ದಾರೆ.

ಪರಮೇಶ್ವರ್ ಹೆಸರೇಳದೇ ಜಿಲ್ಲೆಗೆ ಸಿಎಂ ಸ್ಥಾನ ಸಿಗಲಿ ಎಂದಿದ್ದಾರೆ. ನಮ್ಮ ಜಿಲ್ಲೆಗೆ ಒಂದು ಅವಕಾಶ ಸಿಗಲಿ ಎಂದು ಸಿಎಂ ಸ್ಥಾನಕ್ಕೆ ಪರಮೇಶ್ವರ್ ಹೆಸರು ಸೂಚಿಸಿದ್ದಾರೆ. ನಮ್ಮ ಜಿಲ್ಲೆಗೂ ಸಿಎಂ ಸ್ಥಾನ ಒದಗಿ ಬರಲಿ, ಯಾರು ಕೂಡ ತಪ್ಪಾಗಿ ಅರ್ಥಮಾಡಿಕೊಳ್ಳಬೇಡಿ. ನಮ್ಮ ಜಿಲ್ಲೆ ಕೂಡ ಸಾಕಷ್ಟು ಕೊಡುಗೆ ಕೊಟ್ಟಿದೆ ಎಂದು ಪರಮೇಶ್ವರ್ ಪಕ್ಕದಲ್ಲಿ ನಿಂತುಕೊಂಡೇ ಸ್ವಾಮಿಜಿ ಹೇಳಿದ್ದಾರೆ.

ಇದನ್ನೂ ಓದಿ: ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!

ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಪರಮೇಶ್ವರ ಭೂ ಬಾಂಬ್

ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣಭೈರೇಗೌಡ ಮತ್ತು ಸತೀಶ್ ಜಾರಕಿಹೊಳಿ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ಲೊಟ್ಟೆಗೊಲ್ಲಹಳ್ಳಿ ಸರ್ವೆ ನಂಬರ್ 10/1 ರಲ್ಲಿ 32 ಗುಂಟೆ ಜಮೀನನ್ನು ಬಿಡಿಎ ನೋಟಿಫೈ ಮಾಡಿತ್ತು. 1977 ಫೆಬ್ರವರಿಯಲ್ಲಿ ಬಿಡಿಎ ಭೂಸ್ವಾಧೀನಕ್ಕೆ ಮೊದಲ ನೊಟಿಫಿಕೇಷನ್ ಹೊರಡಿಸಿತ್ತು. 26 ಫೆಬ್ರವರಿ 2003ರಲ್ಲಿ ಹಾಗೂ 2007ರಲ್ಲಿ ಈ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್